AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಡಿಎ ಒಕ್ಕೂಟ ತೊರೆದಿದ್ದ ಶಿರೋಮಣಿ ಅಕಾಲಿ ದಳದಿಂದ ಮಹತ್ವದ ಘೋಷಣೆ; ಮಾಯಾವತಿಯೊಂದಿಗೆ ಮೈತ್ರಿ

1996ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಇದೆರಡೂ ಪಕ್ಷಗಳೂ ಒಟ್ಟಾಗಿ ಸ್ಪರ್ಧಿಸಿದ್ದವು. ಅದರಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಕಣಕ್ಕಿಳಿದು, 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಎನ್​ಡಿಎ ಒಕ್ಕೂಟ ತೊರೆದಿದ್ದ ಶಿರೋಮಣಿ ಅಕಾಲಿ ದಳದಿಂದ ಮಹತ್ವದ ಘೋಷಣೆ; ಮಾಯಾವತಿಯೊಂದಿಗೆ ಮೈತ್ರಿ
ಎಸ್​ಎಡಿ ಅಧ್ಯಕ್ಷ ಸುಖ್​ಬೀರ್ ಸಿಂಗ್ ಬಾದಲ್​
TV9 Web
| Edited By: |

Updated on: Jun 12, 2021 | 1:47 PM

Share

ಕೃಷಿಕಾಯ್ದೆಗಳನ್ನು ವಿರೋಧಿಸಿ, ಎನ್​ಡಿಎ ಒಕ್ಕೂಟದಿಂದ ಹೊರಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಇದೀಗ ಇನ್ನೊಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಹತ್ವದ ಘೋಷಣೆ ಮಾಡಿದೆ. ಪಂಜಾಬ್​​ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದೆ. ಬಿಎಸ್​ಪಿ ಮತ್ತು ಶಿರೋಮಣಿ ಅಕಾಲಿದಳ್​ ಪಕ್ಷಗಳು ಸೇರಿ, ಪಂಜಾಬ್​ ರಾಜಕಾರಣದಲ್ಲಿ ಹೊಸದನ್ನು ತರುತ್ತೇವೆ ಎಂದು ಎಸ್​ಎಡಿ ಅಧ್ಯಕ್ಷ ಸುಖ್​​ಬೀರ್​ ಸಿಂಗ್ ಬಾದಲ್​ ಹೇಳಿದ್ದಾರೆ.

ಬಹುಜನ ಸಮಾಜ ಪಕ್ಷದೊಂದಿಗೆ ಸೇರಿ ಚುನಾವಣೆ ಎದುರಿಸುವ ನಿರ್ಧಾರವನ್ನು ಶಿರೋಮಣಿ ಅಕಾಲಿ ದಳ ತನ್ನ ಕೋರ್​ ಕಮಿಟಿ ಸಭೆಯಲ್ಲಿ ಕೈಗೊಂಡಿದ್ದು, ಅದರ ಅನ್ವಯ ಬಿಎಸ್​ಪಿ ಪಂಜಾಬ್​​ನಲ್ಲಿ 117 ಕ್ಷೇತ್ರಗಳಲ್ಲಿ, 20 ಸೀಟುಗಳಲ್ಲಿ ಸ್ಪರ್ಧಿಸಲಿದೆ. ಖರ್ತಾಪುರ, ಪಶ್ಚಿಮ ಜಲಂಧರ್​, ಉತ್ತರ ಜಲಂಧರ್​, ಉತ್ತರ ಲುಧಿಯಾನಾ, ಪಠಾಣ್​​ಕೋಟ್​, ಅಮೃತ್​ಸರ ಸೆಂಟ್ರಲ್​, ಮೊಹಾಲಿಯಂಥ ಪ್ರಮುಖ ಕ್ಷೇತ್ರಗಳಲ್ಲಿ ಬಿಎಸ್​ಪಿ ಸ್ಪರ್ಧೆಗೆ ಇಳಿಯಲಿದೆ. ಉಳಿದ 97 ಕ್ಷೇತ್ರಗಳಲ್ಲಿ ಅಕಾಲಿ ದಳ​ ಸ್ಪರ್ಧೆಗಿಳಿಯಲಿದೆ.

1996ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಇದೆರಡೂ ಪಕ್ಷಗಳೂ ಒಟ್ಟಾಗಿ ಸ್ಪರ್ಧಿಸಿದ್ದವು. ಅದರಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಕಣಕ್ಕಿಳಿದು, 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. 13 ಕ್ಷೇತ್ರಗಳಲ್ಲಿ ಬಿಎಸ್​ಪಿ ಸ್ಪರ್ಧಿಸಿದ್ದ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಹಾಗೇ ಅಕಾಲಿ ದಳ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 8ರಲ್ಲಿ ಗೆದ್ದಿತ್ತು. ಅದಾದ ಬಳಿಕ 26ವರ್ಷಗಳ ನಂತರ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳುತ್ತಿವೆ.

ಇದನ್ನೂ ಓದಿ:ATM charges: ಎಟಿಎಂ ನಗದು ವಿಥ್​ ಡ್ರಾ ದರ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಶುಲ್ಕವು ಸದ್ಯದಲ್ಲೇ ಏರಿಕೆ

(Shiromani Akali Dal has formed an alliance with the Bahujan Samaj Party in Punjab)

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು