AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shatrughan Sinha: ರಾಹುಲ್​ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ: ಶತ್ರುಘ್ನ ಸಿನ್ಹಾ

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ(Rahul Gandhi)ಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

Shatrughan Sinha: ರಾಹುಲ್​ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ: ಶತ್ರುಘ್ನ ಸಿನ್ಹಾ
ಶತ್ರುಘ್ನ ಸಿನ್ಹಾ
TV9 Web
| Edited By: |

Updated on: Jan 09, 2023 | 12:04 PM

Share

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ(Rahul Gandhi)ಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ. ಭಾರತ್ ಜೋಡೋ ಯಾತ್ರೆಯನ್ನು ಐತಿಹಾಸಿಕ ಮತ್ತು ಕ್ರಾಂತಿಕಾರಿ ಯಾತ್ರೆ ಎಂದು ಬಣ್ಣಿಸಿದ ಅವರು, ರಾಹುಲ್ ಗಾಂಧಿ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ ಮತ್ತು ಪ್ರಧಾನಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು. ರಾಹುಲ್ ಗಾಂಧಿಗೆ ಪ್ರಧಾನಿಯಾಗುವ ಸಾಮರ್ಥ್ಯವಿದೆ. ಅವರ ಕುಟುಂಬದ ಸದಸ್ಯರು ಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಕೆಲವರು ರಾಹುಲ್ ಗಾಂಧಿಯವರ ಇಮೇಜ್ ಅನ್ನು ನಾಶಮಾಡಲು ಪ್ರಯತ್ನಿಸುತ್ತಾರೆ ಆದರೆ ಅವರು ದೇಶದ ಅತ್ಯಂತ ಗಂಭೀರ ನಾಯಕರಾಗಿ ಹೊರಹೊಮ್ಮಿದ್ದಾರೆ.

ಮತ್ತಷ್ಟು ಓದಿ: ಜನವರಿ 30ರಂದು ಶ್ರೀನಗರದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಭಾರತ್ ಜೋಡೋ ಯಾತ್ರೆ ಮುಕ್ತಾಯ

ಲೋಕಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಮುಂಬರುವ ಲೋಕಸಭೆ ಚುನಾವಣೆ ಮೇಲೆ ಭಾರತ್ ಜೋಡೋ ಯಾತ್ರೆ ಪ್ರಭಾವ ಬೀರಲಿದೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಅಡ್ವಾಣಿಯವರ ರಥಯಾತ್ರೆಯೊಂದಿಗೆ ಹೋಲಿಕೆ ಭಾರತ್ ಜೋಡೋ ಯಾತ್ರೆಯನ್ನು ಎಲ್‌ಕೆ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ರಥಯಾತ್ರೆಯೊಂದಿಗೆ ಹೋಲಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧವೂ ವಾಗ್ದಾಳಿ ನಡೆಸಿದರು. 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿ ಯಾವಾಗಲೂ ಕೇಳುತ್ತದೆ, ದೇಶಕ್ಕೆ ಐಐಟಿ ಮತ್ತು ಐಐಎಂನಂತಹ ಸಂಸ್ಥೆಗಳನ್ನು ಕೊಟ್ಟವರು ಯಾರು ಎಂದು ಹೇಳಿದರು.

ಶತ್ರುಘ್ನ ಸಿನ್ಹಾ ಅವರು ತಮ್ಮ ಪಕ್ಷದ ವರಿಷ್ಠೆ – ಮಮತಾ ಬ್ಯಾನರ್ಜಿ ಅವರನ್ನು ಶ್ಲಾಘಿಸಿದರು ಮತ್ತು ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಿ ಹೊರಹೊಮ್ಮುವ ಉಕ್ಕಿನ ಮಹಿಳೆ ಎಂದು ಹೇಳಿದರು. ಅವರನ್ನು ಯಾರೂ ಲಘುವಾಗಿ ಪರಿಗಣಿಸಬೇಡಿ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು