AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಸಮಿತಿ ಪೆಗಾಸಸ್ ಬಗ್ಗೆ ಚರ್ಚೆ ಮಾಡುವ ನಿರೀಕ್ಷೆ ಇದೆ: ಶಶಿ ತರೂರ್

Shashi Tharoor: ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತರೂರ್ ಪ್ರತಿಪಕ್ಷಗಳು ಸಂಸತ್ತನ್ನು ಅವಮಾನಿಸುತ್ತಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಾಮುಖ್ಯತೆಯ ವಿಚಾರದಲ್ಲಿ ಈ ರೀತಿ ಉತ್ತರಿಸಲು ಸರ್ಕಾರ ನಿರಾಕರಿಸಿದೆ ಎಂದು ಹೇಳಿದರು

ಐಟಿ ಸಮಿತಿ ಪೆಗಾಸಸ್ ಬಗ್ಗೆ ಚರ್ಚೆ ಮಾಡುವ ನಿರೀಕ್ಷೆ ಇದೆ: ಶಶಿ ತರೂರ್
ಶಶಿ ತರೂರ್​
TV9 Web
| Edited By: |

Updated on: Aug 08, 2021 | 5:26 PM

Share

ದೆಹಲಿ: ಬಿಜೆಪಿ ಸದಸ್ಯರು ಜುಲೈ 28 ರಂದು ಸಮಿತಿಯ ಸಭೆಯನ್ನು ಅಡ್ಡಿಪಡಿಸಿದರು ಎಂದು ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿಯ ಅಧ್ಯಕ್ಷ ಶಶಿ ತರೂರ್ ಭಾನುವಾರ ಹೇಳಿದ್ದಾರೆ. ಬಿಜೆಪಿ ಸದಸ್ಯರು ಪೆಗಾಸಸ್ ಆರೋಪಗಳನ್ನು ಚರ್ಚಿಸಲು ಬಯಸುವುದಿಲ್ಲ ಮತ್ತು ಸಾಕ್ಷ್ಯ ನೀಡಬೇಕಾದ ಅಧಿಕಾರಿಗಳಿಗೆ ಭಾಗಿಯಾಗದಂತೆ ಸೂಚನೆ ನೀಡಿರುವಂತೆ ತೋರುತ್ತದೆ ಎಂದು ಹೇಳಿದ್ದಾರೆ. ಆದರೆ ಸಮಿತಿಯು ಮುಂದಕ್ಕೆ ಹೋಗುವ ಮೂಲಕ ಬೇಹುಗಾರಿಕೆ ವಿಷಯ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು ಶಶಿ ತರೂರ್ ಹೇಳಿದ್ದಾರೆ.

ಸಮಿತಿ ಸಭೆಗೆ ಹಾಜರಾಗದ ಸಚಿವಾಲಯದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ತರೂರ್, ಸಭೆಯ ಕೊನೇ ಗಳಿಗೆಯಲ್ಲಿ ಗೈರು ಹಾಜರಾಗಿರುವ ಮೂವರು ಅಧಿಕಾರಿಗಳ ನಡೆ ಗಂಭೀರವಾದುದು ಎಂದು ಹೇಳಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತರೂರ್ ಪ್ರತಿಪಕ್ಷಗಳು ಸಂಸತ್ತನ್ನು ಅವಮಾನಿಸುತ್ತಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಾಮುಖ್ಯತೆಯ ವಿಚಾರದಲ್ಲಿ ಈ ರೀತಿ ಉತ್ತರಿಸಲು ಸರ್ಕಾರ ನಿರಾಕರಿಸಿದೆ ಎಂದು ಹೇಳಿದರು. ಇದು ಪ್ರಜಾಪ್ರಭುತ್ವ ಮತ್ತು ಸರ್ಕಾರವು ಪ್ರತಿನಿಧಿಸುತ್ತದೆ ಎಂದು ಹೇಳಿಕೊಳ್ಳುವ ಸಾಮಾನ್ಯ ಭಾರತೀಯರನ್ನು ಅಪಹಾಸ್ಯ ಮಾಡಿದೆ ಎಂದಿದ್ದಾರೆ  ತರೂರ್.

ಚರ್ಚೆ ಮತ್ತು ಹೊಣೆಗಾರಿಕೆಯನ್ನು ತಪ್ಪಿಸುವುದು ಸಂಸತ್ತಿಗೆ ನಿಜವಾದ ಅವಮಾನ ಎಂದು ಮಾಜಿ ಕೇಂದ್ರ ಸಚಿವ ಮತ್ತು ತಿರುವನಂತಪುರಂ ಸಂಸದ ತರೂರ್ ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಪೆಗಾಸಸ್ ಬೇಹುಗಾರಿಕೆ ಸಮಸ್ಯೆಯನ್ನು ತೆಗೆದುಕೊಳ್ಳಲು ಮುಂದಾಗುತ್ತದೆಯೇ ಎಂದು ಕೇಳಿದಾಗ, ತರೂರ್ ಎರಡು ವರ್ಷಗಳಿಂದ ಐಟಿ ಸಮಿತಿಯು “ನಾಗರಿಕರ ಡೇಟಾ ಗೌಪ್ಯತೆ ಮತ್ತು ಭದ್ರತೆ ಮತ್ತು” ಸೈಬರ್ ಭದ್ರತೆ, ವಿಷಯಗಳ ಕುರಿತು ಚರ್ಚೆಗಳನ್ನು ನಡೆಸುತ್ತಿದೆ ಎಂದು ಹೇಳಿದರು. ಇದು ಹಿಂದಿನ ಅಧ್ಯಕ್ಷರಾದ ಅನುರಾಗ್ ಠಾಕೂರ್ ಅವರ ಅಜೆಂಡಾದಲ್ಲಿಯೂ ಸಹ ಇತ್ತು.

ಆದ್ದರಿಂದ ಪೆಗಾಸಸ್ ಸಮಸ್ಯೆಯು ಸ್ಪಷ್ಟವಾಗಿ ಐಟಿ ಸಮಿತಿಯ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಈ ವಿಷಯಗಳು ಉದ್ಭವಿಸಿದಾಗ ಅದರ ಸದಸ್ಯರು ಅದರ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಸಮಿತಿಯು ತನ್ನ ಸ್ಥಾಪಿತ ಕಾರ್ಯಸೂಚಿಯಲ್ಲಿನ ಸಭೆಯು ಪೆಗಾಸಸ್ ಅನ್ನು ಚರ್ಚಿಸಲು ಬಯಸದ ಸದಸ್ಯರಿಂದ ಅಡ್ಡಿಪಡಿಸಿತು ಎಂಬುದು ರಹಸ್ಯವಲ್ಲ. ಸಮಿತಿಯು ಕೋರಂ ಅನ್ನು ನಿರಾಕರಿಸುವ ಸಲುವಾಗಿ 10 ಸದಸ್ಯರು ಹಾಜರಾಗಿದ್ದು ರಿಜಿಸ್ಟರ್‌ಗೆ ಸಹಿ ಹಾಕಲು ನಿರಾಕರಿಸಿದ್ದರು ಎಂದು ತರೂರ್ ಹೇಳಿದ್ದಾರೆ.

ಇದನ್ನೂ ಓದಿ:  ಮಾಧ್ಯಮ ವರದಿಗಳು ಸರಿಯಾಗಿದ್ದರೆ ಆರೋಪಗಳು ಗಂಭೀರ: ಪೆಗಾಸಸ್ ಕುರಿತು ಸುಪ್ರೀಂಕೋರ್ಟ್ ಹೇಳಿದ 10 ಸಂಗತಿಗಳು

ಇದನ್ನೂ ಓದಿ:  Pegasus row ವಿಪಕ್ಷಗಳು ಸಮಸ್ಯೆಯಲ್ಲದ್ದನ್ನು ಸಮಸ್ಯೆಯಾಗಿ ಮಾಡುತ್ತಿವೆ: ಸರ್ಕಾರ

(Shashi Tharoor hopes parliamentary panel on information technology will take up Pegasus)

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ