AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ವರ್ಷದಲ್ಲಿ ಶಶಿತರೂರ್​ಗೆ ಮೊದಲ ಬಾರಿಗೆ ಪವರ್​ ಕಟ್​ Shock!

ದೆಹಲಿ: ದೇಶದ ನರನಾಡಿಯ ಮೇಲೆ ಹಿಡಿತ ಸಾಧಿಸುವ ಶಕ್ತಿ ಕೇಂದ್ರ ಅಂದರೆ ಅದು ದೆಹಲಿ. ಅದರಲ್ಲೂ ಲುಟಿಯೆನ್ಸ್​ ದೆಹಲಿ (Lutyens Delhi) ಇನ್ನೂ ಹೆಚ್ಚು ಪ್ರತಿಷ್ಠಿತ ಮತ್ತು ಪ್ರಭಾವೀ ಬಡಾವಣೆ. ಪ್ರಧಾನಿ ಮೋದಿಯ ಕಚೇರಿಯಿಂದ ಹಿಡಿದು ವಿವಿಧ ರಾಜಕೀಯ ನಾಯಕರ ಬಂಗಲೆಗಳು ಇದೇ ಭಾಗದಲ್ಲಿ ಇರುವುದು. ಅಂದ ಮೇಲೆ, ಈ ಜಾಗ ಮಹಾಭಾರತದ ಪಾಂಡವರ ರಾಜಧಾನಿ ಇಂದ್ರಪ್ರಸ್ಥದಂತೆ ವೈಭವೋಪೇತವಾಗಿರಲೇ ಬೇಕು. ದಿನದ 24 ಗಂಟೆ ವಾಟರ್​ ಮತ್ತು ಕರೆಂಟ್​ ಸಪ್ಲೈ ಹೀಗೆ ಹತ್ತು ಹಲವಾರು ಸೌಕರ್ಯಗಳು ಇದ್ದೇ […]

11 ವರ್ಷದಲ್ಲಿ ಶಶಿತರೂರ್​ಗೆ ಮೊದಲ ಬಾರಿಗೆ ಪವರ್​ ಕಟ್​ Shock!
ಶಶಿ ತರೂರ್
KUSHAL V
| Edited By: |

Updated on:Aug 01, 2020 | 2:30 PM

Share

ದೆಹಲಿ: ದೇಶದ ನರನಾಡಿಯ ಮೇಲೆ ಹಿಡಿತ ಸಾಧಿಸುವ ಶಕ್ತಿ ಕೇಂದ್ರ ಅಂದರೆ ಅದು ದೆಹಲಿ. ಅದರಲ್ಲೂ ಲುಟಿಯೆನ್ಸ್​ ದೆಹಲಿ (Lutyens Delhi) ಇನ್ನೂ ಹೆಚ್ಚು ಪ್ರತಿಷ್ಠಿತ ಮತ್ತು ಪ್ರಭಾವೀ ಬಡಾವಣೆ. ಪ್ರಧಾನಿ ಮೋದಿಯ ಕಚೇರಿಯಿಂದ ಹಿಡಿದು ವಿವಿಧ ರಾಜಕೀಯ ನಾಯಕರ ಬಂಗಲೆಗಳು ಇದೇ ಭಾಗದಲ್ಲಿ ಇರುವುದು. ಅಂದ ಮೇಲೆ, ಈ ಜಾಗ ಮಹಾಭಾರತದ ಪಾಂಡವರ ರಾಜಧಾನಿ ಇಂದ್ರಪ್ರಸ್ಥದಂತೆ ವೈಭವೋಪೇತವಾಗಿರಲೇ ಬೇಕು. ದಿನದ 24 ಗಂಟೆ ವಾಟರ್​ ಮತ್ತು ಕರೆಂಟ್​ ಸಪ್ಲೈ ಹೀಗೆ ಹತ್ತು ಹಲವಾರು ಸೌಕರ್ಯಗಳು ಇದ್ದೇ ಇರುತ್ತೆ ಅಂತಾ ನೀವು ಅಂದುಕೊಂಡಿದ್ರೇ ಅದು ಸುಳ್ಳು.

ಹಾಗಂತ ನಾವು ಹೇಳುತ್ತಿಲ್ಲ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್​ ನಾಯಕ ಹಾಗೂ ಇದೇ ಲುಟಿಯೆನ್ಸ್​ ದೆಹಲಿಯ ನಿವಾಸಿ ಶಶಿ ತರೂರ್ ಸ್ವತಃ ಹಂಚಿಕೊಂಡಿದ್ದಾರೆ. ತಮ್ಮ ಏರಿಯಾದಲ್ಲಿ ನಿನ್ನೆ ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ಸಲ ಕರೆಂಟ್​ ಹೋದ ಬಗ್ಗೆ Tweet ಮಾಡಿದ್ದರು.

11 ವರ್ಷದಲ್ಲಿ ಮೊದಲ ಬಾರಿಗೆ ನಾನು ಈ ಹಿಂದೆ ಇಂಧನ ಸಚಿವರನ್ನ ಭೇಟಿಯಾಗಿದ್ದೆ. ಆ ಸಂದರ್ಭದಲ್ಲಿ.. ನಾನು ಲುಟಿಯೆನ್ಸ್​ ದೆಹಲಿಯಲ್ಲಿ 11 ವರ್ಷಗಳಿಂದ ವಾಸವಾಗಿದ್ದೇನೆ. ಆದರೆ, ಈವರೆಗೂ ಬಡಾವಣೆಯಲ್ಲಿ ಒಂದು ಬಾರಿಯೂ ಕರೆಂಟ್​ ಕಟ್​ ಆಗೇ ಇಲ್ಲ ಎಂದು ಹೇಳಿದ್ದೆ. ನನ್ನ ಮಾತು ಕೇಳಿ ಬೀಗಿದ ಸಚಿವರು ಅದು ಹಾಗೆಯೇ ಮುಂದುವರೆಯುವುದು, ಏನೂ ತೊಂದರೆಯಾಗುವುದಿಲ್ಲ ಬಿಡಿ ಎಂದು ಆಶ್ವಾಸನೆ ನೀಡಿದ್ದರು.

ಆದರೆ, ಇಂದು ಬೆಳಗ್ಗೆಯಿಂದ ಐದು ಸಲ ಕರೆಂಟ್​ ಹೋಗಿದೆ. ಕಂಪ್ಲೇಂಟ್​ ಮಾಡೋಣಾ ಅಂದ್ರೆ ವಿದ್ಯುತ್​ ಇಲಾಖೆಯ ಸಹಾಯವಾಣಿ ಸಹ ಸ್ವಿಚ್​ ಆಫ್​ ಆಗಿದೆ ಎಂದು ತಮ್ಮ ಟ್ವೀಟ್​ನಲ್ಲಿ ಶಶಿ ತರೂರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಶಿ ಮಾತಿಗೆ ಪೂರಕವೆಂಬಂತೆ ದೊರಕಿರುವ ಮಾಹಿತಿ ಪ್ರಕಾರ 2011 ರಿಂದ ಈವರೆಗೂ ಲುಟಿಯೆನ್ಸ್​ ದೆಹಲಿಯಲ್ಲಿ ಒಮ್ಮೆಯೂ ಕರೆಂಟ್ ಹೋಗೇ ಇಲ್ಲವಂತೆ! ಹೀಗಾಗಿ, ದೇಶದ ಶಕ್ತಿ ಕೇಂದ್ರವಾಗಿರುವ ಲುಟಿಯೆನ್ಸ್​ ದೆಹಲಿಯಲ್ಲಿ ಈ ಸಲ ಕರೆಂಟ್ ಹೋಗಿರೋದು ನಮ್ಮ ರಾಜಕೀಯ ನಾಯಕರಿಗೆ ಕಸಿವಿಸಿ ಉಂಟುಮಾಡಿದೆ. ಒಟ್ನಲ್ಲಿ, ಈಗಲಾದ್ರೂ ಕರೆಂಟ್​ ಹೋದಾಗ ಜನಸಾಮಾನ್ಯರು ಅನುಭವಿಸುವ ಯಾತನೆ ಹೇಗಿರುತ್ತೆ ಅನ್ನೋ feeling ನಮ್ಮ ನಾಯಕರಿಗೆ ಆಗಿದೆ.

Published On - 2:29 pm, Sat, 1 August 20

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ