AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರಿ ಮಸೀದಿ ಘಟನೆಯ ಬಳಿಕ ನಾವು ಆ ಒಂದು ನಿರ್ಧಾರ ಕೈಗೊಂಡಿದ್ದರೆ ಈಗ ಶಿವಸೇನೆ ಪ್ರಧಾನಿ ದೇಶವನ್ನಾಳುತ್ತಿದ್ದರು: ಸಂಜಯ್ ರಾವತ್​

ಶಿವಸೇನೆ ನಾಯಕರ ವಾಗ್ದಾಳಿಗೆ ಬಿಜೆಪಿ ನಾಯಕ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಟು ತಿರುಗೇಟು ನೀಡಿದ್ದಾರೆ. ನಾವು (ಬಿಜೆಪಿ-ಆರ್​ಎಸ್​ಎಸ್​) ರಾಮಜನ್ಮಭೂಮಿ ಅಭಿಯಾನದಲ್ಲಿ ಬುಲೆಟ್​ ಮತ್ತು ಲಾಠಿ ರುಚಿ ನೋಡಿದ್ದೇವೆ. ನೀವು ಆಗ ಎಲ್ಲಿದ್ದಿರಿ ಎಂದು ಪ್ರಶ್ನಿಸಿದ್ದಾರೆ.

ಬಾಬರಿ ಮಸೀದಿ ಘಟನೆಯ ಬಳಿಕ ನಾವು ಆ ಒಂದು ನಿರ್ಧಾರ ಕೈಗೊಂಡಿದ್ದರೆ ಈಗ ಶಿವಸೇನೆ ಪ್ರಧಾನಿ ದೇಶವನ್ನಾಳುತ್ತಿದ್ದರು: ಸಂಜಯ್ ರಾವತ್​
ಸಂಜಯ್​ ರಾವತ್​
TV9 Web
| Edited By: |

Updated on:Jan 24, 2022 | 3:36 PM

Share

ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು 25 ವರ್ಷ ಸಮಯ ವ್ಯರ್ಥ ಮಾಡಿದೆವು ಎಂದು ಶಿವಸೇನೆ ನಾಯಕ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ನೀಡಿದ ಬೆನ್ನಲ್ಲೇ, ಶಿವಸೇನೆ ಸಂಸದ ಸಂಜಯ್ ರಾವತ್ (Shiv Sena Leader Sanjay Raut) ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ತಳದಲ್ಲಿದ್ದ ಬಿಜೆಪಿಯನ್ನು ಮೇಲೇರಿಸಿದ್ದೇ ನಮ್ಮ ಶಿವಸೇನೆ ಪಕ್ಷ ಎಂದೂ ಹೇಳಿದ್ದಾರೆ. ಎಎನ್​ಐ ಜತೆ ಮಾತನಾಡಿದ ಸಂಜಯ್​ ರಾವತ್​, ಉತ್ತರ ಪ್ರದೇಶದಲ್ಲಿ ಬಾಬ್ರಿ ಮಸೀದಿ ಧ್ವಂಸ ಘಟನೆಯಾದ ನಂತರ ದೇಶದ ಉತ್ತರ ಭಾಗದಲ್ಲಿ  ಶಿವಸೇನೆಯ ಅಲೆ ಇತ್ತು. ಆ ಸಮಯದಲ್ಲಿ ನಾವು ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಿದ್ದರೆ ಇಂದು ನಮ್ಮ ಪಕ್ಷದ ಪ್ರಧಾನಮಂತ್ರಿ ದೇಶದ ಆಡಳಿತ ನಡೆಸುತ್ತಿದ್ದರು. ಆದರೆ ನಾವು ಬಿಜೆಪಿಗೆ ಬಿಟ್ಟುಕೊಟ್ಟೆವು ಎಂದು ಹೇಳಿದ್ದಾರೆ.  ಅಷ್ಟೇ ಅಲ್ಲ, ಕೇಸರಿ ಪಕ್ಷ ಅಧಿಕಾರಕ್ಕಾಗಿ ಕೇವಲ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ ಎಂದೂ ವಾಗ್ದಾಳಿ ನಡೆಸಿದ್ದಾರೆ. 

ಅದಕ್ಕೂ ಮೊದಲು ಭಾನುವಾರ, ಶಿವಸೇನೆ ಸಂಸ್ಥಾಪಕ ಬಾಳ್​ ಠಾಕ್ರೆ ಜನ್ಮ ವಾರ್ಷಿಕೋತ್ಸವ ಸಮಾರಂಭ ನಿಮಿತ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಿವಸೇನೆ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಉದ್ಧವ್ ಠಾಕ್ರೆ, ನಮ್ಮ ಪಕ್ಷ ಬಿಜೆಪಿಯನ್ನು ತೊರೆದಿದೆ ಹೊರತು ಹಿಂದುತ್ವವನ್ನಲ್ಲ. ಬಿಜೆಪಿ ಮತ್ತು ಹಿಂದುತ್ವ ಒಂದೇ ಅಲ್ಲ, ಹಿಂದುತ್ವಕ್ಕೆ ಸಮಾರ್ಥಾಕವೆಂದರೆ ಅದು ಬಿಜೆಪಿ ಎಂದು ಭಾವಿಸಬೇಕಾಗಿಲ್ಲ ಎಂದು ಹೇಳಿದ್ದರು. ನಾವು ಬಿಜೆಪಿಯನ್ನು ಹೃದಯಪೂರ್ವಕವಾಗಿಯೇ ಬೆಂಬಲಿಸಿದ್ದೆವು. ಆ ಪಕ್ಷ ರಾಷ್ಟ್ರದ ವಿಚಾರದಲ್ಲಿ ಇಟ್ಟುಕೊಂಡಿದ್ದ ಮಹಾತ್ವಾಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಸಂಪೂರ್ಣ ಸಹಕಾರ ನೀಡಿದ್ದೆವು. ಆದರೆ ನಮ್ಮ ಸ್ವಸ್ಥಳವಾದ ಮಹಾರಾಷ್ಟ್ರದಲ್ಲಿ, ನಮ್ಮನ್ನೇ ನಾಶಗೊಳಿಸಲು ಮುಂದಾದ ಬಿಜೆಪಿ ನಂಬಿಕೆ ದ್ರೋಹ ಮಾಡಿತು. ಹಾಗಾಗಿ ನಾವು ಪ್ರತಿರೋಧ ಒಡ್ಡಬೇಕಾಯಿತು ಎಂದೂ ಹೇಳಿದ್ದರು.

ದೇವೇಂದ್ರ ಫಡ್ನವೀಸ್​ ತಿರುಗೇಟು ಶಿವಸೇನೆ ನಾಯಕರ ವಾಗ್ದಾಳಿಗೆ ಬಿಜೆಪಿ ನಾಯಕ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಟು ತಿರುಗೇಟು ನೀಡಿದ್ದಾರೆ. ಶಿವಸೇನೆ ಪಕ್ಷ ಹುಟ್ಟುವುದಕ್ಕೂ ಮೊದಲೇ ಮುಂಬೈನಲ್ಲಿ ಬಿಜೆಪಿಯ ಕಾರ್ಪೋರೇಟರ್​ ಇದ್ದರು ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ನಮ್ಮ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದಾಗಲೇ ಶಿವಸೇನೆ  ನಂಬರ್ 1 ಅಥವಾ 2 ಪಕ್ಷವಾಗಿತ್ತು. ಈಗಂತೂ ನಂಬರ್​ 4ರ ಪಕ್ಷವಾಗಿ ಇದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ನಾವು (ಬಿಜೆಪಿ-ಆರ್​ಎಸ್​ಎಸ್​) ರಾಮಜನ್ಮಭೂಮಿ ಅಭಿಯಾನದಲ್ಲಿ ಬುಲೆಟ್​ ಮತ್ತು ಲಾಠಿ ರುಚಿ ನೋಡಿದ್ದೇವೆ. ನೀವು ಆಗ ಎಲ್ಲಿದ್ದಿರಿ? ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದೆ ಎಂಬುದನ್ನು ನೆನಪಿಡಿ ಎಂದಿದ್ದಾರೆ.

2019ರವರೆಗೂ ಒಟ್ಟಿಗೇ ಇದ್ದ ಬಿಜೆಪಿ ಮತ್ತು ಶಿವಸೇನೆ 2019ರಲ್ಲಿ ಬೇರೆಯಾಗಿವೆ. ಮುಖ್ಯಮಂತ್ರಿ ಹುದ್ದೆಯನ್ನು ಶಿವಸೇನೆಗೆ ಕೊಡಬೇಕು ಎಂಬ ಆಗ್ರಹ ಹೆಚ್ಚಾದ ಬೆನ್ನಲ್ಲೇ ಪಕ್ಷಗಳ ಮಧ್ಯೆ ಬಿರುಕು ಉಂಟಾಗಿತ್ತು. ಬಳಿಕ ಶಿವಸೇನೆ ಬಿಜೆಪಿಯನ್ನು ಬಿಟ್ಟು, ಎನ್​ಸಿಪಿ ಮತ್ತು ಕಾಂಗ್ರೆಸ್ ಜತೆ ಸೇರಿ ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆ ಮಾಡಿದೆ.

ಇದನ್ನೂ ಓದಿ: Union Budget 2022: ಕೇಂದ್ರ ಬಜೆಟ್ 2022ರಿಂದ ವ್ಯಾಪಾರ ವರ್ಗದ ನಿರೀಕ್ಷೆಗಳೇನು?

Published On - 3:29 pm, Mon, 24 January 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ