AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ವರ್ಷದಲ್ಲಿ ಶಶಿತರೂರ್​ಗೆ ಮೊದಲ ಬಾರಿಗೆ ಪವರ್​ ಕಟ್​ Shock!

ದೆಹಲಿ: ದೇಶದ ನರನಾಡಿಯ ಮೇಲೆ ಹಿಡಿತ ಸಾಧಿಸುವ ಶಕ್ತಿ ಕೇಂದ್ರ ಅಂದರೆ ಅದು ದೆಹಲಿ. ಅದರಲ್ಲೂ ಲುಟಿಯೆನ್ಸ್​ ದೆಹಲಿ (Lutyens Delhi) ಇನ್ನೂ ಹೆಚ್ಚು ಪ್ರತಿಷ್ಠಿತ ಮತ್ತು ಪ್ರಭಾವೀ ಬಡಾವಣೆ. ಪ್ರಧಾನಿ ಮೋದಿಯ ಕಚೇರಿಯಿಂದ ಹಿಡಿದು ವಿವಿಧ ರಾಜಕೀಯ ನಾಯಕರ ಬಂಗಲೆಗಳು ಇದೇ ಭಾಗದಲ್ಲಿ ಇರುವುದು. ಅಂದ ಮೇಲೆ, ಈ ಜಾಗ ಮಹಾಭಾರತದ ಪಾಂಡವರ ರಾಜಧಾನಿ ಇಂದ್ರಪ್ರಸ್ಥದಂತೆ ವೈಭವೋಪೇತವಾಗಿರಲೇ ಬೇಕು. ದಿನದ 24 ಗಂಟೆ ವಾಟರ್​ ಮತ್ತು ಕರೆಂಟ್​ ಸಪ್ಲೈ ಹೀಗೆ ಹತ್ತು ಹಲವಾರು ಸೌಕರ್ಯಗಳು ಇದ್ದೇ […]

11 ವರ್ಷದಲ್ಲಿ ಶಶಿತರೂರ್​ಗೆ ಮೊದಲ ಬಾರಿಗೆ ಪವರ್​ ಕಟ್​ Shock!
ಶಶಿ ತರೂರ್
KUSHAL V
| Edited By: |

Updated on:Aug 01, 2020 | 2:30 PM

Share

ದೆಹಲಿ: ದೇಶದ ನರನಾಡಿಯ ಮೇಲೆ ಹಿಡಿತ ಸಾಧಿಸುವ ಶಕ್ತಿ ಕೇಂದ್ರ ಅಂದರೆ ಅದು ದೆಹಲಿ. ಅದರಲ್ಲೂ ಲುಟಿಯೆನ್ಸ್​ ದೆಹಲಿ (Lutyens Delhi) ಇನ್ನೂ ಹೆಚ್ಚು ಪ್ರತಿಷ್ಠಿತ ಮತ್ತು ಪ್ರಭಾವೀ ಬಡಾವಣೆ. ಪ್ರಧಾನಿ ಮೋದಿಯ ಕಚೇರಿಯಿಂದ ಹಿಡಿದು ವಿವಿಧ ರಾಜಕೀಯ ನಾಯಕರ ಬಂಗಲೆಗಳು ಇದೇ ಭಾಗದಲ್ಲಿ ಇರುವುದು. ಅಂದ ಮೇಲೆ, ಈ ಜಾಗ ಮಹಾಭಾರತದ ಪಾಂಡವರ ರಾಜಧಾನಿ ಇಂದ್ರಪ್ರಸ್ಥದಂತೆ ವೈಭವೋಪೇತವಾಗಿರಲೇ ಬೇಕು. ದಿನದ 24 ಗಂಟೆ ವಾಟರ್​ ಮತ್ತು ಕರೆಂಟ್​ ಸಪ್ಲೈ ಹೀಗೆ ಹತ್ತು ಹಲವಾರು ಸೌಕರ್ಯಗಳು ಇದ್ದೇ ಇರುತ್ತೆ ಅಂತಾ ನೀವು ಅಂದುಕೊಂಡಿದ್ರೇ ಅದು ಸುಳ್ಳು.

ಹಾಗಂತ ನಾವು ಹೇಳುತ್ತಿಲ್ಲ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್​ ನಾಯಕ ಹಾಗೂ ಇದೇ ಲುಟಿಯೆನ್ಸ್​ ದೆಹಲಿಯ ನಿವಾಸಿ ಶಶಿ ತರೂರ್ ಸ್ವತಃ ಹಂಚಿಕೊಂಡಿದ್ದಾರೆ. ತಮ್ಮ ಏರಿಯಾದಲ್ಲಿ ನಿನ್ನೆ ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ಸಲ ಕರೆಂಟ್​ ಹೋದ ಬಗ್ಗೆ Tweet ಮಾಡಿದ್ದರು.

11 ವರ್ಷದಲ್ಲಿ ಮೊದಲ ಬಾರಿಗೆ ನಾನು ಈ ಹಿಂದೆ ಇಂಧನ ಸಚಿವರನ್ನ ಭೇಟಿಯಾಗಿದ್ದೆ. ಆ ಸಂದರ್ಭದಲ್ಲಿ.. ನಾನು ಲುಟಿಯೆನ್ಸ್​ ದೆಹಲಿಯಲ್ಲಿ 11 ವರ್ಷಗಳಿಂದ ವಾಸವಾಗಿದ್ದೇನೆ. ಆದರೆ, ಈವರೆಗೂ ಬಡಾವಣೆಯಲ್ಲಿ ಒಂದು ಬಾರಿಯೂ ಕರೆಂಟ್​ ಕಟ್​ ಆಗೇ ಇಲ್ಲ ಎಂದು ಹೇಳಿದ್ದೆ. ನನ್ನ ಮಾತು ಕೇಳಿ ಬೀಗಿದ ಸಚಿವರು ಅದು ಹಾಗೆಯೇ ಮುಂದುವರೆಯುವುದು, ಏನೂ ತೊಂದರೆಯಾಗುವುದಿಲ್ಲ ಬಿಡಿ ಎಂದು ಆಶ್ವಾಸನೆ ನೀಡಿದ್ದರು.

ಆದರೆ, ಇಂದು ಬೆಳಗ್ಗೆಯಿಂದ ಐದು ಸಲ ಕರೆಂಟ್​ ಹೋಗಿದೆ. ಕಂಪ್ಲೇಂಟ್​ ಮಾಡೋಣಾ ಅಂದ್ರೆ ವಿದ್ಯುತ್​ ಇಲಾಖೆಯ ಸಹಾಯವಾಣಿ ಸಹ ಸ್ವಿಚ್​ ಆಫ್​ ಆಗಿದೆ ಎಂದು ತಮ್ಮ ಟ್ವೀಟ್​ನಲ್ಲಿ ಶಶಿ ತರೂರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಶಿ ಮಾತಿಗೆ ಪೂರಕವೆಂಬಂತೆ ದೊರಕಿರುವ ಮಾಹಿತಿ ಪ್ರಕಾರ 2011 ರಿಂದ ಈವರೆಗೂ ಲುಟಿಯೆನ್ಸ್​ ದೆಹಲಿಯಲ್ಲಿ ಒಮ್ಮೆಯೂ ಕರೆಂಟ್ ಹೋಗೇ ಇಲ್ಲವಂತೆ! ಹೀಗಾಗಿ, ದೇಶದ ಶಕ್ತಿ ಕೇಂದ್ರವಾಗಿರುವ ಲುಟಿಯೆನ್ಸ್​ ದೆಹಲಿಯಲ್ಲಿ ಈ ಸಲ ಕರೆಂಟ್ ಹೋಗಿರೋದು ನಮ್ಮ ರಾಜಕೀಯ ನಾಯಕರಿಗೆ ಕಸಿವಿಸಿ ಉಂಟುಮಾಡಿದೆ. ಒಟ್ನಲ್ಲಿ, ಈಗಲಾದ್ರೂ ಕರೆಂಟ್​ ಹೋದಾಗ ಜನಸಾಮಾನ್ಯರು ಅನುಭವಿಸುವ ಯಾತನೆ ಹೇಗಿರುತ್ತೆ ಅನ್ನೋ feeling ನಮ್ಮ ನಾಯಕರಿಗೆ ಆಗಿದೆ.

Published On - 2:29 pm, Sat, 1 August 20

Follow Us
KUSHAL V
KUSHAL V
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ