AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್ ಪಡೆದ ಶರದ್ ಪವಾರ್

ಎನ್​ಸಿಪಿ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಪಕ್ಷದ ಸಮಿತಿ ತಿರಸ್ಕರಿಸಿದ ಹಿನ್ನೆಲೆ ಶರದ್ ಪವಾರ್ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್ ಪಡೆದ ಶರದ್ ಪವಾರ್
ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್ ಪಡೆದ ಶರದ್ ಪವಾರ್
Rakesh Nayak Manchi
Rakesh Nayak Manchi|

Updated on:May 05, 2023 | 6:19 PM

Share

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಶರದ್ ಪವಾರ್ (Sharad Pawar) ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಶರದ್ ಪವಾರ್ ನೀಡಿದ ರಾಜೀನಾಮೆಯನ್ನು ತಿರಸ್ಕರಿಸಿದ ಪಕ್ಷದ ಸಮಿತಿ, ಪಕ್ಷದ ನಾಯಕತ್ವವನ್ನು ಮುಂದುವರಿಸಲು ಪವಾರ್ ಅವರನ್ನು ವಿನಂತಿಸುವ ಪ್ರಸ್ತಾಪವನ್ನು ಅಂಗೀಕರಿಸಿತ್ತು.

ಶರದ್ ಪವಾರ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ಕಣ್ಣೀರಾದ ಕಾರ್ಯಕರ್ತರು, ಭಾರೀ ಪ್ರತಿಭಟನೆ ನಡೆಸಿ ರಾಜೀನಾಮೆ ಹಿಂಪಡೆಯುವಂತೆ ಒತ್ತಾಯಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಶರದ್ ಪವಾರ್, ಪಕ್ಷದ ಭವಿಷ್ಯಕ್ಕಾಗಿ ಮತ್ತು ಹೊಸ ನಾಯಕತ್ವವನ್ನು ರಚಿಸಲು ತಮ್ಮ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿ ಕಾರ್ಯಕರ್ತರ ಮನವೋಲಿಸುವ ಯತ್ನ ನಡೆಸಿದ್ದರು. ಆದರೆ ಪಕ್ಷ ಸಮಿತಿಯು ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿ ಅವರದ್ದೇ ನಾಯಕತ್ವದಲ್ಲಿ ಮುನ್ನಡೆಯಲು ನಿರ್ಧಿರಿಸಿತು. ಪರಿಣಾಮ ಪವಾರ್ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ರಾಜೀನಾಮೆ ಹಿಂಪಡೆದ ನಂತರ ಮಾತನಾಡಿದ ಶರದ್ ಪವಾರ್, “ನಾನು ಪಕ್ಷದ ಅಧ್ಯಕ್ಷನಾಗಿ ಮುಂದುವರಿಯುತ್ತೇನೆ. ನನ್ನ ಹಿಂದಿನ ನಿರ್ಧಾರವನ್ನು ನಾನು ಹಿಂತೆಗೆದುಕೊಳ್ಳುತ್ತೇನೆ” ಎಂದರು.

ಶರದ್ ಪವಾರ್ ಅವರು ತಮ್ಮ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ಪುತ್ರಿ ಸುಪ್ರಿಯಾ ಸುಳೆ ಅವರು ಪಕ್ಷದ ಮುಖ್ಯಸ್ಥೆಯಾಗಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು. ಸದ್ಯ ರಾಜೀನಾಮೆ ಹಿಂಪಡೆತದಿಂದಾಗಿ ಈ ಊಹಾಪೋಹಕ್ಕೆ ತೆರೆಬಿದ್ದಿದೆ.

ಇದನ್ನೂ ಓದಿ: Manipur Violence Explainer: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

“ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿದರೂ ಸಂಘಟನೆಯಲ್ಲಿ ಯಾವುದೇ ಹುದ್ದೆ ಅಥವಾ ಜವಾಬ್ದಾರಿಗೆ ಉತ್ತರಾಧಿಕಾರಿ ರೂಪಿಸಬೇಕು ಎಂಬ ಸ್ಪಷ್ಟ ಅಭಿಪ್ರಾಯ ಹೊಂದಿದ್ದು, ಮುಂದೆ ಪಕ್ಷದಲ್ಲಿ ಸಂಘಟನಾ ಬದಲಾವಣೆ, ನಿಯೋಜನೆಗೆ ಒತ್ತು ನೀಡುತ್ತೇನೆ. ಹೊಸ ಜವಾಬ್ದಾರಿಗಳು, ಹೊಸ ನಾಯಕತ್ವವನ್ನು ರಚಿಸಲಾಗುವುದು. ಸಂಘಟನೆಯ ಬೆಳವಣಿಗೆಗೆ ನಾನು ಶಕ್ತಿಯುತವಾಗಿ ಕೆಲಸ ಮಾಡುತ್ತೇನೆ ಮತ್ತು ಪಕ್ಷದ ಸಿದ್ಧಾಂತ ಮತ್ತು ಪಕ್ಷದ ಗುರಿಗಳನ್ನು ಜನರ ಬಳಿಗೆ ಕೊಂಡೊಯ್ಯುತ್ತೇನೆ” ಎಂದು ಪವಾರ್ ಹೇಳಿದ್ದಾರೆ.

ಪವಾರ್ ಅವರು 1999 ರಿಂದ ಸ್ಥಾಪಿಸಿದ ಮತ್ತು ತಮ್ಮ ನೇತೃತ್ವದ ರಾಜಕೀಯ ಸಂಘಟನೆಯಾದ ಎನ್‌ಸಿಪಿಯ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಮಂಗಳವಾರ ತಿಳಿಸಿದ್ದರು. ನನಗೆ ಮೂರು ವರ್ಷಗಳ ರಾಜ್ಯಸಭಾ ಸದಸ್ಯತ್ವ ಉಳಿದಿದೆ, ಈ ಅವಧಿಯಲ್ಲಿ ನಾನು ಮಹಾರಾಷ್ಟ್ರ ಮತ್ತು ಭಾರತಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಕೇಂದ್ರೀಕರಿಸುತ್ತೇನೆ, ಯಾವುದೇ ಜವಾಬ್ದಾರಿಯನ್ನು (ಪಕ್ಷದ ಹುದ್ದೆಯ) ಸ್ವೀಕರಿಸುವುದಿಲ್ಲ. 1960ಮೇ 1 ರಿಂದ ಸುದೀರ್ಘ ಸಾರ್ವಜನಿಕ ಜೀವನದ ನಂತರ ಮೇ 1, 2023 ರವರೆಗೆ ಒಂದು ಹೆಜ್ಜೆ ಹಿಂದೆ ತೆಗೆದುಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ, ನಾನು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಪವಾರ್ ಹೇಳಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Fri, 5 May 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು