AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರಿಗೆ ಸರಬರಾಜು ಮಾಡುವ ಆಹಾರ ಕಳಪೆ ಗುಣಮಟ್ಟದ್ದು ಅಂತ ಆರೋಪಿಸಿ ಮ್ಯಾನೇಜರ್ ಕೆನ್ನೆಗೆ ಬಾರಿಸಿದರು ಶಿವ ಸೇನಾ ಶಾಸಕ ಬಣಗಾರ್!

ಮಹಾರಾಷ್ಟ್ರ ಸರ್ಕಾರದ ಮಿಡ್​ಡೇ ಮೀಲ್ ಸ್ಕೀಮ್ ಯೋಜನೆಯಡಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಮಧ್ಯಾಹ್ನದ ಊಟ ಸರಬರಾಜು ಮಾಡಲಾಗುತ್ತದೆ. ಸದರಿ ಯೋಜನೆಯ ಗುತ್ತಿಗೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡಲಾಗಿದೆ.

ಕಾರ್ಮಿಕರಿಗೆ ಸರಬರಾಜು ಮಾಡುವ ಆಹಾರ ಕಳಪೆ ಗುಣಮಟ್ಟದ್ದು ಅಂತ ಆರೋಪಿಸಿ ಮ್ಯಾನೇಜರ್ ಕೆನ್ನೆಗೆ ಬಾರಿಸಿದರು ಶಿವ ಸೇನಾ ಶಾಸಕ ಬಣಗಾರ್!
ಸಂತೋಷ ಬಣಗಾರ್, ಶಿವ ಸೇನಾ ಶಾಸಕImage Credit source: MID-DAY
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Aug 16, 2022 | 3:05 PM

Share

ಕಳೆದ ತಿಂಗಳು ಮಹಾರಾಷ್ಟ್ರ ಸರ್ಕಾರ ವಿಧಾನ ಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shindhe) ಬಹುಮತ ಸಾಬೀತು ಮಾಡಲು ಕೆಲವೇ ಗಂಟೆ ಉಳಿದಿದ್ದಾಗ ಉದ್ಧವ್ ಠಾಕ್ರೆ (Uddhav Thackeray) ಕ್ಯಾಂಪ್ನಿಂದ ಶಿಂಧೆ ಕ್ಯಾಂಪ್ ಗೆ ಜಿಗಿದು ಸುದ್ದಿಯಾಗಿದ್ದ ಶಿವ ಸೇವಾ ಶಾಸಕ ಸಂತೋಷ್ ಬಣಗಾರ್ (Santosh Bangar) ಅವರು ಸೋಮವಾರದಂದು ಹಿಂಗೋಲಿಯ ಕೂಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ಸರಬರಾಜು ಮಾಡಿದ್ದಕ್ಕೆ ಖಾಸಗಿ ಕೇಟರಿಂಗ್ ಸಂಸ್ಥೆಯೊಂದರ ಮ್ಯಾನೇಜರ್ ಗೆ ಮನಬಂದಂತೆ ನಿಂದಿಸುವುದರ ಜೊತೆಗೆ ಅವರ ಮೇಲೆ ಹಲ್ಲೆ ನಡೆಸಿದರೆಂದು ಅರೋಪಿಸಲಾಗಿದೆ. ಹಿಂಗೋಲಿ, ಬಣಗಾರ್ ಪ್ರತಿನಿಧಿಸುವ ವಿಧಾನ ಸಭಾ ಕ್ಷೇತ್ರವಾಗಿದೆ.

ಊಟ ಸರಬರಾಜು ಮ್ಯಾನೇಜರ್ ಗೆ ಊಟದ ಗುಣಮಟ್ಟದ ಬಗ್ಗೆ ಬಣಗಾರ್ ಪ್ರಶ್ನಿಸುವ ಮತ್ತು ಅವನ ತಲೆ ಮತ್ತು ಕೆನ್ನೆಗೊಮ್ಮೆ ಬಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಸಕರು ಪರಿಶೀಲಿಸಿದ್ದು ತಂಗಳಾಗಿದ್ದ ಆಹಾರ ಮತ್ತು ಅದನ್ನು ಬಿಸಾಡಲಿದ್ದೇವೆ ಅಂತ ಹೇಳಿದರೂ ಅವರು ತನ್ನ ಮಾತು ಕೇಳದೆ ಕೆನ್ನೆಗೆ ಬಾರಿಸಿದರೆಂದು ಮ್ಯಾನೇಜರ್ ನಂತರ ಹೇಳಿದ್ದಾನೆ.

ಮಹಾರಾಷ್ಟ್ರ ಸರ್ಕಾರದ ಮಿಡ್​ಡೇ ಮೀಲ್ ಸ್ಕೀಮ್ ಯೋಜನೆಯಡಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಮಧ್ಯಾಹ್ನದ ಊಟ ಸರಬರಾಜು ಮಾಡಲಾಗುತ್ತದೆ. ಸದರಿ ಯೋಜನೆಯ ಗುತ್ತಿಗೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡಲಾಗಿದೆ. ಊಟವನ್ನು ಹಿಂಗೋಲಿ ನಗರದಾದ್ಯಾಂತ ಇರುವ ಕಾರ್ಮಿಕರಿಗೆ ಸರಬರಾಜು ಮಾಡುವ ಮೊದಲು ಅದನ್ನು ಗುತ್ತಿಗೆದಾರನಿಗೆ ಸೇರಿದ ಸ್ಥಳದಲ್ಲಿ ತಯಾರಿಸಲಾಗುತ್ತದೆ.

ಕಾರ್ಮಿಕರಿಗೆ ಸರಬರಾಜು ಮಾಡಲಾಗುತ್ತಿರುವ ಆಹಾರ ಕಳಪೆ ದರ್ಜೆಯದ್ದು ಅಂತ ದೂರು ಸ್ವೀಕರಿಸಿದ ನಂತರವೇ ತಾನು ಆಹಾರ ತಯಾರಾಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಎಂದು ಬಣಗಾರ್ ನಂತರ ಹೇಳಿದರು.

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್