AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಬಾರಿಗೆ ಕೊರೊನಾ ಕುಣಿತದ ಆತಂಕ: ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ!

ಮಾರುಕಟ್ಟೆ ಕುಸಿತ ಕಂಡ ನಡುವೆಯೂ ಪ್ರಮುಖ 580 ಷೇರುಗಳು ಏರಿಕೆ ಕಂಡರೆ, 2,381 ಷೇರು ಕುಸಿತಗೊಂಡಿವೆ. 163 ಷೇರುಗಳು ಯಾವುದೇ ಬದಲಾವಣೆ ಕಂಡಿಲ್ಲ. ಎರಡನೇ ಅಲೆ ಅಬ್ಬರಿಸುವ ಬಗ್ಗೆ ತಜ್ಞರು ಎಚ್ಚರಿಸುತ್ತಿದ್ದಂತೆ ವಿಶ್ವದ ಬಹುತೇಕ ಮಾರುಕಟ್ಟೆ ಡೌನ್​ ಆಗಿದೆ.

ಎರಡನೇ ಬಾರಿಗೆ ಕೊರೊನಾ ಕುಣಿತದ ಆತಂಕ: ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ!
ಷೇರು ಮಾರುಕಟ್ಟೆ
ರಾಜೇಶ್ ದುಗ್ಗುಮನೆ
|

Updated on: Dec 21, 2020 | 5:58 PM

Share

ಮುಂಬೈ: ಬ್ರಿಟನ್​ನಲ್ಲಿ ಕೊರೊನಾ ವೈರಸ್​ ಎರಡನೇ ಅಲೆಯ ಭೀತಿ ಎದುರಾಗಿದೆ. ರೂಪಾಂತರಗೊಂಡಿರುವ ಕೊರೊನಾ ವೈರಸ್​ ಸಾಕಷ್ಟು ಅಪಾಯಕಾರಿ ಎನ್ನುವ ವಾದವನ್ನು ತಜ್ಞರು ಮುಂದಿಡುತ್ತಿದ್ದಂತೆ ವಿಶ್ವದ ಷೇರು ಮಾರುಕಟ್ಟೆ ಇಳಿಕೆ ಹಾದಿ ಹಿಡಿದೆ. ಭಾರತದ ಷೇರು ಮಾರುಕಟ್ಟೆ ಕೂಡ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿದೆ.

ಮಧ್ಯಾಹ್ನದ ವೇಳೆಗೆ ಸೆನ್ಸೆಕ್ಸ್​ ಸೂಚ್ಯಂಕ​  2,037 ಅಂಕ ಕಳೆದುಕೊಂಡು 44,923 ಅಂಕಕ್ಕೆ ಇಳಿಕೆ ಆಗಿತ್ತು. ನಂತರ ಮಾರುಕಟ್ಟೆ ಕೊಂಚ ಚೇತರಿಕೆ ಕಂಡಿತ್ತು. ಮಧ್ಯಾಹ್ನ 3:30ಕ್ಕೆ ಷೇರು ವಹಿವಾಟು ಮುಕ್ತಗೊಳ್ಳುವ ವೇಳೆಗೆ ಸೆನ್ಸೆಕ್ಸ್​ ಸೂಚ್ಯಂಕ ಶೇ. 3.00 ಅಥವಾ 1,406.73 ಅಂಕ ಕಳೆದುಕೊಂಡು 45553.96 ಅಂಕಕ್ಕೆ  ನಿಂತಿದೆ. ಇನ್ನು, ನಿಫ್ಟಿ ಶೇ. 3.14 ಅಥವಾ 432.10 ಅಂಕ ಕಳೆದುಕೊಂಡು 13328.40 ಅಂಕಕ್ಕೆ ಕುಸಿದಿದೆ.

ಮಾರುಕಟ್ಟೆ ಕುಸಿತ ಕಂಡ ನಡುವೆಯೂ ಪ್ರಮುಖ 580 ಷೇರುಗಳು ಏರಿಕೆ ಕಂಡರೆ, 2,381 ಷೇರು ಕುಸಿತಗೊಂಡಿವೆ. 163 ಷೇರುಗಳು ಯಾವುದೇ ಬದಲಾವಣೆ ಕಂಡಿಲ್ಲ. ನಿಫ್ಟಿ ಫಿಫ್ಟಿ ಷೇರುಗಳಾದ ಒಎನ್​ಜಿಸಿ, ಟಾಟಾ ಮೋಟಾರ್ಸ್​, ಗೈಲ್​, ಹಿಂಡ್​ಲಾಕ್​ ಮತ್ತು ಐಒಎಸ್​ ಷೇರುಗಳು ಅತಿ ಹೆಚ್ಚು ಕುಸಿತ ಕಂಡ ಷೇರುಗಳು.

ಎರಡನೇ ಅಲೆಯ ಎಫೆಕ್ಟ್​ ಅಮೆರಿಕ ಚುನಾವಣೆ ಫಲಿತಾಂಶ ಹಾಗೂ ಕೊರೊನಾ ವೈರಸ್​ ಲಸಿಕೆ  ಸುದ್ದಿಗಳಿಂದ ಭಾರತದ ಷೇರು ಮಾರುಕಟ್ಟೆ ಐತಿಹಾಸಿಕ ಏರಿಕೆ ಕಂಡಿತ್ತು. ಆದರೆ, ಬ್ರಿಟನ್​​ನಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಕಾಣಿಸಿಕೊಂಡಿದೆ. ಈ ಮಧ್ಯೆ ಡಿಸೆಂಬರ್​ 31ರವರೆಗೆ ಬ್ರಿಟನ್​ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ಕೊರೊನಾ ವೈರಸ್​ ರೂಪಾಂತರ ತಾಳಿದ್ದು, ಇದು ಹೆಚ್ಚು ಅಪಾಯಕಾರಿ ಎನ್ನಲಾಗುತ್ತಿದೆ. ಇದರ ಪರಿಣಾಮದಿಂದ ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ ನಡೆದಿದೆ.

ಬಹುತೇಕ ಮಾರುಕಟ್ಟೆ ಡೌನ್​ ಎರಡನೇ ಅಲೆ ಅಬ್ಬರಿಸುವ ಬಗ್ಗೆ ತಜ್ಞರು ಎಚ್ಚರಿಸುತ್ತಿದ್ದಂತೆ ವಿಶ್ವದ ಬಹುತೇಕ ಮಾರುಕಟ್ಟೆ ಡೌನ್​ ಆಗಿದೆ. ಅಮೆರಿಕ, ಬ್ರಿಟನ್​ ಸೇರಿ ಎಲ್ಲ ಕಡೆಗಳಲ್ಲಿ ಕರಡಿ ಕುಣಿತ ಮುಂದುವರಿದಿದೆ. ನಾಳೆಯೂ ಮಾರುಕಟ್ಟೆ ಚೇತರಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.

ಕೊರೊನಾ ಅವತಾರ್​ 2ಗೆ ಪತರಗುಟ್ಟುತ್ತಿದೆ ಬ್ರಿಟನ್​.. ಅಲ್ಲಿಯ ಪ್ರಧಾನಿ ನಮ್ಮ 72ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿ: ಸ್ವಾಗತಾರ್ಹವೇ?

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!