AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರಿಗೆ ಸರಬರಾಜು ಮಾಡುವ ಆಹಾರ ಕಳಪೆ ಗುಣಮಟ್ಟದ್ದು ಅಂತ ಆರೋಪಿಸಿ ಮ್ಯಾನೇಜರ್ ಕೆನ್ನೆಗೆ ಬಾರಿಸಿದರು ಶಿವ ಸೇನಾ ಶಾಸಕ ಬಣಗಾರ್!

ಮಹಾರಾಷ್ಟ್ರ ಸರ್ಕಾರದ ಮಿಡ್​ಡೇ ಮೀಲ್ ಸ್ಕೀಮ್ ಯೋಜನೆಯಡಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಮಧ್ಯಾಹ್ನದ ಊಟ ಸರಬರಾಜು ಮಾಡಲಾಗುತ್ತದೆ. ಸದರಿ ಯೋಜನೆಯ ಗುತ್ತಿಗೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡಲಾಗಿದೆ.

ಕಾರ್ಮಿಕರಿಗೆ ಸರಬರಾಜು ಮಾಡುವ ಆಹಾರ ಕಳಪೆ ಗುಣಮಟ್ಟದ್ದು ಅಂತ ಆರೋಪಿಸಿ ಮ್ಯಾನೇಜರ್ ಕೆನ್ನೆಗೆ ಬಾರಿಸಿದರು ಶಿವ ಸೇನಾ ಶಾಸಕ ಬಣಗಾರ್!
ಸಂತೋಷ ಬಣಗಾರ್, ಶಿವ ಸೇನಾ ಶಾಸಕImage Credit source: MID-DAY
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Aug 16, 2022 | 3:05 PM

Share

ಕಳೆದ ತಿಂಗಳು ಮಹಾರಾಷ್ಟ್ರ ಸರ್ಕಾರ ವಿಧಾನ ಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shindhe) ಬಹುಮತ ಸಾಬೀತು ಮಾಡಲು ಕೆಲವೇ ಗಂಟೆ ಉಳಿದಿದ್ದಾಗ ಉದ್ಧವ್ ಠಾಕ್ರೆ (Uddhav Thackeray) ಕ್ಯಾಂಪ್ನಿಂದ ಶಿಂಧೆ ಕ್ಯಾಂಪ್ ಗೆ ಜಿಗಿದು ಸುದ್ದಿಯಾಗಿದ್ದ ಶಿವ ಸೇವಾ ಶಾಸಕ ಸಂತೋಷ್ ಬಣಗಾರ್ (Santosh Bangar) ಅವರು ಸೋಮವಾರದಂದು ಹಿಂಗೋಲಿಯ ಕೂಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ಸರಬರಾಜು ಮಾಡಿದ್ದಕ್ಕೆ ಖಾಸಗಿ ಕೇಟರಿಂಗ್ ಸಂಸ್ಥೆಯೊಂದರ ಮ್ಯಾನೇಜರ್ ಗೆ ಮನಬಂದಂತೆ ನಿಂದಿಸುವುದರ ಜೊತೆಗೆ ಅವರ ಮೇಲೆ ಹಲ್ಲೆ ನಡೆಸಿದರೆಂದು ಅರೋಪಿಸಲಾಗಿದೆ. ಹಿಂಗೋಲಿ, ಬಣಗಾರ್ ಪ್ರತಿನಿಧಿಸುವ ವಿಧಾನ ಸಭಾ ಕ್ಷೇತ್ರವಾಗಿದೆ.

ಊಟ ಸರಬರಾಜು ಮ್ಯಾನೇಜರ್ ಗೆ ಊಟದ ಗುಣಮಟ್ಟದ ಬಗ್ಗೆ ಬಣಗಾರ್ ಪ್ರಶ್ನಿಸುವ ಮತ್ತು ಅವನ ತಲೆ ಮತ್ತು ಕೆನ್ನೆಗೊಮ್ಮೆ ಬಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಸಕರು ಪರಿಶೀಲಿಸಿದ್ದು ತಂಗಳಾಗಿದ್ದ ಆಹಾರ ಮತ್ತು ಅದನ್ನು ಬಿಸಾಡಲಿದ್ದೇವೆ ಅಂತ ಹೇಳಿದರೂ ಅವರು ತನ್ನ ಮಾತು ಕೇಳದೆ ಕೆನ್ನೆಗೆ ಬಾರಿಸಿದರೆಂದು ಮ್ಯಾನೇಜರ್ ನಂತರ ಹೇಳಿದ್ದಾನೆ.

ಮಹಾರಾಷ್ಟ್ರ ಸರ್ಕಾರದ ಮಿಡ್​ಡೇ ಮೀಲ್ ಸ್ಕೀಮ್ ಯೋಜನೆಯಡಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಮಧ್ಯಾಹ್ನದ ಊಟ ಸರಬರಾಜು ಮಾಡಲಾಗುತ್ತದೆ. ಸದರಿ ಯೋಜನೆಯ ಗುತ್ತಿಗೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡಲಾಗಿದೆ. ಊಟವನ್ನು ಹಿಂಗೋಲಿ ನಗರದಾದ್ಯಾಂತ ಇರುವ ಕಾರ್ಮಿಕರಿಗೆ ಸರಬರಾಜು ಮಾಡುವ ಮೊದಲು ಅದನ್ನು ಗುತ್ತಿಗೆದಾರನಿಗೆ ಸೇರಿದ ಸ್ಥಳದಲ್ಲಿ ತಯಾರಿಸಲಾಗುತ್ತದೆ.

ಕಾರ್ಮಿಕರಿಗೆ ಸರಬರಾಜು ಮಾಡಲಾಗುತ್ತಿರುವ ಆಹಾರ ಕಳಪೆ ದರ್ಜೆಯದ್ದು ಅಂತ ದೂರು ಸ್ವೀಕರಿಸಿದ ನಂತರವೇ ತಾನು ಆಹಾರ ತಯಾರಾಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಎಂದು ಬಣಗಾರ್ ನಂತರ ಹೇಳಿದರು.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ