AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shashi Tharoor: ಸಂಸದೆಯರೊಂದಿಗಿನ ಸೆಲ್ಫೀ ವಿವಾದದ ಬೆನ್ನಲ್ಲೇ ಮತ್ತೊಂದು ಫೋಟೋ ಟ್ವೀಟ್ ಮಾಡಿದ ಶಶಿ ತರೂರ್

ಸಂಸದೆಯರೊಂದಿಗೆ ತೆಗೆಸಿಕೊಂಡಿದ್ದ ಸೆಲ್ಫೀ ವೈರಲ್ ಆದ ಬೆನ್ನಲ್ಲೇ ಇಂದು ಸಂಸದರೊಂದಿಗೆ ಫೋಟೋ ತೆಗೆಸಿಕೊಂಡು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ಈ ಫೋಟೋಗಳು ನಿನ್ನೆಯ ಫೋಟೋದಂತೆ ವೈರಲ್ ಆಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Shashi Tharoor: ಸಂಸದೆಯರೊಂದಿಗಿನ ಸೆಲ್ಫೀ ವಿವಾದದ ಬೆನ್ನಲ್ಲೇ ಮತ್ತೊಂದು ಫೋಟೋ ಟ್ವೀಟ್ ಮಾಡಿದ ಶಶಿ ತರೂರ್
ಸಂಸದರ ಜೊತೆ ಶಶಿ ತರೂರ್ ಸೆಲ್ಫೀ
TV9 Web
| Edited By: |

Updated on: Nov 30, 2021 | 4:32 PM

Share

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಮಹಿಳಾ ಸಂಸದರೊಂದಿಗೆ ಕ್ಲಿಕ್ಕಿಸಿಕೊಂಡಿದ್ದ ಸೆಲ್ಫೀಯನ್ನು ಟ್ವೀಟ್ ಮಾಡಿದ್ದರು. ಆ ಟ್ವೀಟ್ ಜೊತೆಗೆ ಹಾಕಿದ್ದ ಕ್ಯಾಪ್ಷನ್ ಭಾರೀ ವಿವಾದಕ್ಕೀಡಾಗಿತ್ತು. ಸಂಸದೆಯರೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದ ಶಶಿ ತರೂರ್ ಕೆಲಸ ಮಾಡಲು ಲೋಕಸಭೆ ಆಕರ್ಷಣೀಯವಾದ ಸ್ಥಳವಲ್ಲ ಎಂದು ಹೇಳಿದವರಾರು? ಎಂದು ಟ್ವೀಟ್ ಮಾಡಿದ್ದರು. ಶಶಿ ತರೂರ್ ಅವರ ಮನಸ್ಥಿತಿಗೆ ಟ್ವಿಟ್ಟಿಗರು ಲೇವಡಿ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಪುರುಷ ಸಂಸದರೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಫೋಟೋಗಳು ವೈರಲ್ ಆಗುವುದಿಲ್ಲ ಎಂದು ಕೂಡ ಟ್ವೀಟ್ ಮಾಡುವ ಮೂಲಕ ತಮ್ಮನ್ನು ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಶಶಿ ತರೂರ್ ಸಂಸತ್ ಆವರಣದಲ್ಲಿ ಮಹಿಳಾ ಸಂಸದರೊಂದಿಗೆ ತೆಗೆದುಕೊಂಡು ಸೆಲ್ಫೀಯನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಶಶಿ ತರೂರ್ ಈ ಫೋಟೋಗೆ ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಹೇಳಿದವರು ಯಾರು? ಎಂದು ಕ್ಯಾಪ್ಷನ್ ನೀಡಿದ್ದರು. ಮಹಿಳಾ ಸಂಸದರಾದ ಸುಪ್ರಿಯಾ ಸುಳೆ, ಪ್ರೀನೀತ್ ಕೌರ್, ತಮಿಳಚಿ ತಂಗಪಾಂಡಿಯನ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್ ರೂಹಿ ಮತ್ತು ಜ್ಯೋತಿಮಣಿ ಅವರೊಂದಿಗಿನ ಸೆಲ್ಫೀಯನ್ನು ಶಶಿ ತರೂರ್ ಟ್ವೀಟ್ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿ ಅನೇಕ ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದರು.

ತಮ್ಮ ಟ್ವೀಟ್ ವಿವಾದಕ್ಕೀಡಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಶಶಿ ತರೂರ್, ನನ್ನ ಟ್ವೀಟ್ ಹಿಂದೆ ಯಾವುದೇ ಕೆಟ್ಟ ಉದ್ದೇಶಗಳಿರಲಿಲ್ಲ. ಈ ಟ್ವೀಟ್ ಅನ್ನು ಒಳ್ಳೆಯ ರೀತಿಯಲ್ಲಿ ಮಾಡಲಾಗಿದ್ದು, ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದರು.

ಸಂಸದೆಯರೊಂದಿಗೆ ತೆಗೆಸಿಕೊಂಡಿದ್ದ ಸೆಲ್ಫೀ ವೈರಲ್ ಆದ ಬೆನ್ನಲ್ಲೇ ಇಂದು ಸಂಸದರೊಂದಿಗೆ ಫೋಟೋ ತೆಗೆಸಿಕೊಂಡು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ಈ ಫೋಟೋಗಳು ನಿನ್ನೆಯ ಫೋಟೋದಂತೆ ವೈರಲ್ ಆಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ; ವಿಡಿಯೋ ವೈರಲ್

ಮಹಿಳಾ ಸಂಸದರೊಂದಿಗೆ ಸೆಲ್ಫಿ; ಲೋಕಸಭೆ ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಹೇಳಿದವರಾರು ಎಂದ ಶಶಿ ತರೂರ್ ಟ್ವೀಟ್‌ಗೆ ಆಕ್ಷೇಪ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!