AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಶೀಗೆಲ್ಲಾ ಸೋಂಕು: ಓರ್ವ ಬಾಲಕ ಸಾವು

ಕೇರಳದಲ್ಲಿ ಶೀಗೆಲ್ಲಾ ಬ್ಯಾಕ್ಟೀರಿಯಾದಿಂದ ಬರುವ ಶೀಗೆಲ್ಲೋಸಿಸ್ ರೋಗಕ್ಕೆ 11ರ ಹರೆಯದ ಬಾಲಕನೊಬ್ಬ ಸಾವಿಗೀಡಾಗಿದ್ದಾನೆ. ಉತ್ತರ ಕೇರಳದ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಶೀಗೆಲ್ಲಾ ಸೋಂಕು: ಓರ್ವ ಬಾಲಕ ಸಾವು
ಶೀಗೆಲ್ಲಾ ಬ್ಯಾಕ್ಟೀರಿಯಾ ( ಪ್ರಾತಿನಿಧಿಕ ಚಿತ್ರ)
ರಶ್ಮಿ ಕಲ್ಲಕಟ್ಟ
| Edited By: |

Updated on: Dec 20, 2020 | 2:56 PM

Share

ಕೋಯಿಕ್ಕೋಡ್: ಕೇರಳದಲ್ಲಿ ಶೀಗೆಲ್ಲಾ ಬ್ಯಾಕ್ಟೀರಿಯಾ ಸೋಂಕು ಮತ್ತೆ ಕಾಣಿಸಿಕೊಂಡಿದ್ದು, ಕೋಯಿಕ್ಕೋಡ್ ಜಿಲ್ಲೆಯಲ್ಲಿ 11ರ ಹರೆಯದ ಬಾಲಕ ಸೋಂಕಿನಿಂದ ಮೃತಪಟ್ಟಿದ್ದಾನೆ. 2 ದಿನಗಳ ಹಿಂದೆ ಬಾಲಕ ಮೃತಪಟ್ಟಿದ್ದು, ಉತ್ತರ ಕೇರಳದಲ್ಲಿ 50ಕ್ಕಿಂತಲೂ ಹೆಚ್ಚು ಮಂದಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ.

ಶೀಗೆಲ್ಲಾ ಸೋಂಕು ಹರಡುವಿಕೆ ತಡೆಯಲು ಆರೋಗ್ಯ ಇಲಾಖೆ ಮತ್ತು ಕೋಯಿಕ್ಕೋಡ್ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಎಸ್. ಸಾಂಬಾಶಿವರಾವ್ ಅವರ ನೇತೃತ್ವದಲ್ಲಿನ ತಂಡವು ರೋಗ ಪತ್ತೆಯಾಗಿರುವ ಕೋಟ್ಟಪರಂಬ್ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕಿದೆ. ಭಾನುವಾರ ಇಲ್ಲಿ ನಡೆದ ವೈದ್ಯಕೀಯ ಶಿಬಿರದಲ್ಲಿ 29 ಮಂದಿಗೆ ಸೋಂಕು ಇರುವುದಾಗಿ ಪತ್ತೆಯಾಗಿತ್ತು. ಇದರಲ್ಲಿ 2 ವರ್ಷದ ಕೆಳಗಿನ ಇಬ್ಬರು ಮಕ್ಕಳನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಲಾಗಿದೆ.

ರೋಗದ ಬಗ್ಗೆ ನಿರ್ಲಕ್ಷ್ಯ ಬೇಡ, ಸೋಂಕು ಹರಡುವುದನ್ನು ತಡೆಯಲು ಶುಚಿತ್ವ ಕಾಪಾಡಿ ಎಂದು ಕೇರಳದ ಆರೋಗ್ಯ ಸಚಿಕೆ ಕೆ.ಕೆ ಶೈಲಜಾ ಹೇಳಿದ್ದಾರೆ.

ಕಳೆದ ವರ್ಷ ಕೀಳಪಯ್ಯನ್ನೂರ್ ವೆಸ್ಟ್ ಎಲ್​​ಪಿ ಶಾಲೆಯ 40 ಮಕ್ಕಳಿಗೆ ವಾಂತಿ ಬೇಧಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿದ್ಯಾರ್ಥಿಗಳ ಮಲದ ಮಾದರಿ ಪರೀಕ್ಷೆಗೊಳಪಡಿಸಿದಾಗ ಶೀಗೆಲ್ಲಾ ಬ್ಯಾಕ್ಟೀರಿಯಾ ಇರುವುದು ಪತ್ತೆಯಾಗಿತ್ತು. ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳ ಮನೆಯಲ್ಲಿ ಬಳಸುವ ನೀರು ಪರೀಕ್ಷೆಗೊಳಪಡಿಸಿದಾಗ ನೀರಿನಲ್ಲಿ ಈ ಬ್ಯಾಕ್ಟೀರಿಯಾ ಇರುವುದನ್ನು ಜಿಲ್ಲಾ ಆರೋಗ್ಯ ಇಲಾಖೆ ಪತ್ತೆ ಹಚ್ಚಿತ್ತು.

ಆರೋಗ್ಯ ತಜ್ಞರ ಪ್ರಕಾರ ಶೀಗೆಲ್ಲೋಸಿಸ್ ಎಂಬ ರೋಗಕ್ಕೆ ಶೀಗೆಲ್ಲಾ ಬ್ಯಾಕ್ಟೀರಿಯಾ ಕಾರಣ. ಹೊಟ್ಟೆನೋವು , ಬೇಧಿ ಮತ್ತು ಜ್ವರ ರೋಗಲಕ್ಷಣಗಳು. ಅಭಿವೃದ್ಧಿಶೀಲ ದೇಶಗಳಲ್ಲಿ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಜನನಿಬಿಡ ಪ್ರದೇಶಗಳಲ್ಲಿ ಶುಚಿತ್ವದ ಕೊರತೆ ಇರುವೆಡೆ ಈ ಸೋಂಕು ಹರಡಿಕೊಳ್ಳುತ್ತದೆ. ಕೆಲವೊಬ್ಬರಿಗೆ ಸೋಂಕು ಬಾಧಿಸಿದರೂ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಆದರೂ ಇವರು ರೋಗವಾಹಕರಾಗುತ್ತಾರೆ.

ಕಲುಷಿತ ನೀರು ಮತ್ತು ಆಹಾರದ ಮೂಲಕವೂ ಸೋಂಕು ಹರಡುತ್ತದೆ. ಆದರೆ ಆಹಾರದ ಮೂಲಕ ಹರಡುವಿಕೆಯ ಸಾಧ್ಯತೆ ಕಡಿಮೆ ಅಂತಾರೆ ಅಧಿಕಾರಿಗಳು. ಸೋಂಕು ಪ್ರಕರಣಗಳು ವರದಿಯಾಗಿರುವ ಪ್ರದೇಶಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆ ಸಮುದಾಯ ವೈದ್ಯಕೀಯ ಇಲಾಖೆಗೆ ನಿರ್ದೇಶಿಸಿದೆ.

ಈ ಸೋಂಕು ಮಾರಣಾಂತಿಕ ಅಲ್ಲದೇ ಇದ್ದರೂ ನಿರ್ಜಲೀಕರಣದಿಂದಾಗಿ ದೇಹಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ನಿರ್ಲಕ್ಷ್ಯ ಸಲ್ಲದು. ರೋಗ ಲಕ್ಷಣ ಕಂಡ ಕೂಡಲೇ ಚಿಕಿತ್ಸೆ ಪಡೆಯಬೇಕು ಮತ್ತು ಶುಚಿತ್ವ ಕಾಪಾಡಬೇಕು ಎಂದು ಕೋಯಿಕ್ಕೋಡ್ ಬೇಬಿ ಮೆಮೊರಿಯಲ್ ಆಸ್ಪತ್ರೆಯ ತುರ್ತು ನಿಗಾ ಘಟಕದ ಮುಖ್ಯಸ್ಥ ಡಾ. ಸಿ. ಅನೂಪ್ ಕುಮಾರ್ ಹೇಳಿದ್ದಾರೆ.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ