AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಬಾರಿಗೆ ಕೊರೊನಾ ಕುಣಿತದ ಆತಂಕ: ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ!

ಮಾರುಕಟ್ಟೆ ಕುಸಿತ ಕಂಡ ನಡುವೆಯೂ ಪ್ರಮುಖ 580 ಷೇರುಗಳು ಏರಿಕೆ ಕಂಡರೆ, 2,381 ಷೇರು ಕುಸಿತಗೊಂಡಿವೆ. 163 ಷೇರುಗಳು ಯಾವುದೇ ಬದಲಾವಣೆ ಕಂಡಿಲ್ಲ. ಎರಡನೇ ಅಲೆ ಅಬ್ಬರಿಸುವ ಬಗ್ಗೆ ತಜ್ಞರು ಎಚ್ಚರಿಸುತ್ತಿದ್ದಂತೆ ವಿಶ್ವದ ಬಹುತೇಕ ಮಾರುಕಟ್ಟೆ ಡೌನ್​ ಆಗಿದೆ.

ಎರಡನೇ ಬಾರಿಗೆ ಕೊರೊನಾ ಕುಣಿತದ ಆತಂಕ: ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ!
ಷೇರು ಮಾರುಕಟ್ಟೆ
ರಾಜೇಶ್ ದುಗ್ಗುಮನೆ
|

Updated on: Dec 21, 2020 | 5:58 PM

Share

ಮುಂಬೈ: ಬ್ರಿಟನ್​ನಲ್ಲಿ ಕೊರೊನಾ ವೈರಸ್​ ಎರಡನೇ ಅಲೆಯ ಭೀತಿ ಎದುರಾಗಿದೆ. ರೂಪಾಂತರಗೊಂಡಿರುವ ಕೊರೊನಾ ವೈರಸ್​ ಸಾಕಷ್ಟು ಅಪಾಯಕಾರಿ ಎನ್ನುವ ವಾದವನ್ನು ತಜ್ಞರು ಮುಂದಿಡುತ್ತಿದ್ದಂತೆ ವಿಶ್ವದ ಷೇರು ಮಾರುಕಟ್ಟೆ ಇಳಿಕೆ ಹಾದಿ ಹಿಡಿದೆ. ಭಾರತದ ಷೇರು ಮಾರುಕಟ್ಟೆ ಕೂಡ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿದೆ.

ಮಧ್ಯಾಹ್ನದ ವೇಳೆಗೆ ಸೆನ್ಸೆಕ್ಸ್​ ಸೂಚ್ಯಂಕ​  2,037 ಅಂಕ ಕಳೆದುಕೊಂಡು 44,923 ಅಂಕಕ್ಕೆ ಇಳಿಕೆ ಆಗಿತ್ತು. ನಂತರ ಮಾರುಕಟ್ಟೆ ಕೊಂಚ ಚೇತರಿಕೆ ಕಂಡಿತ್ತು. ಮಧ್ಯಾಹ್ನ 3:30ಕ್ಕೆ ಷೇರು ವಹಿವಾಟು ಮುಕ್ತಗೊಳ್ಳುವ ವೇಳೆಗೆ ಸೆನ್ಸೆಕ್ಸ್​ ಸೂಚ್ಯಂಕ ಶೇ. 3.00 ಅಥವಾ 1,406.73 ಅಂಕ ಕಳೆದುಕೊಂಡು 45553.96 ಅಂಕಕ್ಕೆ  ನಿಂತಿದೆ. ಇನ್ನು, ನಿಫ್ಟಿ ಶೇ. 3.14 ಅಥವಾ 432.10 ಅಂಕ ಕಳೆದುಕೊಂಡು 13328.40 ಅಂಕಕ್ಕೆ ಕುಸಿದಿದೆ.

ಮಾರುಕಟ್ಟೆ ಕುಸಿತ ಕಂಡ ನಡುವೆಯೂ ಪ್ರಮುಖ 580 ಷೇರುಗಳು ಏರಿಕೆ ಕಂಡರೆ, 2,381 ಷೇರು ಕುಸಿತಗೊಂಡಿವೆ. 163 ಷೇರುಗಳು ಯಾವುದೇ ಬದಲಾವಣೆ ಕಂಡಿಲ್ಲ. ನಿಫ್ಟಿ ಫಿಫ್ಟಿ ಷೇರುಗಳಾದ ಒಎನ್​ಜಿಸಿ, ಟಾಟಾ ಮೋಟಾರ್ಸ್​, ಗೈಲ್​, ಹಿಂಡ್​ಲಾಕ್​ ಮತ್ತು ಐಒಎಸ್​ ಷೇರುಗಳು ಅತಿ ಹೆಚ್ಚು ಕುಸಿತ ಕಂಡ ಷೇರುಗಳು.

ಎರಡನೇ ಅಲೆಯ ಎಫೆಕ್ಟ್​ ಅಮೆರಿಕ ಚುನಾವಣೆ ಫಲಿತಾಂಶ ಹಾಗೂ ಕೊರೊನಾ ವೈರಸ್​ ಲಸಿಕೆ  ಸುದ್ದಿಗಳಿಂದ ಭಾರತದ ಷೇರು ಮಾರುಕಟ್ಟೆ ಐತಿಹಾಸಿಕ ಏರಿಕೆ ಕಂಡಿತ್ತು. ಆದರೆ, ಬ್ರಿಟನ್​​ನಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಕಾಣಿಸಿಕೊಂಡಿದೆ. ಈ ಮಧ್ಯೆ ಡಿಸೆಂಬರ್​ 31ರವರೆಗೆ ಬ್ರಿಟನ್​ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ಕೊರೊನಾ ವೈರಸ್​ ರೂಪಾಂತರ ತಾಳಿದ್ದು, ಇದು ಹೆಚ್ಚು ಅಪಾಯಕಾರಿ ಎನ್ನಲಾಗುತ್ತಿದೆ. ಇದರ ಪರಿಣಾಮದಿಂದ ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ ನಡೆದಿದೆ.

ಬಹುತೇಕ ಮಾರುಕಟ್ಟೆ ಡೌನ್​ ಎರಡನೇ ಅಲೆ ಅಬ್ಬರಿಸುವ ಬಗ್ಗೆ ತಜ್ಞರು ಎಚ್ಚರಿಸುತ್ತಿದ್ದಂತೆ ವಿಶ್ವದ ಬಹುತೇಕ ಮಾರುಕಟ್ಟೆ ಡೌನ್​ ಆಗಿದೆ. ಅಮೆರಿಕ, ಬ್ರಿಟನ್​ ಸೇರಿ ಎಲ್ಲ ಕಡೆಗಳಲ್ಲಿ ಕರಡಿ ಕುಣಿತ ಮುಂದುವರಿದಿದೆ. ನಾಳೆಯೂ ಮಾರುಕಟ್ಟೆ ಚೇತರಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.

ಕೊರೊನಾ ಅವತಾರ್​ 2ಗೆ ಪತರಗುಟ್ಟುತ್ತಿದೆ ಬ್ರಿಟನ್​.. ಅಲ್ಲಿಯ ಪ್ರಧಾನಿ ನಮ್ಮ 72ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿ: ಸ್ವಾಗತಾರ್ಹವೇ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!