AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಡಿಎ ಒಕ್ಕೂಟ ತೊರೆದಿದ್ದ ಶಿರೋಮಣಿ ಅಕಾಲಿ ದಳದಿಂದ ಮಹತ್ವದ ಘೋಷಣೆ; ಮಾಯಾವತಿಯೊಂದಿಗೆ ಮೈತ್ರಿ

1996ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಇದೆರಡೂ ಪಕ್ಷಗಳೂ ಒಟ್ಟಾಗಿ ಸ್ಪರ್ಧಿಸಿದ್ದವು. ಅದರಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಕಣಕ್ಕಿಳಿದು, 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಎನ್​ಡಿಎ ಒಕ್ಕೂಟ ತೊರೆದಿದ್ದ ಶಿರೋಮಣಿ ಅಕಾಲಿ ದಳದಿಂದ ಮಹತ್ವದ ಘೋಷಣೆ; ಮಾಯಾವತಿಯೊಂದಿಗೆ ಮೈತ್ರಿ
ಎಸ್​ಎಡಿ ಅಧ್ಯಕ್ಷ ಸುಖ್​ಬೀರ್ ಸಿಂಗ್ ಬಾದಲ್​
TV9 Web
| Edited By: |

Updated on: Jun 12, 2021 | 1:47 PM

Share

ಕೃಷಿಕಾಯ್ದೆಗಳನ್ನು ವಿರೋಧಿಸಿ, ಎನ್​ಡಿಎ ಒಕ್ಕೂಟದಿಂದ ಹೊರಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಇದೀಗ ಇನ್ನೊಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಹತ್ವದ ಘೋಷಣೆ ಮಾಡಿದೆ. ಪಂಜಾಬ್​​ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದೆ. ಬಿಎಸ್​ಪಿ ಮತ್ತು ಶಿರೋಮಣಿ ಅಕಾಲಿದಳ್​ ಪಕ್ಷಗಳು ಸೇರಿ, ಪಂಜಾಬ್​ ರಾಜಕಾರಣದಲ್ಲಿ ಹೊಸದನ್ನು ತರುತ್ತೇವೆ ಎಂದು ಎಸ್​ಎಡಿ ಅಧ್ಯಕ್ಷ ಸುಖ್​​ಬೀರ್​ ಸಿಂಗ್ ಬಾದಲ್​ ಹೇಳಿದ್ದಾರೆ.

ಬಹುಜನ ಸಮಾಜ ಪಕ್ಷದೊಂದಿಗೆ ಸೇರಿ ಚುನಾವಣೆ ಎದುರಿಸುವ ನಿರ್ಧಾರವನ್ನು ಶಿರೋಮಣಿ ಅಕಾಲಿ ದಳ ತನ್ನ ಕೋರ್​ ಕಮಿಟಿ ಸಭೆಯಲ್ಲಿ ಕೈಗೊಂಡಿದ್ದು, ಅದರ ಅನ್ವಯ ಬಿಎಸ್​ಪಿ ಪಂಜಾಬ್​​ನಲ್ಲಿ 117 ಕ್ಷೇತ್ರಗಳಲ್ಲಿ, 20 ಸೀಟುಗಳಲ್ಲಿ ಸ್ಪರ್ಧಿಸಲಿದೆ. ಖರ್ತಾಪುರ, ಪಶ್ಚಿಮ ಜಲಂಧರ್​, ಉತ್ತರ ಜಲಂಧರ್​, ಉತ್ತರ ಲುಧಿಯಾನಾ, ಪಠಾಣ್​​ಕೋಟ್​, ಅಮೃತ್​ಸರ ಸೆಂಟ್ರಲ್​, ಮೊಹಾಲಿಯಂಥ ಪ್ರಮುಖ ಕ್ಷೇತ್ರಗಳಲ್ಲಿ ಬಿಎಸ್​ಪಿ ಸ್ಪರ್ಧೆಗೆ ಇಳಿಯಲಿದೆ. ಉಳಿದ 97 ಕ್ಷೇತ್ರಗಳಲ್ಲಿ ಅಕಾಲಿ ದಳ​ ಸ್ಪರ್ಧೆಗಿಳಿಯಲಿದೆ.

1996ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಇದೆರಡೂ ಪಕ್ಷಗಳೂ ಒಟ್ಟಾಗಿ ಸ್ಪರ್ಧಿಸಿದ್ದವು. ಅದರಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಕಣಕ್ಕಿಳಿದು, 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. 13 ಕ್ಷೇತ್ರಗಳಲ್ಲಿ ಬಿಎಸ್​ಪಿ ಸ್ಪರ್ಧಿಸಿದ್ದ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಹಾಗೇ ಅಕಾಲಿ ದಳ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 8ರಲ್ಲಿ ಗೆದ್ದಿತ್ತು. ಅದಾದ ಬಳಿಕ 26ವರ್ಷಗಳ ನಂತರ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳುತ್ತಿವೆ.

ಇದನ್ನೂ ಓದಿ:ATM charges: ಎಟಿಎಂ ನಗದು ವಿಥ್​ ಡ್ರಾ ದರ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಶುಲ್ಕವು ಸದ್ಯದಲ್ಲೇ ಏರಿಕೆ

(Shiromani Akali Dal has formed an alliance with the Bahujan Samaj Party in Punjab)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ