Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರೊಂದಿಗೆ ಬಹಿರಂಗವಾಗಿ ಕಾಫಿ ಸೇವಿಸಿದ್ದೇನೆ: ಸಂಜಯ್ ರಾವುತ್

Sanjay Raut: “ಇಬ್ಬರೂ ಒಳ್ಳೆಯ ಸ್ನೇಹಿತರು. ಇಂತಹ ರೀತಿಯ ಸಭೆಗಳು ನಡೆಯುತ್ತಲೇ ಇರುತ್ತವೆ. ಕೈಜೋಡಿಸಲು ಶಿವಸೇನೆಗೆ ನಾವು ಆಹ್ವಾನವನ್ನು ನೀಡುವ ಪ್ರಶ್ನೆಯೇ ಇಲ್ಲ ”ಎಂದು ಪಾಟೀಲ್ ಹೇಳಿದರು.

ಬಿಜೆಪಿ ನಾಯಕರೊಂದಿಗೆ ಬಹಿರಂಗವಾಗಿ ಕಾಫಿ ಸೇವಿಸಿದ್ದೇನೆ: ಸಂಜಯ್ ರಾವುತ್
ಸಂಜಯ್ ರಾವುತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 04, 2021 | 5:55 PM

ಮುಂಬೈ: ಶನಿವಾರ ಖಾಸಗಿ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕ ಆಶಿಶ್ ಶೆಲಾರ್ ಅವರನ್ನು ಭೇಟಿಯಾದ ವರದಿಗಳಿಗೆ ಪ್ರತಿಕ್ರಿಯಿಸಿದ ಶಿವಸೇನೆ ಸಂಸದ ಸಂಜಯ್ ರಾವುತ್ ಇಂಥಾ ವದಂತಿಗಳು ಹೆಚ್ಚುತ್ತಿದ್ದಂತೆ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಮತ್ತಷ್ಟು ಗಟ್ಟಿಯಾಗಲಿದೆ ಎಂದಿದ್ದಾರೆ. ನಾವು ರಾಜಕೀಯ ಮತ್ತು ಸೈದ್ಧಾಂತಿಕ ಭಿನ್ನತೆಗಳನ್ನು ಹೊಂದಿರಬಹುದು. ಆದರೆ ಸಾರ್ವಜನಿಕ ಸಮಾರಂಭಗಳಲ್ಲಿ ನಾವು ಮುಖಾಮುಖಿಯಾಗಿ ಬಂದರೆ, ನಾವು ಪರಸ್ಪರ ಸೌಹಾರ್ದಯುತವಾಗಿ ಸ್ವಾಗತಿಸುತ್ತೇವೆ. ನಾನು ಶೆಲಾರ್ ಅವರೊಂದಿಗೆ ಬಹಿರಂಗವಾಗಿ ಕಾಫಿ ಸೇವಿಸಿದ್ದೇನೆ ಎಂದು ರಾವುತ್ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿಮಾಡಿದೆ.

ಶಾಸಕಾಂಗ ಸಭೆಯ ಮಾನ್ಸೂನ್ ಅಧಿವೇಶನಕ್ಕೆ ಮುಂಚಿತವಾಗಿ ರಾವುತ್ ಶೆಲಾರ್ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯಗಳಲ್ಲಿ ಹಲವಾರು ಊಹಾಪೋಹಕ್ಕೆ ಕಾರಣವಾಯಿತು. ನಾರಿಮನ್ ಪಾಯಿಂಟ್‌ನಲ್ಲಿ ನಡೆದ ಸಭೆಯ ಬಗ್ಗೆ ಬಹಳ ಕಡಿಮೆ ಜನರಿಗೆ ತಿಳಿದಿದೆ. ರಾವುತ್ ಮತ್ತು ಶೆಲಾರ್ ಇಬ್ಬರೂ ಶನಿವಾರ ಪರಸ್ಪರ ಭೇಟಿಯನ್ನು ನಿರಾಕರಿಸಿದ್ದಾರೆ. ಆದರೆ, ಇದು “ಅನೌಪಚಾರಿಕ ಮತ್ತು ಸ್ನೇಹಪರ” ಸಭೆ ಮತ್ತು ಅದಕ್ಕೆ ಕಾರಣವಿದೆ ಎಂದು ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

“ಇಬ್ಬರೂ ಒಳ್ಳೆಯ ಸ್ನೇಹಿತರು. ಇಂತಹ ರೀತಿಯ ಸಭೆಗಳು ನಡೆಯುತ್ತಲೇ ಇರುತ್ತವೆ. ಕೈಜೋಡಿಸಲು ಶಿವಸೇನೆಗೆ ನಾವು ಆಹ್ವಾನವನ್ನು ನೀಡುವ ಪ್ರಶ್ನೆಯೇ ಇಲ್ಲ ”ಎಂದು ಪಾಟೀಲ್ ಹೇಳಿದರು.

ಎಂವಿಎ ಸರ್ಕಾರವು ಸೋಮವಾರದಿಂದ ಎರಡು ದಿನಗಳ ಮಾನ್ಸೂನ್ ಅಧಿವೇಶನ ನಡೆಸಲಿದ್ದು, ಕಳೆದ ವರ್ಷ ಕೇಂದ್ರ ಸರ್ಕಾರ ತಂದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಸರ್ಕಾರ ನಿರ್ಣಯವನ್ನು ಅಂಗೀಕರಿಸುವ ನಿರೀಕ್ಷೆಯಿದೆ ಎಂದು ರಾಜ್ಯ ಸಚಿವ ನವಾಬ್ ಮಲಿಕ್ ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಮಾನ್ಸೂನ್ ಅಧಿವೇಶನವು ಯಾವುದೇ ಅಡೆತಡೆಗಳಿಲ್ಲದೆ ನಡೆಯಲು ಅವಕಾಶ ಮಾಡಿಕೊಡಬೇಕೆಂದು ರಾವುತ್ ಅವರು ಬಿಜೆಪಿಯನ್ನು ಒತ್ತಾಯಿಸಿದರು, ಇದರಿಂದಾಗಿ ಸರ್ಕಾರವು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಚರ್ಚೆ ನಡೆಸಬಹುದು.

“ಗದ್ದಲವು ಸರ್ಕಾರವನ್ನು ಮೂಲೆಗುಂಪಾಗಿಸುವ ಮಾರ್ಗವಲ್ಲ. ಇಂತಹ ತಂತ್ರಗಳನ್ನು ಇನ್ನೊಂದು ಕಡೆಯಿಂದಲೂ ಅಳವಡಿಸಿಕೊಳ್ಳಬಹುದು. ಇದು ವ್ಯಾಕ್ಸಿನೇಷನ್ (ಕೊರೊನಾವೈರಸ್ ವಿರುದ್ಧ), ಕೋವಿಡ್ -19, ನಿರುದ್ಯೋಗ ಮತ್ತು ಆರ್ಥಿಕತೆಯ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ” ಎಂದು ರೌತ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಬೆಳಗಾವಿ ಉಪಚುನಾವಣೆ ಬಗ್ಗೆ ಮಹಾರಾಷ್ಟ್ರದಲ್ಲಿ ವ್ಯಾಪಕ ಕುತೂಹಲ: ಶಿವಸೇನೆ ವಕ್ತಾರ ಸಂಜಯ್ ರಾವುತ್

(Shiv Sena Member of Parliament Sanjay Raut responded to reports meeting BJP legislator Ashish Shelar)

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ