AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಡಿಎ ಒಕ್ಕೂಟ ತೊರೆದಿದ್ದ ಶಿರೋಮಣಿ ಅಕಾಲಿ ದಳದಿಂದ ಮಹತ್ವದ ಘೋಷಣೆ; ಮಾಯಾವತಿಯೊಂದಿಗೆ ಮೈತ್ರಿ

1996ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಇದೆರಡೂ ಪಕ್ಷಗಳೂ ಒಟ್ಟಾಗಿ ಸ್ಪರ್ಧಿಸಿದ್ದವು. ಅದರಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಕಣಕ್ಕಿಳಿದು, 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಎನ್​ಡಿಎ ಒಕ್ಕೂಟ ತೊರೆದಿದ್ದ ಶಿರೋಮಣಿ ಅಕಾಲಿ ದಳದಿಂದ ಮಹತ್ವದ ಘೋಷಣೆ; ಮಾಯಾವತಿಯೊಂದಿಗೆ ಮೈತ್ರಿ
ಎಸ್​ಎಡಿ ಅಧ್ಯಕ್ಷ ಸುಖ್​ಬೀರ್ ಸಿಂಗ್ ಬಾದಲ್​
Follow us
TV9 Web
| Updated By: Lakshmi Hegde

Updated on: Jun 12, 2021 | 1:47 PM

ಕೃಷಿಕಾಯ್ದೆಗಳನ್ನು ವಿರೋಧಿಸಿ, ಎನ್​ಡಿಎ ಒಕ್ಕೂಟದಿಂದ ಹೊರಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಇದೀಗ ಇನ್ನೊಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಹತ್ವದ ಘೋಷಣೆ ಮಾಡಿದೆ. ಪಂಜಾಬ್​​ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದೆ. ಬಿಎಸ್​ಪಿ ಮತ್ತು ಶಿರೋಮಣಿ ಅಕಾಲಿದಳ್​ ಪಕ್ಷಗಳು ಸೇರಿ, ಪಂಜಾಬ್​ ರಾಜಕಾರಣದಲ್ಲಿ ಹೊಸದನ್ನು ತರುತ್ತೇವೆ ಎಂದು ಎಸ್​ಎಡಿ ಅಧ್ಯಕ್ಷ ಸುಖ್​​ಬೀರ್​ ಸಿಂಗ್ ಬಾದಲ್​ ಹೇಳಿದ್ದಾರೆ.

ಬಹುಜನ ಸಮಾಜ ಪಕ್ಷದೊಂದಿಗೆ ಸೇರಿ ಚುನಾವಣೆ ಎದುರಿಸುವ ನಿರ್ಧಾರವನ್ನು ಶಿರೋಮಣಿ ಅಕಾಲಿ ದಳ ತನ್ನ ಕೋರ್​ ಕಮಿಟಿ ಸಭೆಯಲ್ಲಿ ಕೈಗೊಂಡಿದ್ದು, ಅದರ ಅನ್ವಯ ಬಿಎಸ್​ಪಿ ಪಂಜಾಬ್​​ನಲ್ಲಿ 117 ಕ್ಷೇತ್ರಗಳಲ್ಲಿ, 20 ಸೀಟುಗಳಲ್ಲಿ ಸ್ಪರ್ಧಿಸಲಿದೆ. ಖರ್ತಾಪುರ, ಪಶ್ಚಿಮ ಜಲಂಧರ್​, ಉತ್ತರ ಜಲಂಧರ್​, ಉತ್ತರ ಲುಧಿಯಾನಾ, ಪಠಾಣ್​​ಕೋಟ್​, ಅಮೃತ್​ಸರ ಸೆಂಟ್ರಲ್​, ಮೊಹಾಲಿಯಂಥ ಪ್ರಮುಖ ಕ್ಷೇತ್ರಗಳಲ್ಲಿ ಬಿಎಸ್​ಪಿ ಸ್ಪರ್ಧೆಗೆ ಇಳಿಯಲಿದೆ. ಉಳಿದ 97 ಕ್ಷೇತ್ರಗಳಲ್ಲಿ ಅಕಾಲಿ ದಳ​ ಸ್ಪರ್ಧೆಗಿಳಿಯಲಿದೆ.

1996ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಇದೆರಡೂ ಪಕ್ಷಗಳೂ ಒಟ್ಟಾಗಿ ಸ್ಪರ್ಧಿಸಿದ್ದವು. ಅದರಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಕಣಕ್ಕಿಳಿದು, 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. 13 ಕ್ಷೇತ್ರಗಳಲ್ಲಿ ಬಿಎಸ್​ಪಿ ಸ್ಪರ್ಧಿಸಿದ್ದ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಹಾಗೇ ಅಕಾಲಿ ದಳ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 8ರಲ್ಲಿ ಗೆದ್ದಿತ್ತು. ಅದಾದ ಬಳಿಕ 26ವರ್ಷಗಳ ನಂತರ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳುತ್ತಿವೆ.

ಇದನ್ನೂ ಓದಿ:ATM charges: ಎಟಿಎಂ ನಗದು ವಿಥ್​ ಡ್ರಾ ದರ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಶುಲ್ಕವು ಸದ್ಯದಲ್ಲೇ ಏರಿಕೆ

(Shiromani Akali Dal has formed an alliance with the Bahujan Samaj Party in Punjab)

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ