AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಡಿಎ ಒಕ್ಕೂಟ ತೊರೆದಿದ್ದ ಶಿರೋಮಣಿ ಅಕಾಲಿ ದಳದಿಂದ ಮಹತ್ವದ ಘೋಷಣೆ; ಮಾಯಾವತಿಯೊಂದಿಗೆ ಮೈತ್ರಿ

1996ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಇದೆರಡೂ ಪಕ್ಷಗಳೂ ಒಟ್ಟಾಗಿ ಸ್ಪರ್ಧಿಸಿದ್ದವು. ಅದರಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಕಣಕ್ಕಿಳಿದು, 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಎನ್​ಡಿಎ ಒಕ್ಕೂಟ ತೊರೆದಿದ್ದ ಶಿರೋಮಣಿ ಅಕಾಲಿ ದಳದಿಂದ ಮಹತ್ವದ ಘೋಷಣೆ; ಮಾಯಾವತಿಯೊಂದಿಗೆ ಮೈತ್ರಿ
ಎಸ್​ಎಡಿ ಅಧ್ಯಕ್ಷ ಸುಖ್​ಬೀರ್ ಸಿಂಗ್ ಬಾದಲ್​
TV9 Web
| Edited By: |

Updated on: Jun 12, 2021 | 1:47 PM

Share

ಕೃಷಿಕಾಯ್ದೆಗಳನ್ನು ವಿರೋಧಿಸಿ, ಎನ್​ಡಿಎ ಒಕ್ಕೂಟದಿಂದ ಹೊರಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಇದೀಗ ಇನ್ನೊಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಹತ್ವದ ಘೋಷಣೆ ಮಾಡಿದೆ. ಪಂಜಾಬ್​​ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದೆ. ಬಿಎಸ್​ಪಿ ಮತ್ತು ಶಿರೋಮಣಿ ಅಕಾಲಿದಳ್​ ಪಕ್ಷಗಳು ಸೇರಿ, ಪಂಜಾಬ್​ ರಾಜಕಾರಣದಲ್ಲಿ ಹೊಸದನ್ನು ತರುತ್ತೇವೆ ಎಂದು ಎಸ್​ಎಡಿ ಅಧ್ಯಕ್ಷ ಸುಖ್​​ಬೀರ್​ ಸಿಂಗ್ ಬಾದಲ್​ ಹೇಳಿದ್ದಾರೆ.

ಬಹುಜನ ಸಮಾಜ ಪಕ್ಷದೊಂದಿಗೆ ಸೇರಿ ಚುನಾವಣೆ ಎದುರಿಸುವ ನಿರ್ಧಾರವನ್ನು ಶಿರೋಮಣಿ ಅಕಾಲಿ ದಳ ತನ್ನ ಕೋರ್​ ಕಮಿಟಿ ಸಭೆಯಲ್ಲಿ ಕೈಗೊಂಡಿದ್ದು, ಅದರ ಅನ್ವಯ ಬಿಎಸ್​ಪಿ ಪಂಜಾಬ್​​ನಲ್ಲಿ 117 ಕ್ಷೇತ್ರಗಳಲ್ಲಿ, 20 ಸೀಟುಗಳಲ್ಲಿ ಸ್ಪರ್ಧಿಸಲಿದೆ. ಖರ್ತಾಪುರ, ಪಶ್ಚಿಮ ಜಲಂಧರ್​, ಉತ್ತರ ಜಲಂಧರ್​, ಉತ್ತರ ಲುಧಿಯಾನಾ, ಪಠಾಣ್​​ಕೋಟ್​, ಅಮೃತ್​ಸರ ಸೆಂಟ್ರಲ್​, ಮೊಹಾಲಿಯಂಥ ಪ್ರಮುಖ ಕ್ಷೇತ್ರಗಳಲ್ಲಿ ಬಿಎಸ್​ಪಿ ಸ್ಪರ್ಧೆಗೆ ಇಳಿಯಲಿದೆ. ಉಳಿದ 97 ಕ್ಷೇತ್ರಗಳಲ್ಲಿ ಅಕಾಲಿ ದಳ​ ಸ್ಪರ್ಧೆಗಿಳಿಯಲಿದೆ.

1996ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಇದೆರಡೂ ಪಕ್ಷಗಳೂ ಒಟ್ಟಾಗಿ ಸ್ಪರ್ಧಿಸಿದ್ದವು. ಅದರಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಕಣಕ್ಕಿಳಿದು, 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. 13 ಕ್ಷೇತ್ರಗಳಲ್ಲಿ ಬಿಎಸ್​ಪಿ ಸ್ಪರ್ಧಿಸಿದ್ದ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಹಾಗೇ ಅಕಾಲಿ ದಳ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 8ರಲ್ಲಿ ಗೆದ್ದಿತ್ತು. ಅದಾದ ಬಳಿಕ 26ವರ್ಷಗಳ ನಂತರ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳುತ್ತಿವೆ.

ಇದನ್ನೂ ಓದಿ:ATM charges: ಎಟಿಎಂ ನಗದು ವಿಥ್​ ಡ್ರಾ ದರ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಶುಲ್ಕವು ಸದ್ಯದಲ್ಲೇ ಏರಿಕೆ

(Shiromani Akali Dal has formed an alliance with the Bahujan Samaj Party in Punjab)

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್