AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCP: ಅಜಿತ್ ಪವಾರ್ ಬಣ ನಿಜವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ: ಚುನಾವಣಾ ಆಯೋಗ

ಅಜಿತ್ ಪವಾರ್ ಬಣವೇ ನಿಜವಾದ ಎನ್​​ಸಿಪಿ ಎಂದು ಚುನಾವಣಾ ಆಯೋಗ ಹೇಳಿದೆ. ವಿವಾದಿತ ಆಂತರಿಕ ಸಾಂಸ್ಥಿಕ ಚುನಾವಣೆಗಳ ದೃಷ್ಟಿಯಿಂದ ಅಜಿತ್ ಪವಾರ್ ಬಣ ಎನ್‌ಸಿಪಿ ಚಿಹ್ನೆಯನ್ನು ಪಡೆಯಲು 'ಶಾಸಕ ಬಹುಮತದ ಪರೀಕ್ಷೆ' ಸಹಾಯ ಮಾಡಿತು ಎಂದು ಚುನಾವಣಾ ಸಮಿತಿ ಹೇಳಿದೆ.6 ತಿಂಗಳಿಗಿಂತ ಹೆಚ್ಚು ಕಾಲ 10 ಕ್ಕೂ ಹೆಚ್ಚು ವಿಚಾರಣೆಗಳ ನಂತರ ಆಯೋಗ ಈ ನಿರ್ಧಾರಕ್ಕೆ ಬಂದಿದೆ. 

NCP: ಅಜಿತ್ ಪವಾರ್ ಬಣ ನಿಜವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ: ಚುನಾವಣಾ ಆಯೋಗ
ಅಜಿತ್ ಪವಾರ್- ಶರದ್ ಪವಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 06, 2024 | 8:11 PM

Share

ದೆಹಲಿ ಫೆಬ್ರುವರಿ 06: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (Nationalist Congress Party)  ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ತಮ್ಮ ಪಕ್ಷದ ಚಿಹ್ನೆಗಾಗಿ ನಡೆದ ಹೋರಾಟದಲ್ಲಿ ಸೋತಿದ್ದಾರೆ. ಚುನಾವಣಾ ಆಯೋಗವು (Election Commission) ಮಂಗಳವಾರ ಅವರ ಸೋದರಳಿಯ ಅಜಿತ್ ಪವಾರ್ ಅವರ ಬಣವೇ ನಿಜವಾದ  ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಎಂದು ಹೇಳಿದೆ. ವಿವಾದಿತ ಆಂತರಿಕ ಸಾಂಸ್ಥಿಕ ಚುನಾವಣೆಗಳ ದೃಷ್ಟಿಯಿಂದ ಅಜಿತ್ ಪವಾರ್ ಬಣ ಎನ್‌ಸಿಪಿ ಚಿಹ್ನೆಯನ್ನು ಪಡೆಯಲು ‘ಶಾಸಕ ಬಹುಮತದ ಪರೀಕ್ಷೆ’ ಸಹಾಯ ಮಾಡಿತು ಎಂದು ಚುನಾವಣಾ ಸಮಿತಿ ಹೇಳಿದೆ.6 ತಿಂಗಳಿಗಿಂತ ಹೆಚ್ಚು ಕಾಲ 10 ಕ್ಕೂ ಹೆಚ್ಚು ವಿಚಾರಣೆಗಳ ನಂತರ ಆಯೋಗ ಈ ನಿರ್ಧಾರಕ್ಕೆ ಬಂದಿದೆ.

ಎನ್‌ಸಿಪಿ ಬಣಕ್ಕೆ ಮೀಸಲು ಚಿಹ್ನೆಯಾಗಿರುವ ಗಡಿಯಾರ ಚಿಹ್ನೆಯನ್ನು ಬಳಸಲು ಅಜಿತ್ ಪವಾರ್ ಬಣಕ್ಕೆ ಅರ್ಹತೆ ಇದೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ 1968 ರ ಅಡಿಯಲ್ಲಿ ಅಜಿತ್ ಪವಾರ್ ಬಣವು ಎನ್‌ಸಿಪಿಯ ಅಧಿಕೃತ ಚಿಹ್ನೆಯನ್ನು ಬಳಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ಅನುಮತಿಸುವ ಆದೇಶವನ್ನು ಇಸಿಐ ಅಂಗೀಕರಿಸಿತು.

ಇಸಿಐ “ಶಾಸಕ ಬಹುಮತ” ಪರೀಕ್ಷೆಯನ್ನು ಬಳಸಿತು ಮತ್ತು ಅಜಿತ್ ಪವಾರ್ ಬಣವು ಬಹುಪಾಲು ಶಾಸಕರನ್ನು (51/81) ಹೊಂದಿದೆ. ಇತರ ಪರೀಕ್ಷೆಗಳಾದ “ಗುರಿ ಮತ್ತು ಉದ್ದೇಶಗಳು” ಮತ್ತು “ಸಾಂಸ್ಥಿಕ ಬಹುಮತ” ಪರೀಕ್ಷೆ ಈ ಪ್ರಕರಣದಲ್ಲಿ ನಿರ್ಣಾಯಕವಾಗಿರಲಿಲ್ಲ. ಆದ್ದರಿಂದ ಶಾಸಕಾಂಗ ಬಹುಮತದ ಪರೀಕ್ಷೆಯನ್ನು ಬಳಸಲಾಗಿದೆ ಎಂದು ಆಯೋಗವು ಗಮನಿಸಿದೆ.

ಕಳೆದ ವರ್ಷ ಜುಲೈನಲ್ಲಿ ಅಜಿತ್ ಪವಾರ್ ಮತ್ತು ಪ್ರಫುಲ್ ಪಟೇಲ್ ನೇತೃತ್ವದ ಒಂದು ವಿಭಾಗವು ಆಗಿನ ಪಕ್ಷದ ವರಿಷ್ಠ ಶರದ್ ಪವಾರ್ ಜೊತೆಗಿನ  ಸಂಬಂಧ ಮುರಿದು ಬಿಜೆಪಿ-ಶಿವಸೇನಾ (ಏಕನಾಥ್ ಶಿಂಧೆ) ಮೈತ್ರಿಯೊಂದಿಗೆ ಕೈಜೋಡಿಸಿದ ನಂತರ ಎನ್‌ಸಿಪಿಯಲ್ಲಿ ಬಿರುಕು ಕಾಣಿಸಿಕೊಂಡಿತು. ಕ್ಷಿಪ್ರ ಬೆಳವಣಿಗೆಯಲ್ಲಿ, ಅಜಿತ್ ಪವಾರ್ ಅವರು ಮಹಾರಾಷ್ಟ್ರ ಸರ್ಕಾರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ONGC ಸೀ ಸರ್ವೈವಲ್ ಸೆಂಟರ್, ಇಂಡಿಯಾ ಎನರ್ಜಿ ವೀಕ್ 2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ

ಜುಲೈನಲ್ಲಿಯೇ, ಅಜಿತ್ ಪವಾರ್ ಬಣವು ಎನ್​​​ಸಿಪಿಯ ಅಧಿಕೃತ ಚಿಹ್ನೆಯನ್ನು ಕೋರಿ ಚುನಾವಣಾ ಆಯೋಗವನ್ನು ಸಂಪರ್ಕಿಸಿತು. ಶರದ್ ಪವಾರ್ ಬಣವು ಮಹಾರಾಷ್ಟ್ರ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ್ದು, ಅಜಿತ್ ಪವಾರ್ ಮತ್ತು ಅವರನ್ನು ಬೆಂಬಲಿಸುವ ಶಾಸಕರು ಪಕ್ಷದಿಂದ ಪಕ್ಷಾಂತರಗೊಂಡಿರುವ ಕಾರಣಕ್ಕಾಗಿ ಸಂವಿಧಾನದ ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಅವರನ್ನು ಅನರ್ಹಗೊಳಿಸಬೇಕೆಂದು ಕೋರಿದ್ದಾರೆ.

ಸುಪ್ರೀಂ ಕೋರ್ಟ್, ಸ್ಪೀಕರ್ ಈ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಜನವರಿ 31, 2024 ರ ಗಡುವನ್ನು ನಿಗದಿಪಡಿಸಿತು. ಕಳೆದ ವಾರ, ಸುಪ್ರೀಂ ಕೋರ್ಟ್ ಸ್ಪೀಕರ್ ಸಮಯವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Tue, 6 February 24

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು