AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಶೀಗೆಲ್ಲಾ ಸೋಂಕು: ಓರ್ವ ಬಾಲಕ ಸಾವು

ಕೇರಳದಲ್ಲಿ ಶೀಗೆಲ್ಲಾ ಬ್ಯಾಕ್ಟೀರಿಯಾದಿಂದ ಬರುವ ಶೀಗೆಲ್ಲೋಸಿಸ್ ರೋಗಕ್ಕೆ 11ರ ಹರೆಯದ ಬಾಲಕನೊಬ್ಬ ಸಾವಿಗೀಡಾಗಿದ್ದಾನೆ. ಉತ್ತರ ಕೇರಳದ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಶೀಗೆಲ್ಲಾ ಸೋಂಕು: ಓರ್ವ ಬಾಲಕ ಸಾವು
ಶೀಗೆಲ್ಲಾ ಬ್ಯಾಕ್ಟೀರಿಯಾ ( ಪ್ರಾತಿನಿಧಿಕ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 20, 2020 | 2:56 PM

Share

ಕೋಯಿಕ್ಕೋಡ್: ಕೇರಳದಲ್ಲಿ ಶೀಗೆಲ್ಲಾ ಬ್ಯಾಕ್ಟೀರಿಯಾ ಸೋಂಕು ಮತ್ತೆ ಕಾಣಿಸಿಕೊಂಡಿದ್ದು, ಕೋಯಿಕ್ಕೋಡ್ ಜಿಲ್ಲೆಯಲ್ಲಿ 11ರ ಹರೆಯದ ಬಾಲಕ ಸೋಂಕಿನಿಂದ ಮೃತಪಟ್ಟಿದ್ದಾನೆ. 2 ದಿನಗಳ ಹಿಂದೆ ಬಾಲಕ ಮೃತಪಟ್ಟಿದ್ದು, ಉತ್ತರ ಕೇರಳದಲ್ಲಿ 50ಕ್ಕಿಂತಲೂ ಹೆಚ್ಚು ಮಂದಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ.

ಶೀಗೆಲ್ಲಾ ಸೋಂಕು ಹರಡುವಿಕೆ ತಡೆಯಲು ಆರೋಗ್ಯ ಇಲಾಖೆ ಮತ್ತು ಕೋಯಿಕ್ಕೋಡ್ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಎಸ್. ಸಾಂಬಾಶಿವರಾವ್ ಅವರ ನೇತೃತ್ವದಲ್ಲಿನ ತಂಡವು ರೋಗ ಪತ್ತೆಯಾಗಿರುವ ಕೋಟ್ಟಪರಂಬ್ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕಿದೆ. ಭಾನುವಾರ ಇಲ್ಲಿ ನಡೆದ ವೈದ್ಯಕೀಯ ಶಿಬಿರದಲ್ಲಿ 29 ಮಂದಿಗೆ ಸೋಂಕು ಇರುವುದಾಗಿ ಪತ್ತೆಯಾಗಿತ್ತು. ಇದರಲ್ಲಿ 2 ವರ್ಷದ ಕೆಳಗಿನ ಇಬ್ಬರು ಮಕ್ಕಳನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಲಾಗಿದೆ.

ರೋಗದ ಬಗ್ಗೆ ನಿರ್ಲಕ್ಷ್ಯ ಬೇಡ, ಸೋಂಕು ಹರಡುವುದನ್ನು ತಡೆಯಲು ಶುಚಿತ್ವ ಕಾಪಾಡಿ ಎಂದು ಕೇರಳದ ಆರೋಗ್ಯ ಸಚಿಕೆ ಕೆ.ಕೆ ಶೈಲಜಾ ಹೇಳಿದ್ದಾರೆ.

ಕಳೆದ ವರ್ಷ ಕೀಳಪಯ್ಯನ್ನೂರ್ ವೆಸ್ಟ್ ಎಲ್​​ಪಿ ಶಾಲೆಯ 40 ಮಕ್ಕಳಿಗೆ ವಾಂತಿ ಬೇಧಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿದ್ಯಾರ್ಥಿಗಳ ಮಲದ ಮಾದರಿ ಪರೀಕ್ಷೆಗೊಳಪಡಿಸಿದಾಗ ಶೀಗೆಲ್ಲಾ ಬ್ಯಾಕ್ಟೀರಿಯಾ ಇರುವುದು ಪತ್ತೆಯಾಗಿತ್ತು. ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳ ಮನೆಯಲ್ಲಿ ಬಳಸುವ ನೀರು ಪರೀಕ್ಷೆಗೊಳಪಡಿಸಿದಾಗ ನೀರಿನಲ್ಲಿ ಈ ಬ್ಯಾಕ್ಟೀರಿಯಾ ಇರುವುದನ್ನು ಜಿಲ್ಲಾ ಆರೋಗ್ಯ ಇಲಾಖೆ ಪತ್ತೆ ಹಚ್ಚಿತ್ತು.

ಆರೋಗ್ಯ ತಜ್ಞರ ಪ್ರಕಾರ ಶೀಗೆಲ್ಲೋಸಿಸ್ ಎಂಬ ರೋಗಕ್ಕೆ ಶೀಗೆಲ್ಲಾ ಬ್ಯಾಕ್ಟೀರಿಯಾ ಕಾರಣ. ಹೊಟ್ಟೆನೋವು , ಬೇಧಿ ಮತ್ತು ಜ್ವರ ರೋಗಲಕ್ಷಣಗಳು. ಅಭಿವೃದ್ಧಿಶೀಲ ದೇಶಗಳಲ್ಲಿ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಜನನಿಬಿಡ ಪ್ರದೇಶಗಳಲ್ಲಿ ಶುಚಿತ್ವದ ಕೊರತೆ ಇರುವೆಡೆ ಈ ಸೋಂಕು ಹರಡಿಕೊಳ್ಳುತ್ತದೆ. ಕೆಲವೊಬ್ಬರಿಗೆ ಸೋಂಕು ಬಾಧಿಸಿದರೂ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಆದರೂ ಇವರು ರೋಗವಾಹಕರಾಗುತ್ತಾರೆ.

ಕಲುಷಿತ ನೀರು ಮತ್ತು ಆಹಾರದ ಮೂಲಕವೂ ಸೋಂಕು ಹರಡುತ್ತದೆ. ಆದರೆ ಆಹಾರದ ಮೂಲಕ ಹರಡುವಿಕೆಯ ಸಾಧ್ಯತೆ ಕಡಿಮೆ ಅಂತಾರೆ ಅಧಿಕಾರಿಗಳು. ಸೋಂಕು ಪ್ರಕರಣಗಳು ವರದಿಯಾಗಿರುವ ಪ್ರದೇಶಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆ ಸಮುದಾಯ ವೈದ್ಯಕೀಯ ಇಲಾಖೆಗೆ ನಿರ್ದೇಶಿಸಿದೆ.

ಈ ಸೋಂಕು ಮಾರಣಾಂತಿಕ ಅಲ್ಲದೇ ಇದ್ದರೂ ನಿರ್ಜಲೀಕರಣದಿಂದಾಗಿ ದೇಹಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ನಿರ್ಲಕ್ಷ್ಯ ಸಲ್ಲದು. ರೋಗ ಲಕ್ಷಣ ಕಂಡ ಕೂಡಲೇ ಚಿಕಿತ್ಸೆ ಪಡೆಯಬೇಕು ಮತ್ತು ಶುಚಿತ್ವ ಕಾಪಾಡಬೇಕು ಎಂದು ಕೋಯಿಕ್ಕೋಡ್ ಬೇಬಿ ಮೆಮೊರಿಯಲ್ ಆಸ್ಪತ್ರೆಯ ತುರ್ತು ನಿಗಾ ಘಟಕದ ಮುಖ್ಯಸ್ಥ ಡಾ. ಸಿ. ಅನೂಪ್ ಕುಮಾರ್ ಹೇಳಿದ್ದಾರೆ.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ