Shimla Mosque Row: ಸಂಜೌಲಿ ಮಸೀದಿ ಗಲಭೆ; ಶಿಮ್ಲಾದಲ್ಲಿ ಹಿಂದೂಗಳು ಪ್ರತಿಭಟನೆ ನಡೆಸುತ್ತಿರುವುದು ಏಕೆ?

ಶಿಮ್ಲಾದ ಸಂಜೌಲಿ ಪ್ರದೇಶದಲ್ಲಿನ ಮಸೀದಿಯಲ್ಲಿನ ಅಕ್ರಮ ಕಟ್ಟಡವನ್ನು ಕೆಡವಲು ಒತ್ತಾಯಿಸಿದ ಹಿಂದೂ ಪ್ರತಿಭಟನಾಕಾರರು ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದ ನಂತರ ಭದ್ರತಾ ಪಡೆ ಸಿಬ್ಬಂದಿ ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ "ಜೈ ಶ್ರೀ ರಾಮ್" ಮತ್ತು "ಹಿಂದೂ ಏಕತಾ ಜಿಂದಾಬಾದ್" ಘೋಷಣೆಗಳು ಮೊಳಗಿದವು.

Shimla Mosque Row: ಸಂಜೌಲಿ ಮಸೀದಿ ಗಲಭೆ; ಶಿಮ್ಲಾದಲ್ಲಿ ಹಿಂದೂಗಳು ಪ್ರತಿಭಟನೆ ನಡೆಸುತ್ತಿರುವುದು ಏಕೆ?
ಶಿಮ್ಲಾದಲ್ಲಿ ಹಿಂದೂಗಳ ಪ್ರತಿಭಟನೆ
Follow us
|

Updated on: Sep 11, 2024 | 2:59 PM

ಶಿಮ್ಲಾ: ಇಂದು ಬೆಳಗ್ಗೆ ಸಂಜೌಲಿ ಪ್ರದೇಶದಲ್ಲಿ ಅಕ್ರಮ ಮಸೀದಿ ನಿರ್ಮಾಣವನ್ನು ವಿರೋಧಿಸಿ ಪ್ರತಿಭಟನೆ ವೇಳೆ ಸ್ಥಳೀಯರು ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದರು. ಈ ವೇಳೆ “ಜೈ ಶ್ರೀರಾಮ್” ಮತ್ತು “ಭಾರತ್ ಮಾತಾ ಕೀ ಜೈ” ಎಂಬ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಮಸೀದಿಯತ್ತ ಮೆರವಣಿಗೆ ನಡೆಸುತ್ತಿರುವ ದೃಶ್ಯಗಳು ಕಂಡುಬಂದವು.

ಶಿಮ್ಲಾದಲ್ಲಿ ನೂರಾರು ಪ್ರತಿಭಟನಾಕಾರರು ಢಲ್ಲಿಯ ಸಬ್ಜಿ ಮಂಡಿಯಲ್ಲಿ ಜಮಾಯಿಸಿದರು. ತಮ್ಮ ಪ್ರತಿಭಟನೆಯನ್ನು ನಡೆಸಲು ಸಂಜೌಲಿ ಕಡೆಗೆ ಮೆರವಣಿಗೆ ನಡೆಸಿದರು. ಧಲ್ಲಿ ಸುರಂಗದ ಬಳಿ ನಿರ್ಮಿಸಲಾದ ಬ್ಯಾರಿಕೇಡ್‌ಗಳನ್ನು ಮುರಿದರು. ಹಿಂದೂ ಸಂಘಟನೆಗಳ ಕರೆಯ ಮೇರೆಗೆ ಜಮಾಯಿಸಿದ ಪ್ರತಿಭಟನಾಕಾರರು ಮಸೀದಿ ಬಳಿಯ ಎರಡನೇ ಬ್ಯಾರಿಕೇಡ್ ಅನ್ನು ಒಡೆದು ಹಾಕಿದಾಗ, ಪೊಲೀಸರು ಲಾಠಿ ಚಾರ್ಜ್ ಮಾಡಿ ಅವರನ್ನು ಚದುರಿಸಲು ಜಲಫಿರಂಗಿಗಳನ್ನು ಬಳಸಿದರು.

ಸಂಜೌಲಿ ಮಸೀದಿಯಲ್ಲಿ ಅನಧಿಕೃತ ನಿರ್ಮಾಣದ ಕುರಿತು ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಮತ್ತು ವಿವಾದಿತ ಕಟ್ಟಡವನ್ನು ಕೆಡವಲು ಒತ್ತಾಯಿಸಿ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಂದ್‌ನ ನಡುವೆ ಸಂಜೌಲಿ ಮತ್ತು ಅದರ ಪಕ್ಕದ ಪ್ರದೇಶಗಳನ್ನು ಭಾರೀ ಪೊಲೀಸ್ ನಿಯೋಜನೆಯೊಂದಿಗೆ ಕೋಟೆಯಾಗಿ ಪರಿವರ್ತಿಸಲಾಗಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶ: ಶಿಮ್ಲಾದಲ್ಲಿ ‘ಅಕ್ರಮವಾಗಿ ನಿರ್ಮಿಸಿದ’ ಮಸೀದಿ ಕೆಡವಿ ಎಂದು ಒತ್ತಾಯಿಸಿ ಪ್ರತಿಭಟನೆ

ಶಿಮ್ಲಾ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ 5ಕ್ಕಿಂತ ಹೆಚ್ಚು ಜನರನ್ನು ಒಟ್ಟುಗೂಡಿಸುವುದು, ಮಾರಕ ಆಯುಧಗಳು ಮತ್ತು ಶಸ್ತ್ರಾಸ್ತ್ರಗಳನ್ನು ಒಯ್ಯುವುದನ್ನು ನಿಷೇಧಿಸಿ ನಿಷೇಧಾಜ್ಞೆ ಹೊರಡಿಸಿದೆ.

ಮಸೀದಿಯ ಮೌಲ್ವಿಯಾದ ಶಹಜಾದ್ ಇಮಾಮ್ ಈ ರಚನೆಯು 1947ಕ್ಕೂ ಹಿಂದಿನದು ಎಂದು ಹೇಳಿದ್ದಾರೆ. ಆದರೆ ಇದರ ವಿಸ್ತೃತ ನಿರ್ಮಾಣವು 2007ರ ನಂತರ ನಡೆಯಿತು. ಇದು ಅಕ್ರಮ ಎಂದು ಆರೋಪಿಸಿ 2010ರಲ್ಲಿ ಮಸೀದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಮಸೀದಿಯಲ್ಲಿ ಕಳೆದ 14 ವರ್ಷಗಳಲ್ಲಿ 4 ಹೊಸ ಮಹಡಿಗಳನ್ನು ಸೇರಿಸಲಾಗಿದೆ. ಈ ಕುರಿತು 44 ಬಾರಿ ಮಹಾನಗರ ಪಾಲಿಕೆ ಯಾವುದೇ ನಿರ್ಣಯವಿಲ್ಲದೆ ವಿಚಾರಣೆ ನಡೆಸಿದೆ.

ಇದನ್ನೂ ಓದಿ: ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ವ್ಯಕ್ತಿ

ಆಗಸ್ಟ್ 30ರಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅರ್ಧ ಡಜನ್ ಜನರು ಮಲ್ಯಾಣ ಪ್ರದೇಶದಲ್ಲಿ ಉದ್ಯಮಿ ಮತ್ತು ಇತರ ಕೆಲವು ವ್ಯಾಪಾರಿಗಳ ಮೇಲೆ ರಾಡ್ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿ ನಾಲ್ವರನ್ನು ಗಾಯಗೊಳಿಸಿದರು. ಉದ್ಯಮಿ ಯಶಪಾಲ್ ಸಿಂಗ್ ಶಿಮ್ಲಾ ಬಳಿಯ ಕಸುಂಪ್ಟಿ ಅಸೆಂಬ್ಲಿಯಲ್ಲಿ ಮಲ್ಯಾನದವರು ಎಂದು ವರದಿಯಾಗಿದೆ.

ಪ್ರತಿಭಟನೆ ಶುರುವಾಗಿದ್ದು ಹೇಗೆ?

ಹಿಂದೂ ಸಂಘಟನೆಗಳು ಕಳೆದ ವಾರ ವಿಧಾನಸೌಧದ ಸುತ್ತಮುತ್ತಲಿನ ಚೌರಾ ಮೈದಾನದಲ್ಲಿ “ಕಾನೂನುಬಾಹಿರ” ಮಸೀದಿಯನ್ನು ಕೆಡವಲು ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದವು. ಸಂಜೌಲಿಯ ಹೊರಗಿನ ಪ್ರದೇಶವಾದ ಮಲ್ಯಾನಾದಲ್ಲಿ ಜನರು ಜಮಾಯಿಸಿದರು ಮತ್ತು ಅಲ್ಲಿರುವ ಮಸೀದಿಯನ್ನು ಕೆಡವಲು ಒತ್ತಾಯಿಸಿದರು. ಈ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಮಸೀದಿಯ 4 ಮಹಡಿಗಳು ಅಕ್ರಮವಾಗಿದೆ. ಕಾನೂನು ಬಾಹಿರವಾಗಿ ಯಾವುದಾದರೂ ಕಟ್ಟಡ ನಿರ್ಮಿಸಿದರೆ ಅದನ್ನು ತಕ್ಷಣವೇ ಕೆಡವಲಾಗುತ್ತದೆ. 10 ವರ್ಷ ಕಳೆದರೂ ಮಸೀದಿಯ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಅಕ್ರಮ ಮಸೀದಿಯನ್ನು ಕೆಡವಬೇಕು’ ಎಂದು ಪ್ರತಿಭಟನೆ ವೇಳೆ ಒತ್ತಾಯಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು