AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಟೀಕಿಸುತ್ತಿದ್ದ ಶಿರೋಮಣಿ ಅಕಾಲಿ ದಳದ ನಾಯಕ ಮಂಜಿಂದರ್​ ಸಿಂಗ್​ ಸಿರ್ಸಾ ಬಿಜೆಪಿ ಸೇರ್ಪಡೆ

ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದ ಮೈತ್ರಿ ಪಕ್ಷವೇ ಆಗಿತ್ತು. ಆದರೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಎಸ್​ಎಡಿ ವಿರೋಧಿಸಿತ್ತು. ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದಿಂದ ಹೊರನಡೆದಿತ್ತು.

ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಟೀಕಿಸುತ್ತಿದ್ದ ಶಿರೋಮಣಿ ಅಕಾಲಿ ದಳದ ನಾಯಕ ಮಂಜಿಂದರ್​ ಸಿಂಗ್​ ಸಿರ್ಸಾ ಬಿಜೆಪಿ ಸೇರ್ಪಡೆ
ಬಿಜೆಪಿ ಸೇರಿದ ಮಂಜಿಂದರ್ ಸಿಂಗ್ ಸಿರ್ಸಾ
TV9 Web
| Edited By: |

Updated on: Dec 02, 2021 | 12:25 PM

Share

ಶಿರೋಮಣಿ ಅಕಾಲಿ ದಳ (SAD)ದ ನಾಯಕ ಮಂಜಿಂದರ್​ ಸಿಂಗ್ ಸಿರ್ಸಾ ಬುಧವಾರ ಬಿಜೆಪಿಯನ್ನು ಸೇರಿದ್ದಾರೆ. ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿ ಮುಖ್ಯಸ್ಥ ಸ್ಥಾನದಿಂದ ತಾವು ಕೆಳಗೆ ಇಳಿಯುತ್ತಿರುವ ಬಗ್ಗೆ ಇತ್ತೀಚೆಗಷ್ಟೇ ಘೋಷಿಸಿದ್ದ ಸಿರ್ಸಾ, ನಿನ್ನೆ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಕಮಲ ಪಾಳಯಕ್ಕೆ ಸೇರ್ಪಡೆಗೊಂಡಿದ್ದಾರೆ. ಇದು ಮುಂದಿನ ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ ಸಿಖ್​ ಸಮುದಾಯದ ಮತದಾರರನ್ನು ಸೆಳೆಯುವ ಬಿಜೆಪಿಯ ಪ್ರಯತ್ನ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.  

ಸಿರ್ಸಾ ರಾಜೌರಿ ಗಾರ್ಡನ್​​ನ ಮಾಜಿ ಶಾಸಕರು. ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿ ಭಾಗಗಳಲ್ಲಿ ಹೋರಾಡುತ್ತಿರುವ ರೈತರಿಗೆ ಬೆಂಬಲ ನೀಡುತ್ತಿದ್ದ ಸಂಘಟನೆಗಳಲ್ಲಿ ಒಂದಾಗಿದ್ದ ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿಯ ಮುಖ್ಯಸ್ಥರಾಗಿದ್ದರು. ಹಾಗೇ, ಕೃಷಿ ಕಾಯ್ದೆಗಳನ್ನು ತೀವ್ರವಾಗಿ ವಿರೋಧಿಸಿದ್ದರು. ಇತ್ತೀಚೆಗೆ ಕಮಿಟಿ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ನಾನು ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಮತ್ತು ಕಮಿಟಿಯ ಮುಂಬರುವ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ನನ್ನ ಸಮುದಾಯ, ರಾಷ್ಟ್ರಕ್ಕೆ ಸೇವೆ ಮುಂದುವರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಮಾತನಾಡಿದ ಸಿರ್ಸಾ, ದೇಶಾದ್ಯಂತ ಸಿಖ್​ ಸಮುದಾಯಕ್ಕೆ ಹಲವು ಸಮಸ್ಯೆಗಳು ಇವೆ. ಅದರ ಬಗ್ಗೆ ಅಮಿತ್​ ಶಾ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲದೆ ಪ್ರಧಾನಿ ಮೋದಿಯವರ ಬಳಿಯೂ ಮಾತನಾಡಲು ಅವಕಾಶ ಸಿಕ್ಕಿದ್ದು ತುಂಬ ಖುಷಿಕೊಟ್ಟಿತು.  ಸಿಖ್ಖರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಅಮಿತ್ ಶಾ  ಕೂಡ ತಮ್ಮ ಟ್ವಿಟರ್​​ನಲ್ಲಿ ಸಿರ್ಸಾ ಅವರು ಬಿಜೆಪಿಗೆ ಸೇರ್ಪಡೆಯಾದ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದ ಮೈತ್ರಿ ಪಕ್ಷವೇ ಆಗಿತ್ತು. ಆದರೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಎಸ್​ಎಡಿ ವಿರೋಧಿಸಿತ್ತು. ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದಿಂದ ಹೊರನಡೆದು, ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವಿಲ್ಲ ಎಂದಿತ್ತು. ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್​ ಸಿಂಗ್​ ಬಾದಲ್​​ರ ಆಪ್ತರೆನಿಸಿಕೊಂಡಿದ್ದ ಮಂಜಿಂದರ್​ ಸಿಂಗ್ ಸಿರ್ಸಾ ಕೃಷಿ ಕಾಯ್ದೆಗಳನ್ನು ತುಂಬ ಸಲ ಟೀಕಿಸಿದ್ದಾರೆ. ಇದೀಗ ಆ ಮೂರು ಕೃಷಿ ಕಾಯ್ದೆಗಳು ರದ್ದುಗೊಂಡ ಬೆನ್ನಲ್ಲೇ ಅವರು ಬಿಜೆಪಿ ಪಕ್ಷ ಸೇರಿದ್ದಾರೆ. ಆದರೆ ಸಿರ್ಸಾ ಯೂ ಟರ್ನ್ ತೆಗೆದುಕೊಂಡಿದ್ದನ್ನು ಅವರದ್ದೇ ಪಕ್ಷದ ಅನೇಕ ಸದಸ್ಯರು ಟೀಕಿಸುತ್ತಿದ್ದಾರೆ.

ಇದನ್ನೂ ಓದಿ: India vs South Africa: ಓಮಿಕ್ರಾನ್ ಭೀತಿ: ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್