AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ ರಾವತ್​​ಗೆ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​​ನಿಂದ ಜೀವ ಬೆದರಿಕೆ

Sanjay Raut : ಬೆದರಿಕೆ ಕರೆ ಬಗ್ಗೆ ನಾನು ಪೊಲೀಸರಿಗೆ ತಿಳಿಸಿದ್ದೇನೆ, ಆದರೆ ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ. ನಿನ್ನೆ ರಾತ್ರಿ ನನಗೆ ಕರೆ ಬಂದಿತ್ತು. ಇಂತಹ ಬೆದರಿಕೆಗಳ ಬಗ್ಗೆ ನಾನು ಸರ್ಕಾರ ಮತ್ತು ಗೃಹ ಸಚಿವರಿಗೆ ತಿಳಿಸಿದಾಗ ಅವರು ಅದನ್ನು ಸ್ಟಂಟ್ ಎಂದು ಅಣಕಿಸುತ್ತಾರೆ ಎಂದ ರಾವುತ್

ಸಂಜಯ್ ರಾವತ್​​ಗೆ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​​ನಿಂದ ಜೀವ ಬೆದರಿಕೆ
ಸಂಜಯ್ ರಾವುತ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 01, 2023 | 3:53 PM

Share

ಮುಖ್ಯಾಂಶಗಳು

  • ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ಇದೇ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗುವುದು ಎಂದ ಮುಂಬೈ ಪೊಲೀಸ್
  • ನವದೆಹಲಿಯಲ್ಲಿ ಕಾಣಸಿಕ್ಕರೆ ಎಕೆ-47 ರೈಫಲ್‌ನಿಂದ ಗುಂಡು ಹಾರಿಸುವುದಾಗಿ ರಾವತ್‌ಗೆ ಬೆದರಿಕೆ ಕರೆ
  • ಬೆದರಿಕೆ ಕರೆ ಬಗ್ಗೆ ನಾನು ಪೊಲೀಸರಿಗೆ ತಿಳಿಸಿದ್ದೇನೆ, ಆದರೆ ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಸಂಜಯ್ ರಾವತ್

ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಸಂಜಯ್ ರಾವತ್ (Sanjay Raut) ಅವರಿಗೆ ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರನ್ನು ಬಳಸಿ ಕೊಲೆ ಬೆದರಿಕೆ (Death Threat)ಹಾಕಿದ್ದಕ್ಕೆ ಸಂಬಂಧಿಸಿದಂತೆ ಪುಣೆಯಿಂದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ಆ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಕಾಣಸಿಕ್ಕರೆ ಎಕೆ-47 ರೈಫಲ್‌ನಿಂದ ಗುಂಡು ಹಾರಿಸುವುದಾಗಿ ರಾವತ್‌ಗೆ ಸಂದೇಶಗಳು ಮತ್ತು ಕರೆ ಮೂಲಕ ಬೆದರಿಕೆ ಬಂದಿತ್ತು. ಈ ಸಂಬಂಧ ಶಿವಸೇನಾ(ಯುಬಿಟಿ) ನಾಯಕ ದೂರು ದಾಖಲಿಸಿದ್ದರು.

ಬೆದರಿಕೆ ಕರೆ ಬಗ್ಗೆ ನಾನು ಪೊಲೀಸರಿಗೆ ತಿಳಿಸಿದ್ದೇನೆ, ಆದರೆ ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ. ನಿನ್ನೆ ರಾತ್ರಿ ನನಗೆ ಕರೆ ಬಂದಿತ್ತು. ಇಂತಹ ಬೆದರಿಕೆಗಳ ಬಗ್ಗೆ ನಾನು ಸರ್ಕಾರ ಮತ್ತು ಗೃಹ ಸಚಿವರಿಗೆ ತಿಳಿಸಿದಾಗ ಅವರು ಅದನ್ನು ಸ್ಟಂಟ್ ಎಂದು ಅಣಕಿಸುತ್ತಾರೆ. ಗಲಭೆ, ಗೂಂಡಾಗಿರಿ ಮತ್ತು ಭಯೋತ್ಪಾದನೆಯನ್ನು ಪ್ರಾಯೋಜಿಸುವಲ್ಲಿ ಸರ್ಕಾರ ನಿರತವಾಗಿದೆ ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ರಾವುತ್ ಹೇಳಿದ್ದಾರೆ.

ಬೆಳವಣಿಗೆಯನ್ನು ದೃಢೀಕರಿಸಿದ ಪೊಲೀಸ್ ಅಧಿಕಾರಿ, ಸಿದ್ದು ಮೂಸೆವಾಲಾನ ಸ್ಥಿತಿಯೇ ನಿಮಗೆ ಆಗಲಿದೆ ಎಂದು ಸಂಜಯ್ ರಾವತ್ ಅವರಿಗೆ ಜೀವ ಬೆದರಿಕೆಗಳು ಬಂದಿವೆ. ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಬೆದರಿಕೆ ಬಂದಿತ್ತು. ದೆಹಲಿಯಲ್ಲಿ ಭೇಟಿಯಾದರೆ ಎಕೆ-47 ಹಿಡಿದು ಸಾಯಿಸುತ್ತೇನೆ ಎಂದು ಸಂದೇಶದಲ್ಲಿ ಹೇಳಲಾಗಿದೆ. ಈ ಬಗ್ಗೆ ರಾವುತ್ ದೂರು ನೀಡಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ:Defence Exports: ದಾಖಲೆ ಮಟ್ಟದಲ್ಲಿ ರಕ್ಷಣಾ ರಫ್ತು; ರಾಜನಾಥ್ ಸಿಂಗ್, ಮೋದಿ ಹರ್ಷ

ಈ ಹಿಂದೆ ಸಲ್ಮಾನ್ ಖಾನ್​​ಗೂ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿತ್ತು. ಬೆದರಿಕೆ ಕರೆಯಲ್ಲಿ ಸಿಧು ಮೂಸೆವಾಲನಂಥ ಸ್ಥಿತಿಯೇ ನಿನ್ನದೂ ಆಗಲಿದೆ ಎಂದು ಹೇಳಲಾಗಿತ್ತು. ಆರೋಪಿ, ರಾಜಸ್ಥಾನದ ಜೋಧಪುರ ಜಿಲ್ಲೆಯ ಲುನಿ ನಿವಾಸಿ ಧಕದ್ ರಾಮ್ ಎಂಬಾತನನ್ನು ಬಂಧಿಸಿ ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ