AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಖ್ ಹಸೀನಾ ಭಾಷಣಕ್ಕೂ ಭಾರತಕ್ಕೂ ಸಂಬಂಧವಿಲ್ಲ; ಬಾಂಗ್ಲಾದೇಶ ರಾಯಭಾರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್ ಜಾರಿ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಭಾಷಣ ವಿವಾದಕ್ಕೀಡಾಗುತ್ತಿದ್ದಂತೆ ಬಾಂಗ್ಲಾಕ್ಕೆ ಭಾರತ ಸ್ಪಷ್ಟನೆ ನೀಡಿದೆ. ಅವರ ಭಾಷಣ ವೈಯಕ್ತಿಕ ಸಂಗತಿ. ಎಲ್ಲ ವಿಷಯಕ್ಕೂ ಭಾರತ ಮತ್ತು ಶೇಖ್ ಹಸೀನಾ ನಡುವೆ ಸಂಬಂಧ ಕಲ್ಪಿಸಬೇಡಿ ಎಂದು ಭಾರತವು ಬಾಂಗ್ಲಾದೇಶದ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದೆ. ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ನೇತೃತ್ವದ ಬೃಹತ್ ಪ್ರತಿಭಟನೆಯು ಶೇಖ್ ಹಸೀನಾ ನೇತೃತ್ವದ 16 ವರ್ಷಗಳ ಅವಾಮಿ ಲೀಗ್ ಸರ್ಕಾರವನ್ನು ಪತನಗೊಳಿಸಿತು. ಇದಾದ ನಂತರ ಅವರು ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಭಾರತಕ್ಕೆ ಪಲಾಯನ ಮಾಡಿದರು.

ಶೇಖ್ ಹಸೀನಾ ಭಾಷಣಕ್ಕೂ ಭಾರತಕ್ಕೂ ಸಂಬಂಧವಿಲ್ಲ; ಬಾಂಗ್ಲಾದೇಶ ರಾಯಭಾರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್ ಜಾರಿ
Sheikh Hasina
ಸುಷ್ಮಾ ಚಕ್ರೆ
|

Updated on: Feb 07, 2025 | 10:28 PM

Share

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಭಾರತ ದೇಶದಲ್ಲಿದ್ದಾಗ ನೀಡಿದ ಹೇಳಿಕೆಗಳ ಕುರಿತು ಬಾಂಗ್ಲಾದೇಶ ಭಾರತ ಸರ್ಕಾರಕ್ಕೆ ತನ್ನ ಆಕ್ಷೇಪಣೆ ಸಲ್ಲಿಸಿತ್ತು. ಇದಾದ ನಂತರ, ಭಾರತದ ವಿದೇಶಾಂಗ ಸಚಿವಾಲಯವು ಇಂದು ಭಾರತದಲ್ಲಿರುವ ಬಾಂಗ್ಲಾದೇಶದ ಹಂಗಾಮಿ ಹೈಕಮಿಷನರ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಶೇಖ್ ಹಸೀನಾ ಅವರ ಹೇಳಿಕೆಗಳನ್ನು ಅವರ “ವೈಯಕ್ತಿಕ ವಿಚಾರ” ಎಂದಿರುವ ಮೋದಿ ಸರ್ಕಾರ ಅದರಲ್ಲಿ ಭಾರತದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದೆ. ಶೇಖ್ ಹಸೀನಾ ಅವರ ಹೇಳಿಕೆಗಳನ್ನು ಭಾರತ ಸರ್ಕಾರದ ನಿಲುವಿನ ಜೊತೆ ಲಿಂಕ್ ಮಾಡುವುದು ದ್ವಿಪಕ್ಷೀಯ ಸಂಬಂಧಗಳನ್ನು ಸುಧಾರಿಸಲು ಸಹಾಯ ಮಾಡುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಭಾರತವು ಬಾಂಗ್ಲಾದೇಶದೊಂದಿಗೆ ಸಕಾರಾತ್ಮಕ, ರಚನಾತ್ಮಕ ಮತ್ತು ಪರಸ್ಪರ ಪ್ರಯೋಜನಕಾರಿ ಸಂಬಂಧವನ್ನು ಬಯಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನು ಇತ್ತೀಚಿನ ಉನ್ನತ ಮಟ್ಟದ ಸಭೆಗಳಲ್ಲಿ ಹಲವಾರು ಬಾರಿ ಪುನರುಚ್ಚರಿಸಲಾಗಿದೆ. ಆದರೂ ಬಾಂಗ್ಲಾದೇಶದ ಅಧಿಕಾರಿಗಳು ಭಾರತವನ್ನು ನಕಾರಾತ್ಮಕವಾಗಿ ಚಿತ್ರಿಸುತ್ತಲೇ ಇರುವುದು ವಿಷಾದಕರ. ಬಾಂಗ್ಲಾದೇಶ ಆಂತರಿಕ ಆಡಳಿತ ಸಮಸ್ಯೆಗಳಿಗೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೀಸಾ ವಿಸ್ತರಣೆ ಬೆನ್ನಲ್ಲೇ ಶೇಖ್ ಹಸೀನಾ ಪಾಸ್‌ಪೋರ್ಟ್ ರದ್ದುಗೊಳಿಸಲು ಭಾರತಕ್ಕೆ ಬಾಂಗ್ಲಾದೇಶ ಒತ್ತಾಯ

ಪರಸ್ಪರ ಪ್ರಯೋಜನಕಾರಿ ಸಂಬಂಧಕ್ಕಾಗಿ ಭಾರತ ಸರ್ಕಾರ ಪ್ರಯತ್ನಗಳನ್ನು ಮಾಡುತ್ತದೆ. ಅದರಂತೆ ಬಾಂಗ್ಲಾದೇಶ ಕೂಡ ಆ ವಾತಾವರಣವನ್ನು ಹಾಳು ಮಾಡದೆ ಅದೇ ರೀತಿ ಪ್ರತಿಕ್ರಿಯಿಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಜೈಸ್ವಾಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

77 ವರ್ಷದ ಶೇಖ್ ಹಸೀನಾ ಅವರು ಕಳೆದ ವರ್ಷ ಆಗಸ್ಟ್ 5ರಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ. ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ನೇತೃತ್ವದ ಬೃಹತ್ ಪ್ರತಿಭಟನೆಯು ಅವರ 16 ವರ್ಷಗಳ ಅವಾಮಿ ಲೀಗ್ ಸರ್ಕಾರವನ್ನು ಪತನಗೊಳಿಸಿತು. ಇದಾದ ನಂತರ ಅವರು ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಭಾರತಕ್ಕೆ ಪಲಾಯನ ಮಾಡಿದರು. ಅಂದಿನಿಂದ ಅವರಿಗೆ ದೆಹಲಿಯಲ್ಲಿ ಆಶ್ರಯ ನೀಡಲಾಗಿದೆ.

ಶೇಖ್ ಹಸೀನಾ ಅವರ ಭಾಷಣದಲ್ಲೇನಿತ್ತು?:

ಢಾಕಾದಲ್ಲಿ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಮನೆಯ ಮೇಲೆ ಇತ್ತೀಚೆಗೆ ನಡೆದ ಹಿಂಸಾಚಾರ, ದಾಳಿಗೆ ಶೇಖ್ ಹಸೀನಾ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದರು. ಇದಾದ ನಂತರ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಯಿತು. ಈ ದಾಳಿಯನ್ನು ಖಂಡಿಸಿದ ಶೇಖ್ ಹಸೀನಾ, “ಅವರು ಕಟ್ಟಡವನ್ನು ಕೆಡವಬಹುದು, ಆದರೆ ಇತಿಹಾಸವನ್ನು ಅಲ್ಲ. ಇತಿಹಾಸವು ತನ್ನ ಸೇಡು ತೀರಿಸಿಕೊಳ್ಳುತ್ತದೆ ಎಂಬುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ: ಶೇಖ್ ಹಸೀನಾ ಹಸ್ತಾಂತರದ ಬಗ್ಗೆ ಬಾಂಗ್ಲಾದೇಶಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ; ಸಂಸತ್​ಗೆ ಸರ್ಕಾರ ಮಾಹಿತಿ

“ಇಂದು ನಮ್ಮ ತಂದೆಯ ಮನೆಯನ್ನು ಕೆಡವಲಾಗುತ್ತಿದೆ. ಆ ಮನೆ ಯಾವ ಅಪರಾಧ ಮಾಡಿದೆ? ಅವರು ಮನೆಯ ಬಗ್ಗೆ ಏಕೆ ಭಯಪಡುತ್ತಿದ್ದರು? ನಾನು ದೇಶದ ಜನರಿಂದ ನ್ಯಾಯವನ್ನು ಕೇಳುತ್ತೇನೆ. ನಾನು ನಿಮಗಾಗಿ ಏನನ್ನೂ ಮಾಡಲಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದರು.

ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು ಢಾಕಾದಲ್ಲಿರುವ ಭಾರತದ ಹಂಗಾಮಿ ಹೈಕಮಿಷನರ್ ಅವರನ್ನು ಕರೆಸಿ, ಭಾರತದಲ್ಲಿರುವ ಶೇಖ್ ಹಸೀನಾ ನೀಡಿದ ಹೇಳಿಕೆಗಳ ವಿರುದ್ಧ ಬಲವಾದ ಪ್ರತಿಭಟನೆಯನ್ನು ಸಲ್ಲಿಸಿತು. ಶೇಖ್ ಹಸೀನಾ ಸುಳ್ಳು, ಕಲ್ಪಿತ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನು ತಡೆಯಲು ಬಾಂಗ್ಲಾದೇಶ ಭಾರತವನ್ನು ವಿನಂತಿಸಿತು. ಶೇಖ್ ಹಸೀನಾ ಅವರ ಇಂತಹ ಚಟುವಟಿಕೆಗಳನ್ನು ಬಾಂಗ್ಲಾದೇಶದ ವಿರುದ್ಧದ ಪ್ರತಿಕೂಲ ಕೃತ್ಯವೆಂದು ಪರಿಗಣಿಸಲಾಗಿದೆ ಎಂದು ಅದು ಹೇಳಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ