AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ.ಡಿ. ಅಧಿಕಾರಿಗಳು ಕಿರುಕುಳ ನೀಡುತ್ತಾರೆ, ಬೆದರಿಸುತ್ತಾರೆ: ವೆಂಕಯ್ಯ ನಾಯ್ಡುರಿಗೆ ಪತ್ರ ಬರೆದ ಶಿವಸೇನೆ ಎಂಪಿ ಸಂಜಯ್ ರಾವತ್​

ಬಿಜೆಪಿಯಿಂದ ಬೇರ್ಪಟ್ಟಾಗಿನಿಂದಲೂ ಕೇಂದ್ರ ಜಾರಿ ನಿರ್ದೇಶನಾಲಯ ಸೇರಿ ಇನ್ನಿತರ ತನಿಖಾ ದಳಗಳು ಶಿವಸೇನೆ ಸಂಸದರು, ಇನ್ನಿತರ ಮುಖಂಡರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡುತ್ತಿವೆ ಎಂದು ಸಂಜಯ್​ ರಾವತ್ ಆರೋಪಿಸಿದ್ದಾರೆ.

ಇ.ಡಿ. ಅಧಿಕಾರಿಗಳು ಕಿರುಕುಳ ನೀಡುತ್ತಾರೆ, ಬೆದರಿಸುತ್ತಾರೆ: ವೆಂಕಯ್ಯ ನಾಯ್ಡುರಿಗೆ ಪತ್ರ ಬರೆದ ಶಿವಸೇನೆ ಎಂಪಿ ಸಂಜಯ್ ರಾವತ್​
ಸಂಜಯ್ ರಾವುತ್
TV9 Web
| Edited By: |

Updated on:Feb 09, 2022 | 4:49 PM

Share

ಶಿವಸೇನೆ ಎಂಪಿ ಸಂಜಯ್​ ರಾವತ್​ಗೆ (Shiv Sena MP Sanjay Raut)ಇದೀಗ ಇ.ಡಿ. (ED) ಭಯ ಶುರುವಾಗಿದೆ. ಅದರ ಬೆನ್ನಲ್ಲೇ ಅವರು ಉಪ ರಾಷ್ಟ್ರಪತಿ ಮತ್ತು ರಾಜ್ಯ ಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡುರಿಗೆ (M Venkaiah Naidu) ಪತ್ರ ಬರೆದು,  ನಮ್ಮ ಪಕ್ಷ ಬಿಜೆಪಿ ಮೈತ್ರಿಯನ್ನು ಕಡಿದುಕೊಂಡಾಗಿನಿಂದಲೂ ಕೂಡ, ನಮ್ಮ ಪಕ್ಷದ ನಾಯಕರು ಮತ್ತು ಅವರ ಸಂಬಂಧಿಗಳ ಮೇಲೆ ಜಾರಿ ನಿರ್ದೇಶನಾಲಯ ಮತ್ತು ಇತರ ಕೇಂದ್ರ ತನಿಖಾ ದಳಗಳಿಂದ ದಾಳಿಯಾಗುತ್ತಿದೆ. ನಮ್ಮ ಪಕ್ಷ ಅಂತಲ್ಲ, ಪ್ರತಿಪಕ್ಷಗಳ ಹಲವು ಸಂಸದರು, ಅವರ ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರ ವಿರುದ್ಧ ಕೇಂದ್ರ ತನಿಖಾ ದಳಗಳು ತಮ್ಮ ಅಧಿಕಾರವನ್ನು ದುರುಪಯೋಗ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. 

ನಾನು ಮೂರು ದಶಕಗಳ ಹಿಂದೆ ರಾಜಕೀಯ ಜೀವನ ಪ್ರಾರಂಭಿಸಿದೆ. ಅಂದಿನಿಂದಲೂ ಶಿವಸೇನೆಯಲ್ಲಿಯೇ ಇದ್ದಾರೆ. ನಮ್ಮ ಶಿವಸೇನೆ ಪಕ್ಷ ಇದೀಗ ಮಹಾರಾಷ್ಟ್ರದಲ್ಲಿ ಎನ್​ಸಿಪಿ ಮತ್ತು ಕಾಂಗ್ರೆಸ್​ ಜತೆಗೂಡಿ ಸರ್ಕಾರ ರಚನೆ ಮಾಡಿದ್ದರೂ ಅದಕ್ಕಿಂತ ಮೊದಲು 25ವರ್ಷ ಬಿಜೆಪಿಯೊಂದಿಗೆ ಮೈತ್ರಿಯಲ್ಲಿತ್ತು. ಅಷ್ಟೇ ಅಲ್ಲ, ಬಿಜೆಪಿ-ಶಿವಸೇನೆ ಮೈತ್ರಿ ಮಹಾರಾಷ್ಟ್ರದಲ್ಲಿ ಸರ್ಕಾರವನ್ನೂ ರಚಿಸಿತ್ತು. ಆದರೆ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಬೇರ್ಪಟ್ಟೆವು. ಆದರೆ ಹಾಗೆ ಬಿಜೆಪಿಯಿಂದ ಬೇರ್ಪಟ್ಟಾಗಿನಿಂದಲೂ ಕೇಂದ್ರ ಜಾರಿ ನಿರ್ದೇಶನಾಲಯ ಸೇರಿ ಇನ್ನಿತರ ತನಿಖಾ ದಳಗಳು ಶಿವಸೇನೆ ಸಂಸದರು, ಇನ್ನಿತರ ಮುಖಂಡರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡುತ್ತಿವೆ. ಅಂದರೆ ಬಿಜೆಪಿಯೇ ಈ ತನಿಖಾದಳಗಳನ್ನು ನಮ್ಮ ಮೇಲೆ ಛೂ ಬಿಡುತ್ತಿದೆ. ಇನ್ನು ಜಾರಿ ನಿರ್ದೇಶನಾಲಯದ ಸಿಬ್ಬಂದಿ, ನಮ್ಮ ಪಕ್ಷದ ಸಂಸದರು, ರಾಜಕಾರಣಿಗಳು, ಅವರ ಪರಿಚಯಸ್ಥರು, ಕುಟುಂಬದವರಿಗೆ ಕಿರುಕುಳ ನೀಡುತ್ತಿದ್ದಾರೆ. ಬೆದರಿಸುತ್ತಿದ್ದಾರೆ. ತಮಗೆ ಬೇಕಾದಂತೆ ಅವರಿಂದ ಮಾಹಿತಿ ಕೆದಕಲು ಏನು ಬೇಕೋ ಅದನ್ನೆಲ್ಲ ಮಾಡುತ್ತಾರೆ ಎಂದು ಸಂಜಯ್​ ರಾವತ್​ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ತಾಯಿಯಾಗುತ್ತಿರುವ ಕಾಜಲ್​ಗೂ ಎದುರಾಯ್ತು ಬಾಡಿ ಶೇಮಿಂಗ್; ಕೀಳು ಮನಸ್ಥಿತಿಗಳಿಗೆ ನಟಿ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ?

Published On - 9:08 am, Wed, 9 February 22

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು