‘ಇಂಡಿಯಾ’ ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ: ಶಶಿ ತರೂರ್

Shashi Tharoor: ಚುನಾವಣೋತ್ತರ ಸನ್ನಿವೇಶದ ಕುರಿತು ಮಾತನಾಡಿದ ಅವರು, ''ಒಮ್ಮೆ ಫಲಿತಾಂಶ ಬಂದರೆ, ಅದು ಒಂದು ಪಕ್ಷವಲ್ಲದ ಸಮ್ಮಿಶ್ರವಾಗಿರುವ ಕಾರಣ, ಆ ಪಕ್ಷಗಳ ನಾಯಕರು ಒಟ್ಟಾಗಿ ಯಾರನ್ನಾದರೂ ಆರಿಸಬೇಕಾಗುತ್ತದೆ ಎಂದು. ಆದರೆ ನನ್ನ ಊಹೆ ಏನೆಂದರೆ, ಕಾಂಗ್ರೆಸ್ ಪಕ್ಷದಿಂದ ಖರ್ಗೆ ಆಗಿರಬಹುದು, ಆಗ ಅವರು ಭಾರತದ ಮೊದಲ ದಲಿತ ಪ್ರಧಾನಿಯಾಗುತ್ತಾರೆ

ಇಂಡಿಯಾ ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ: ಶಶಿ ತರೂರ್
ಶಶಿ ತರೂರ್
ರಶ್ಮಿ ಕಲ್ಲಕಟ್ಟ

Updated on: Oct 17, 2023 | 3:11 PM

ತಿರುವನಂತಪುರಂ ಅಕ್ಟೋಬರ್ 17: 2024ರ ಲೋಕಸಭಾ ಚುನಾವಣೆಯಲ್ಲಿ (2024 Lok Sabha polls) ಇಂಡಿಯಾ ಮೈತ್ರಿಕೂಟ (INDIA alliance) ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಥವಾ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರನ್ನು ಪ್ರಧಾನಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ (Shashi Tharoor) ಹೇಳಿದ್ದಾರೆ. ಪ್ರತಿಪಕ್ಷಗಳ ಒಕ್ಕೂಟದ ಉಪಸ್ಥಿತಿಯಿಂದಾಗಿ ಮುಂದಿನ ವರ್ಷದ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶದ ಸಾಧ್ಯತೆಯನ್ನು ತರೂರ್ ಸೂಚಿಸಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸುವ ಮೂಲಕ ಇಂಡಿಯಾ ಮೈತ್ರಿಕೂಟವು ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಳ್ಳುವ ಅವಕಾಶವಿದೆ ಎಂದಿದ್ದಾರೆ ತರೂರ್.

ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಸೋಮವ ಟೆಕ್ನೋಪಾರ್ಕ್‌ನಲ್ಲಿ ತನ್ನ ಕಚೇರಿಯನ್ನು ಉದ್ಘಾಟಿಸಿದ ನಂತರ ಯುಎಸ್ ಮೂಲದ ಮತ್ತು ಸಿಲಿಕಾನ್ ವ್ಯಾಲಿ-ಇನ್‌ಕ್ಯುಬೇಟೆಡ್ ಡಿ2ಸಿ (ಡೈರೆಕ್ಟ್-ಟು-ಗ್ರಾಹಕ) ಮಾರುಕಟ್ಟೆಯ ವೇ ಡಾಟ್ ಕಾಮ್‌ನ ವೃತ್ತಿಪರರೊಂದಿಗೆ ಸಂವಾದ ನಡೆಸಿ ಮಾತನಾಡಿದ ತರೂರ್ ಕಾದು ನೋಡೋಣ ಎಂದು ಹೇಳಿದ್ದಾರೆ.

ಚುನಾವಣೋತ್ತರ ಸನ್ನಿವೇಶದ ಕುರಿತು ಮಾತನಾಡಿದ ಅವರು, ”ಒಮ್ಮೆ ಫಲಿತಾಂಶ ಬಂದರೆ, ಅದು ಒಂದು ಪಕ್ಷವಲ್ಲದ ಸಮ್ಮಿಶ್ರವಾಗಿರುವ ಕಾರಣ, ಆ ಪಕ್ಷಗಳ ನಾಯಕರು ಒಟ್ಟಾಗಿ ಯಾರನ್ನಾದರೂ ಆರಿಸಬೇಕಾಗುತ್ತದೆ ಎಂದು. ಆದರೆ ನನ್ನ ಊಹೆ ಏನೆಂದರೆ, ಕಾಂಗ್ರೆಸ್ ಪಕ್ಷದಿಂದ ಖರ್ಗೆ ಆಗಿರಬಹುದು, ಆಗ ಅವರು ಭಾರತದ ಮೊದಲ ದಲಿತ ಪ್ರಧಾನಿಯಾಗುತ್ತಾರೆ ಅಥವಾ ರಾಹುಲ್ ಗಾಂಧಿ ಆಗಿರಬಹುದು, ಏಕೆಂದರೆ ಅದು (ಕಾಂಗ್ರೆಸ್) ಅನೇಕ ವಿಧಗಳಲ್ಲಿ ಕುಟುಂಬ ನಡೆಸುವ ಪಕ್ಷವಾಗಿದೆ.

ಇದನ್ನೂ ಓದಿ:  ನಾ ಖಾವೂಂಗಾ,ನಾ ಖಾನೇ ದೂಂಗಾ ಎಂದು ಮೋದಿ ಹೇಳಿದ್ದು ಬೀಫ್ ಬಗ್ಗೆ ಆಗಿರಬೇಕು: ಶಶಿ ತರೂರ್ ಟ್ವೀಟ್

ಮಾಜಿ ಕೇಂದ್ರ ಸಚಿವರಾಗಿರುವ ತರೂರ್, ಪ್ರಧಾನಿ ಸಮಾನರಲ್ಲಿ ಮೊದಲಿಗರು. ಅವರಿಗೆ ವಹಿಸಲಾದ ಯಾವುದೇ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯದ ಬಗ್ಗೆ ಅವರು ವಿಶ್ವಾಸ ಹೊಂದಿದ್ದಾರೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us