AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಪ್​ಗೆ ಒಳಗಾಗಬೇಡಿ.. ನೇರವಾಗಿ ಪ್ರಧಾನಿ ಜತೆಯೇ ಮಾತುಕತೆ ನಡೆಸಿ.. ರೈತರನ್ನು ಒತ್ತಾಯಿಸಿದ ಅಕಾಲಿ ದಳ, ಕಾಂಗ್ರೆಸ್​

ರೈತರೊಂದಿಗೆ ಮೊದಲು ಗೃಹ ಸಚಿವ ಅಮಿತ್ ಷಾ ಮಾತುಕತೆ ನಡೆಸಿದರು. ಅದು ವಿಫಲವಾದ ಬಳಿಕ ಮುಂದಿನ ಹಂತದ ಮತುಕತೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇರಬೇಕಿತ್ತು. ಆದರೆ ಒಂದು ಹಂತ ಹಿಂದೆಯೇ ಹೋಗಿದೆ.. ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಟ್ರಾಪ್​ಗೆ ಒಳಗಾಗಬೇಡಿ.. ನೇರವಾಗಿ ಪ್ರಧಾನಿ ಜತೆಯೇ ಮಾತುಕತೆ ನಡೆಸಿ.. ರೈತರನ್ನು ಒತ್ತಾಯಿಸಿದ ಅಕಾಲಿ ದಳ, ಕಾಂಗ್ರೆಸ್​
ಪ್ರಧಾನ ಮಂತ್ರಿ ನರೇಂದ್ರ ಮೋದಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 30, 2020 | 5:27 PM

Share

ಚಂಡಿಗಢ​: ಕೃಷಿ ಕಾಯ್ದೆಗಳಿಂದಾಗುವ ಸಮಸ್ಯೆಗಳ ಬಗ್ಗೆ ನೀವು ನೇರವಾಗಿ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಬಳಿಯೇ ಮಾತನಾಡಿ ಎಂದು ಶಿರೋಮಣಿ ಅಕಾಲಿ ದಳ ಮತ್ತು ಕಾಂಗ್ರೆಸ್​ ಪಕ್ಷಗಳು ಪ್ರತಿಭಟನಾ ನಿರತ ರೈತರಿಗೆ ತಾಕೀತು ಮಾಡಿದ್ದಾರೆ.

ರೈತ ಮುಖಂಡರೊಂದಿಗೆ ಕೇಂದ್ರ ಸರ್ಕಾರ ಇಂದು ಆರನೇ ಸುತ್ತಿನ ಮಾತುಕತೆ ನಡೆಸಿದೆ. ಇಷ್ಟಾದರೂ ಒಂದು ನಿರ್ಣಯಕ್ಕೆ ಬರಲು ಸಾಧ್ಯವಾಗಲಿಲ್ಲ. ಈ ಮಧ್ಯೆ ಇಂದು ಶಿರೋಮಣಿ ಅಕಾಲಿ ದಳದ ಬಟಿಂಡಾ ಸಂಸದ, ಮಾಜಿ ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಸೈ ಮಾತನಾಡಿ, ಪ್ರತಿಭಟನಾ ನಿರತ ರೈತರು ಯಾವ ಕಾರಣಕ್ಕೂ ಕೇಂದ್ರ ಸರ್ಕಾರದ ಬಲೆಗೆ ಬೀಳಬಾರದು. ಸರ್ಕಾರ ಪದೇಪದೆ ಸಭೆಗಳನ್ನು ಮುಂದೂಡುವ ಮೂಲಕ ರೈತರ ದಾರಿ ತಪ್ಪಿಸುತ್ತಿದೆ. ಈ ಮೂಲಕ ರೈತರ ದಾರಿ ತಪ್ಪಿಸುತ್ತಿದೆ.. ಈ ಟ್ರಾಪ್​ಗೆ ನೀವು ಒಳಗಾಗಬೇಡಿ ಎಂದು ಕರೆ ನೀಡಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ರೈತರು ಗೆಲುವಿನ ಅಂಚಿನಲ್ಲಿದ್ದಾರೆ.. ಹಾಗೇ, ಪಂಜಾಬ್​ ಕಾಂಗ್ರೆಸ್​ ಅಧ್ಯಕ್ಷ ಸುನೀಲ್ ಜಖರ್​ ಅವರೂ ಕೂಡ ಇದೇ ಸಲಹೆಯನ್ನು ರೈತರಿಗೆ ನೀಡಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧ ಹೋರಾಟದಲ್ಲಿ ರೈತರು ಗೆಲುವಿನ ಅಂಚಿನಲ್ಲಿ ಇದ್ದಾರೆ. ಈಗ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನೇರವಾಗಿ ಮಾತನಾಡಬೇಕು.

ರೈತರೊಂದಿಗೆ ಮೊದಲು ಗೃಹ ಸಚಿವ ಅಮಿತ್ ಷಾ ಮಾತುಕತೆ ನಡೆಸಿದರು. ಅದು ವಿಫಲವಾದ ಬಳಿಕ ಮುಂದಿನ ಹಂತದ ಮತುಕತೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇರಬೇಕಿತ್ತು. ಆದರೆ ಒಂದು ಹಂತ ಹಿಂದೆಯೇ ಹೋಗಿದೆ.. ಪ್ರಧಾನಿ ಬದಲು ಕೃಷಿ ಸಚಿವರು, ಉಳಿದ ಅಧಿಕಾರಿಗಳು ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗ ಗೆಲುವಿನ ಹೊಸ್ತಿಲಿನಲ್ಲಿ ಇರುವ ರೈತರು ಪ್ರಧಾನಿಯೊಂದಿಗೇ ಮಾತುಕತೆ ನಡೆಸಬೇಕು ಎಂದು ತಾಕೀತು ಮಾಡಿದ್ದಾರೆ.

ಪ್ರತಿಭಟನಾ ನಿರತ ಪಂಜಾಬ್​ ರೈತರ ಜೊತೆ ಕೃಷಿ ಸಚಿವ ತೋಮರ್​ ಭೋಜನ

Follow Us
Lakshmi Hegde
Lakshmi Hegde
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!