AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sumitra Mahajan: ಮಾಜಿ ಲೋಕಸಭಾ ಸ್ಪೀಕರ್​ ಸುಮಿತ್ರಾ ಮಹಾಜನ್​ ಬಗ್ಗೆ ಸುಳ್ಳು ನಿಧನ ವಾರ್ತೆ ಹಂಚಿಕೊಂಡು ಕ್ಷಮೆ ಕೇಳಿದ ಶಶಿ ತರೂರ್

Shashi Tharoor: ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಸಾವಿನ ಸುದ್ದಿಯನ್ನು ಕೇಳಿ ದುಃಖಿತನಾಗಿದ್ದೇನೆ. ಅವರೊಂದಿಗಿನ ಅನೇಕ ಮಾತುಕತೆಗಳು ಈ ಹೊತ್ತಿನಲ್ಲಿ ನೆನಪಾಗುತ್ತಿವೆ. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಓಂ ಶಾಂತಿ! ಎಂಬ ಸಂದೇಶವನ್ನು ಶಶಿ ತರೂರ್​ ಹಂಚಿಕೊಂಡಿದ್ದರು. ಆದರೆ, ಈ ಸುದ್ದಿ ಸುಳ್ಳಾಗಿದೆ.

Sumitra Mahajan: ಮಾಜಿ ಲೋಕಸಭಾ ಸ್ಪೀಕರ್​ ಸುಮಿತ್ರಾ ಮಹಾಜನ್​ ಬಗ್ಗೆ ಸುಳ್ಳು ನಿಧನ ವಾರ್ತೆ ಹಂಚಿಕೊಂಡು ಕ್ಷಮೆ ಕೇಳಿದ ಶಶಿ ತರೂರ್
ಶಶಿ ತರೂರ್
Skanda
| Updated By: Digi Tech Desk|

Updated on:Apr 23, 2021 | 9:11 AM

Share

ದೆಹಲಿ: ಮಾಜಿ ಲೋಕಸಭಾ ಸ್ಪೀಕರ್​ ಸುಮಿತ್ರಾ ಮಹಾಜನ್ ನಿಧನರಾಗಿದ್ದಾರೆ ಎಂಬ ಸುಳ್ಳುಸುದ್ದಿಯೊಂದು ನಿನ್ನೆ (ಏಪ್ರಿಲ್ 22) ತಡರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿತ್ತು. ಕಾಂಗ್ರೆಸ್ ಸಂಸದ ಶಶಿ ತರೂರ್ ಈ ಸುದ್ದಿಯನ್ನು ಹಂಚಿಕೊಂಡ ಕಾರಣ ಅನೇಕರು ಅದನ್ನು ನಂಬಿ ಬೇಸರ ವ್ಯಕ್ತಪಡಿಸಿದ್ದರು. ಆದರೆ, ಇದಕ್ಕೆ ಸ್ಪಷ್ಟೀಕರಣ ನೀಡಿದ ಬಿಜೆಪಿ ಪಕ್ಷವು ಸುಮಿತ್ರಾ ಮಹಾಜನ್ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಊಹಾಪೋಹಕ್ಕೆ ತೆರೆ ಎಳೆದಿದೆ. ಅದರ ಬೆನ್ನಲ್ಲೇ ಈ ಸುಳ್ಳು ನಿಧನ ವಾರ್ತೆಯನ್ನು ಹಂಚಿಕೊಂಡು, ಸಂತಾಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕ್ಷಮೆಯಾಚಿಸಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಸುಮಿತ್ರಾ ಮಹಾಜನ್ ಅವರ ಫೋಟೋವನ್ನು ಹಾಕಿಕೊಂಡು ಕೆಲ ಸಾಲುಗಳನ್ನು ಬರೆದಿದ್ದ ಶಶಿ ತರೂರ್, ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಸಾವಿನ ಸುದ್ದಿಯನ್ನು ಕೇಳಿ ದುಃಖಿತನಾಗಿದ್ದೇನೆ. ಅವರೊಂದಿಗಿನ ಅನೇಕ ಮಾತುಕತೆಗಳು ಈ ಹೊತ್ತಿನಲ್ಲಿ ನೆನಪಾಗುತ್ತಿವೆ. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಓಂ ಶಾಂತಿ! ಎಂಬ ಸಂದೇಶವೊಂದನ್ನು ಹರಿಬಿಟ್ಟಿದ್ದರು. ಇದನ್ನು ಆಧರಿಸಿ ಕೆಲ ಆಂಗ್ಲ ಮಾಧ್ಯಮಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯನ್ನೂ ಪ್ರಕಟಿಸಿದ್ದವು. ಆದರೆ, ಇದೊಂದು ಸುಳ್ಳು ಸುದ್ದಿ ಎನ್ನುವುದು ಬಹಿರಂಗವಾಗುತ್ತಿದ್ದಂತೆಯೇ ಎಲ್ಲರೂ ಕ್ಷಮೆಯಾಚಿಸಿದ್ದಾರೆ.

ಈ ಬಗ್ಗೆ ಕ್ಷಮೆ ಕೋರಿ ತನ್ನ ಟ್ವೀಟ್ ಡಿಲೀಟ್ ಮಾಡಿದ ಶಶಿ ತರೂರ್, ಮತ್ತೊಂದು ಟ್ವೀಟ್​ನಲ್ಲಿ ನಿಧನ ಸುದ್ದಿ ಸುಳ್ಳಾಗಿರುವುದಕ್ಕೆ ಸಂತಸವಾಗಿದೆ. ಆದರೆ, ಆ ಸುದ್ದಿಯನ್ನು ಹಂಚಿಕೊಂಡಿದ್ದಕ್ಕೆ ಕ್ಷಮೆ ಕೇಳುತ್ತೇನೆ. ನಾನು ನಂಬುವ ಮೂಲದಿಂದ ವಿಷಯ ಬಂದ ಕಾರಣ ಅದನ್ನು ಹಂಚಿಕೊಂಡುಬಿಟ್ಟೆ. ಜನರು ಈ ತೆರನಾದ ಸುಳ್ಳು ಸುದ್ದಿಯನ್ನು ಹರಿಬಿಡುವುದನ್ನು ಗಮನಿಸಿದರೆ ಆತಂಕವಾಗುತ್ತದೆ ಎಂದಿದ್ದಾರೆ. ಅಲ್ಲದೇ ಇನ್ನೊಂದು ಟ್ವೀಟ್​ನಲ್ಲಿ ಸತ್ಯ ಸಂಗತಿಯನ್ನು ತಿಳಿಸಿದ ಕೈಲಾಶ್ ಎಂಬುವವರಿಗೆ ಧನ್ಯವಾದ ಅರ್ಪಿಸಿರುವ ಶಶಿ ತರೂರ್, ನಾನು ನನ್ನ ಹಳೆಯ ಟ್ವೀಟ್​ ಡಿಲೀಟ್ ಮಾಡಿದ್ದೇನೆ. ಸುಮಿತ್ರಾ ಮಹಾಜನ್​ ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kerala Assembly Elections 2021: ಬಿಜೆಪಿಯವರು ಸೃಷ್ಟಿಸುವ ಲವ್ ಜಿಹಾದ್ ಭೀತಿ, ಕೋಮುವಾದ ಕೇರಳದಲ್ಲಿ ನಡೆಯಲ್ಲ: ಶಶಿ ತರೂರ್

Published On - 8:58 am, Fri, 23 April 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ