AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಟೀಕಿಸುತ್ತಿದ್ದ ಶಿರೋಮಣಿ ಅಕಾಲಿ ದಳದ ನಾಯಕ ಮಂಜಿಂದರ್​ ಸಿಂಗ್​ ಸಿರ್ಸಾ ಬಿಜೆಪಿ ಸೇರ್ಪಡೆ

ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದ ಮೈತ್ರಿ ಪಕ್ಷವೇ ಆಗಿತ್ತು. ಆದರೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಎಸ್​ಎಡಿ ವಿರೋಧಿಸಿತ್ತು. ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದಿಂದ ಹೊರನಡೆದಿತ್ತು.

ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಟೀಕಿಸುತ್ತಿದ್ದ ಶಿರೋಮಣಿ ಅಕಾಲಿ ದಳದ ನಾಯಕ ಮಂಜಿಂದರ್​ ಸಿಂಗ್​ ಸಿರ್ಸಾ ಬಿಜೆಪಿ ಸೇರ್ಪಡೆ
ಬಿಜೆಪಿ ಸೇರಿದ ಮಂಜಿಂದರ್ ಸಿಂಗ್ ಸಿರ್ಸಾ
TV9 Web
| Updated By: Lakshmi Hegde|

Updated on: Dec 02, 2021 | 12:25 PM

Share

ಶಿರೋಮಣಿ ಅಕಾಲಿ ದಳ (SAD)ದ ನಾಯಕ ಮಂಜಿಂದರ್​ ಸಿಂಗ್ ಸಿರ್ಸಾ ಬುಧವಾರ ಬಿಜೆಪಿಯನ್ನು ಸೇರಿದ್ದಾರೆ. ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿ ಮುಖ್ಯಸ್ಥ ಸ್ಥಾನದಿಂದ ತಾವು ಕೆಳಗೆ ಇಳಿಯುತ್ತಿರುವ ಬಗ್ಗೆ ಇತ್ತೀಚೆಗಷ್ಟೇ ಘೋಷಿಸಿದ್ದ ಸಿರ್ಸಾ, ನಿನ್ನೆ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಕಮಲ ಪಾಳಯಕ್ಕೆ ಸೇರ್ಪಡೆಗೊಂಡಿದ್ದಾರೆ. ಇದು ಮುಂದಿನ ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ ಸಿಖ್​ ಸಮುದಾಯದ ಮತದಾರರನ್ನು ಸೆಳೆಯುವ ಬಿಜೆಪಿಯ ಪ್ರಯತ್ನ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.  

ಸಿರ್ಸಾ ರಾಜೌರಿ ಗಾರ್ಡನ್​​ನ ಮಾಜಿ ಶಾಸಕರು. ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿ ಭಾಗಗಳಲ್ಲಿ ಹೋರಾಡುತ್ತಿರುವ ರೈತರಿಗೆ ಬೆಂಬಲ ನೀಡುತ್ತಿದ್ದ ಸಂಘಟನೆಗಳಲ್ಲಿ ಒಂದಾಗಿದ್ದ ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿಯ ಮುಖ್ಯಸ್ಥರಾಗಿದ್ದರು. ಹಾಗೇ, ಕೃಷಿ ಕಾಯ್ದೆಗಳನ್ನು ತೀವ್ರವಾಗಿ ವಿರೋಧಿಸಿದ್ದರು. ಇತ್ತೀಚೆಗೆ ಕಮಿಟಿ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ನಾನು ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಮತ್ತು ಕಮಿಟಿಯ ಮುಂಬರುವ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ನನ್ನ ಸಮುದಾಯ, ರಾಷ್ಟ್ರಕ್ಕೆ ಸೇವೆ ಮುಂದುವರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಮಾತನಾಡಿದ ಸಿರ್ಸಾ, ದೇಶಾದ್ಯಂತ ಸಿಖ್​ ಸಮುದಾಯಕ್ಕೆ ಹಲವು ಸಮಸ್ಯೆಗಳು ಇವೆ. ಅದರ ಬಗ್ಗೆ ಅಮಿತ್​ ಶಾ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲದೆ ಪ್ರಧಾನಿ ಮೋದಿಯವರ ಬಳಿಯೂ ಮಾತನಾಡಲು ಅವಕಾಶ ಸಿಕ್ಕಿದ್ದು ತುಂಬ ಖುಷಿಕೊಟ್ಟಿತು.  ಸಿಖ್ಖರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಅಮಿತ್ ಶಾ  ಕೂಡ ತಮ್ಮ ಟ್ವಿಟರ್​​ನಲ್ಲಿ ಸಿರ್ಸಾ ಅವರು ಬಿಜೆಪಿಗೆ ಸೇರ್ಪಡೆಯಾದ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದ ಮೈತ್ರಿ ಪಕ್ಷವೇ ಆಗಿತ್ತು. ಆದರೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಎಸ್​ಎಡಿ ವಿರೋಧಿಸಿತ್ತು. ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದಿಂದ ಹೊರನಡೆದು, ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವಿಲ್ಲ ಎಂದಿತ್ತು. ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್​ ಸಿಂಗ್​ ಬಾದಲ್​​ರ ಆಪ್ತರೆನಿಸಿಕೊಂಡಿದ್ದ ಮಂಜಿಂದರ್​ ಸಿಂಗ್ ಸಿರ್ಸಾ ಕೃಷಿ ಕಾಯ್ದೆಗಳನ್ನು ತುಂಬ ಸಲ ಟೀಕಿಸಿದ್ದಾರೆ. ಇದೀಗ ಆ ಮೂರು ಕೃಷಿ ಕಾಯ್ದೆಗಳು ರದ್ದುಗೊಂಡ ಬೆನ್ನಲ್ಲೇ ಅವರು ಬಿಜೆಪಿ ಪಕ್ಷ ಸೇರಿದ್ದಾರೆ. ಆದರೆ ಸಿರ್ಸಾ ಯೂ ಟರ್ನ್ ತೆಗೆದುಕೊಂಡಿದ್ದನ್ನು ಅವರದ್ದೇ ಪಕ್ಷದ ಅನೇಕ ಸದಸ್ಯರು ಟೀಕಿಸುತ್ತಿದ್ದಾರೆ.

ಇದನ್ನೂ ಓದಿ: India vs South Africa: ಓಮಿಕ್ರಾನ್ ಭೀತಿ: ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ