AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCP: ಅಜಿತ್ ಪವಾರ್ ಬಣ ನಿಜವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ: ಚುನಾವಣಾ ಆಯೋಗ

ಅಜಿತ್ ಪವಾರ್ ಬಣವೇ ನಿಜವಾದ ಎನ್​​ಸಿಪಿ ಎಂದು ಚುನಾವಣಾ ಆಯೋಗ ಹೇಳಿದೆ. ವಿವಾದಿತ ಆಂತರಿಕ ಸಾಂಸ್ಥಿಕ ಚುನಾವಣೆಗಳ ದೃಷ್ಟಿಯಿಂದ ಅಜಿತ್ ಪವಾರ್ ಬಣ ಎನ್‌ಸಿಪಿ ಚಿಹ್ನೆಯನ್ನು ಪಡೆಯಲು 'ಶಾಸಕ ಬಹುಮತದ ಪರೀಕ್ಷೆ' ಸಹಾಯ ಮಾಡಿತು ಎಂದು ಚುನಾವಣಾ ಸಮಿತಿ ಹೇಳಿದೆ.6 ತಿಂಗಳಿಗಿಂತ ಹೆಚ್ಚು ಕಾಲ 10 ಕ್ಕೂ ಹೆಚ್ಚು ವಿಚಾರಣೆಗಳ ನಂತರ ಆಯೋಗ ಈ ನಿರ್ಧಾರಕ್ಕೆ ಬಂದಿದೆ. 

NCP: ಅಜಿತ್ ಪವಾರ್ ಬಣ ನಿಜವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ: ಚುನಾವಣಾ ಆಯೋಗ
ಅಜಿತ್ ಪವಾರ್- ಶರದ್ ಪವಾರ್
ರಶ್ಮಿ ಕಲ್ಲಕಟ್ಟ
|

Updated on:Feb 06, 2024 | 8:11 PM

Share

ದೆಹಲಿ ಫೆಬ್ರುವರಿ 06: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (Nationalist Congress Party)  ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ತಮ್ಮ ಪಕ್ಷದ ಚಿಹ್ನೆಗಾಗಿ ನಡೆದ ಹೋರಾಟದಲ್ಲಿ ಸೋತಿದ್ದಾರೆ. ಚುನಾವಣಾ ಆಯೋಗವು (Election Commission) ಮಂಗಳವಾರ ಅವರ ಸೋದರಳಿಯ ಅಜಿತ್ ಪವಾರ್ ಅವರ ಬಣವೇ ನಿಜವಾದ  ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಎಂದು ಹೇಳಿದೆ. ವಿವಾದಿತ ಆಂತರಿಕ ಸಾಂಸ್ಥಿಕ ಚುನಾವಣೆಗಳ ದೃಷ್ಟಿಯಿಂದ ಅಜಿತ್ ಪವಾರ್ ಬಣ ಎನ್‌ಸಿಪಿ ಚಿಹ್ನೆಯನ್ನು ಪಡೆಯಲು ‘ಶಾಸಕ ಬಹುಮತದ ಪರೀಕ್ಷೆ’ ಸಹಾಯ ಮಾಡಿತು ಎಂದು ಚುನಾವಣಾ ಸಮಿತಿ ಹೇಳಿದೆ.6 ತಿಂಗಳಿಗಿಂತ ಹೆಚ್ಚು ಕಾಲ 10 ಕ್ಕೂ ಹೆಚ್ಚು ವಿಚಾರಣೆಗಳ ನಂತರ ಆಯೋಗ ಈ ನಿರ್ಧಾರಕ್ಕೆ ಬಂದಿದೆ.

ಎನ್‌ಸಿಪಿ ಬಣಕ್ಕೆ ಮೀಸಲು ಚಿಹ್ನೆಯಾಗಿರುವ ಗಡಿಯಾರ ಚಿಹ್ನೆಯನ್ನು ಬಳಸಲು ಅಜಿತ್ ಪವಾರ್ ಬಣಕ್ಕೆ ಅರ್ಹತೆ ಇದೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ 1968 ರ ಅಡಿಯಲ್ಲಿ ಅಜಿತ್ ಪವಾರ್ ಬಣವು ಎನ್‌ಸಿಪಿಯ ಅಧಿಕೃತ ಚಿಹ್ನೆಯನ್ನು ಬಳಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ಅನುಮತಿಸುವ ಆದೇಶವನ್ನು ಇಸಿಐ ಅಂಗೀಕರಿಸಿತು.

ಇಸಿಐ “ಶಾಸಕ ಬಹುಮತ” ಪರೀಕ್ಷೆಯನ್ನು ಬಳಸಿತು ಮತ್ತು ಅಜಿತ್ ಪವಾರ್ ಬಣವು ಬಹುಪಾಲು ಶಾಸಕರನ್ನು (51/81) ಹೊಂದಿದೆ. ಇತರ ಪರೀಕ್ಷೆಗಳಾದ “ಗುರಿ ಮತ್ತು ಉದ್ದೇಶಗಳು” ಮತ್ತು “ಸಾಂಸ್ಥಿಕ ಬಹುಮತ” ಪರೀಕ್ಷೆ ಈ ಪ್ರಕರಣದಲ್ಲಿ ನಿರ್ಣಾಯಕವಾಗಿರಲಿಲ್ಲ. ಆದ್ದರಿಂದ ಶಾಸಕಾಂಗ ಬಹುಮತದ ಪರೀಕ್ಷೆಯನ್ನು ಬಳಸಲಾಗಿದೆ ಎಂದು ಆಯೋಗವು ಗಮನಿಸಿದೆ.

ಕಳೆದ ವರ್ಷ ಜುಲೈನಲ್ಲಿ ಅಜಿತ್ ಪವಾರ್ ಮತ್ತು ಪ್ರಫುಲ್ ಪಟೇಲ್ ನೇತೃತ್ವದ ಒಂದು ವಿಭಾಗವು ಆಗಿನ ಪಕ್ಷದ ವರಿಷ್ಠ ಶರದ್ ಪವಾರ್ ಜೊತೆಗಿನ  ಸಂಬಂಧ ಮುರಿದು ಬಿಜೆಪಿ-ಶಿವಸೇನಾ (ಏಕನಾಥ್ ಶಿಂಧೆ) ಮೈತ್ರಿಯೊಂದಿಗೆ ಕೈಜೋಡಿಸಿದ ನಂತರ ಎನ್‌ಸಿಪಿಯಲ್ಲಿ ಬಿರುಕು ಕಾಣಿಸಿಕೊಂಡಿತು. ಕ್ಷಿಪ್ರ ಬೆಳವಣಿಗೆಯಲ್ಲಿ, ಅಜಿತ್ ಪವಾರ್ ಅವರು ಮಹಾರಾಷ್ಟ್ರ ಸರ್ಕಾರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ONGC ಸೀ ಸರ್ವೈವಲ್ ಸೆಂಟರ್, ಇಂಡಿಯಾ ಎನರ್ಜಿ ವೀಕ್ 2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ

ಜುಲೈನಲ್ಲಿಯೇ, ಅಜಿತ್ ಪವಾರ್ ಬಣವು ಎನ್​​​ಸಿಪಿಯ ಅಧಿಕೃತ ಚಿಹ್ನೆಯನ್ನು ಕೋರಿ ಚುನಾವಣಾ ಆಯೋಗವನ್ನು ಸಂಪರ್ಕಿಸಿತು. ಶರದ್ ಪವಾರ್ ಬಣವು ಮಹಾರಾಷ್ಟ್ರ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ್ದು, ಅಜಿತ್ ಪವಾರ್ ಮತ್ತು ಅವರನ್ನು ಬೆಂಬಲಿಸುವ ಶಾಸಕರು ಪಕ್ಷದಿಂದ ಪಕ್ಷಾಂತರಗೊಂಡಿರುವ ಕಾರಣಕ್ಕಾಗಿ ಸಂವಿಧಾನದ ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಅವರನ್ನು ಅನರ್ಹಗೊಳಿಸಬೇಕೆಂದು ಕೋರಿದ್ದಾರೆ.

ಸುಪ್ರೀಂ ಕೋರ್ಟ್, ಸ್ಪೀಕರ್ ಈ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಜನವರಿ 31, 2024 ರ ಗಡುವನ್ನು ನಿಗದಿಪಡಿಸಿತು. ಕಳೆದ ವಾರ, ಸುಪ್ರೀಂ ಕೋರ್ಟ್ ಸ್ಪೀಕರ್ ಸಮಯವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Tue, 6 February 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ