AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ವರ್ಷದಲ್ಲಿ ಶಶಿತರೂರ್​ಗೆ ಮೊದಲ ಬಾರಿಗೆ ಪವರ್​ ಕಟ್​ Shock!

ದೆಹಲಿ: ದೇಶದ ನರನಾಡಿಯ ಮೇಲೆ ಹಿಡಿತ ಸಾಧಿಸುವ ಶಕ್ತಿ ಕೇಂದ್ರ ಅಂದರೆ ಅದು ದೆಹಲಿ. ಅದರಲ್ಲೂ ಲುಟಿಯೆನ್ಸ್​ ದೆಹಲಿ (Lutyens Delhi) ಇನ್ನೂ ಹೆಚ್ಚು ಪ್ರತಿಷ್ಠಿತ ಮತ್ತು ಪ್ರಭಾವೀ ಬಡಾವಣೆ. ಪ್ರಧಾನಿ ಮೋದಿಯ ಕಚೇರಿಯಿಂದ ಹಿಡಿದು ವಿವಿಧ ರಾಜಕೀಯ ನಾಯಕರ ಬಂಗಲೆಗಳು ಇದೇ ಭಾಗದಲ್ಲಿ ಇರುವುದು. ಅಂದ ಮೇಲೆ, ಈ ಜಾಗ ಮಹಾಭಾರತದ ಪಾಂಡವರ ರಾಜಧಾನಿ ಇಂದ್ರಪ್ರಸ್ಥದಂತೆ ವೈಭವೋಪೇತವಾಗಿರಲೇ ಬೇಕು. ದಿನದ 24 ಗಂಟೆ ವಾಟರ್​ ಮತ್ತು ಕರೆಂಟ್​ ಸಪ್ಲೈ ಹೀಗೆ ಹತ್ತು ಹಲವಾರು ಸೌಕರ್ಯಗಳು ಇದ್ದೇ […]

11 ವರ್ಷದಲ್ಲಿ ಶಶಿತರೂರ್​ಗೆ ಮೊದಲ ಬಾರಿಗೆ ಪವರ್​ ಕಟ್​ Shock!
ಶಶಿ ತರೂರ್
KUSHAL V
| Edited By: ಸಾಧು ಶ್ರೀನಾಥ್​|

Updated on:Aug 01, 2020 | 2:30 PM

Share

ದೆಹಲಿ: ದೇಶದ ನರನಾಡಿಯ ಮೇಲೆ ಹಿಡಿತ ಸಾಧಿಸುವ ಶಕ್ತಿ ಕೇಂದ್ರ ಅಂದರೆ ಅದು ದೆಹಲಿ. ಅದರಲ್ಲೂ ಲುಟಿಯೆನ್ಸ್​ ದೆಹಲಿ (Lutyens Delhi) ಇನ್ನೂ ಹೆಚ್ಚು ಪ್ರತಿಷ್ಠಿತ ಮತ್ತು ಪ್ರಭಾವೀ ಬಡಾವಣೆ. ಪ್ರಧಾನಿ ಮೋದಿಯ ಕಚೇರಿಯಿಂದ ಹಿಡಿದು ವಿವಿಧ ರಾಜಕೀಯ ನಾಯಕರ ಬಂಗಲೆಗಳು ಇದೇ ಭಾಗದಲ್ಲಿ ಇರುವುದು. ಅಂದ ಮೇಲೆ, ಈ ಜಾಗ ಮಹಾಭಾರತದ ಪಾಂಡವರ ರಾಜಧಾನಿ ಇಂದ್ರಪ್ರಸ್ಥದಂತೆ ವೈಭವೋಪೇತವಾಗಿರಲೇ ಬೇಕು. ದಿನದ 24 ಗಂಟೆ ವಾಟರ್​ ಮತ್ತು ಕರೆಂಟ್​ ಸಪ್ಲೈ ಹೀಗೆ ಹತ್ತು ಹಲವಾರು ಸೌಕರ್ಯಗಳು ಇದ್ದೇ ಇರುತ್ತೆ ಅಂತಾ ನೀವು ಅಂದುಕೊಂಡಿದ್ರೇ ಅದು ಸುಳ್ಳು.

ಹಾಗಂತ ನಾವು ಹೇಳುತ್ತಿಲ್ಲ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್​ ನಾಯಕ ಹಾಗೂ ಇದೇ ಲುಟಿಯೆನ್ಸ್​ ದೆಹಲಿಯ ನಿವಾಸಿ ಶಶಿ ತರೂರ್ ಸ್ವತಃ ಹಂಚಿಕೊಂಡಿದ್ದಾರೆ. ತಮ್ಮ ಏರಿಯಾದಲ್ಲಿ ನಿನ್ನೆ ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ಸಲ ಕರೆಂಟ್​ ಹೋದ ಬಗ್ಗೆ Tweet ಮಾಡಿದ್ದರು.

11 ವರ್ಷದಲ್ಲಿ ಮೊದಲ ಬಾರಿಗೆ ನಾನು ಈ ಹಿಂದೆ ಇಂಧನ ಸಚಿವರನ್ನ ಭೇಟಿಯಾಗಿದ್ದೆ. ಆ ಸಂದರ್ಭದಲ್ಲಿ.. ನಾನು ಲುಟಿಯೆನ್ಸ್​ ದೆಹಲಿಯಲ್ಲಿ 11 ವರ್ಷಗಳಿಂದ ವಾಸವಾಗಿದ್ದೇನೆ. ಆದರೆ, ಈವರೆಗೂ ಬಡಾವಣೆಯಲ್ಲಿ ಒಂದು ಬಾರಿಯೂ ಕರೆಂಟ್​ ಕಟ್​ ಆಗೇ ಇಲ್ಲ ಎಂದು ಹೇಳಿದ್ದೆ. ನನ್ನ ಮಾತು ಕೇಳಿ ಬೀಗಿದ ಸಚಿವರು ಅದು ಹಾಗೆಯೇ ಮುಂದುವರೆಯುವುದು, ಏನೂ ತೊಂದರೆಯಾಗುವುದಿಲ್ಲ ಬಿಡಿ ಎಂದು ಆಶ್ವಾಸನೆ ನೀಡಿದ್ದರು.

ಆದರೆ, ಇಂದು ಬೆಳಗ್ಗೆಯಿಂದ ಐದು ಸಲ ಕರೆಂಟ್​ ಹೋಗಿದೆ. ಕಂಪ್ಲೇಂಟ್​ ಮಾಡೋಣಾ ಅಂದ್ರೆ ವಿದ್ಯುತ್​ ಇಲಾಖೆಯ ಸಹಾಯವಾಣಿ ಸಹ ಸ್ವಿಚ್​ ಆಫ್​ ಆಗಿದೆ ಎಂದು ತಮ್ಮ ಟ್ವೀಟ್​ನಲ್ಲಿ ಶಶಿ ತರೂರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಶಿ ಮಾತಿಗೆ ಪೂರಕವೆಂಬಂತೆ ದೊರಕಿರುವ ಮಾಹಿತಿ ಪ್ರಕಾರ 2011 ರಿಂದ ಈವರೆಗೂ ಲುಟಿಯೆನ್ಸ್​ ದೆಹಲಿಯಲ್ಲಿ ಒಮ್ಮೆಯೂ ಕರೆಂಟ್ ಹೋಗೇ ಇಲ್ಲವಂತೆ! ಹೀಗಾಗಿ, ದೇಶದ ಶಕ್ತಿ ಕೇಂದ್ರವಾಗಿರುವ ಲುಟಿಯೆನ್ಸ್​ ದೆಹಲಿಯಲ್ಲಿ ಈ ಸಲ ಕರೆಂಟ್ ಹೋಗಿರೋದು ನಮ್ಮ ರಾಜಕೀಯ ನಾಯಕರಿಗೆ ಕಸಿವಿಸಿ ಉಂಟುಮಾಡಿದೆ. ಒಟ್ನಲ್ಲಿ, ಈಗಲಾದ್ರೂ ಕರೆಂಟ್​ ಹೋದಾಗ ಜನಸಾಮಾನ್ಯರು ಅನುಭವಿಸುವ ಯಾತನೆ ಹೇಗಿರುತ್ತೆ ಅನ್ನೋ feeling ನಮ್ಮ ನಾಯಕರಿಗೆ ಆಗಿದೆ.

Published On - 2:29 pm, Sat, 1 August 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ