AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಬಾಳ್ ಠಾಕ್ರೆಯವರ ಫೋಟೋ ಕದ್ದರು, ಈಗ ಬಿಜೆಪಿ ಮತ್ತೊಬ್ಬ ಠಾಕ್ರೆಯನ್ನು ಕದಿಯಲು ಯತ್ನಿಸುತ್ತಿದೆ: ಉದ್ಧವ್ ಠಾಕ್ರೆ

ಮೊದಲು ಬಾಳ್ ಠಾಕ್ರೆಯವರ ಫೋಟೋ ಕದ್ದರು, ಪರವಾಗಿಲ್ಲ. ಇವತ್ತು ಮತ್ತೊಬ್ಬ ಠಾಕ್ರೆಯನ್ನು ಕದಿಯಲು ಯತ್ನಿಸುತ್ತಿದ್ದಾರೆ. ತೆಗೆದುಕೊಳ್ಳಿ. ಇಲ್ಲಿ ನಾನು ಮತ್ತು ನನ್ನ ಜನರೇ ಸಾಕು" ಎಂದು ಮರಾಠವಾಡ ಪ್ರದೇಶದ ನಾಂದೇಡ್ ಮತ್ತು ಹಿಂಗೋಲಿ ಜಿಲ್ಲೆಗಳ ಎರಡು ದಿನದ ಪ್ರವಾಸ ಮುಕ್ತಾಯಗೊಳಿಸಿ ಮಾತನಾಡಿದ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮೊದಲು ಬಾಳ್ ಠಾಕ್ರೆಯವರ ಫೋಟೋ ಕದ್ದರು, ಈಗ ಬಿಜೆಪಿ ಮತ್ತೊಬ್ಬ ಠಾಕ್ರೆಯನ್ನು ಕದಿಯಲು ಯತ್ನಿಸುತ್ತಿದೆ: ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Mar 19, 2024 | 9:06 PM

Share

ದೆಹಲಿ ಮಾರ್ಚ್ 19: ಮುಂಬರುವ ಲೋಕಸಭೆ ಚುನಾವಣೆಯಲ್ಲಿ(Lok sabha Election) ತನ್ನ ಗೆಲುವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಠಾಕ್ರೆಯನ್ನು ಕದಿಯಲು ಪ್ರಯತ್ನಿಸುತ್ತಿದೆ ಎಂದು ಶಿವಸೇನಾ (UBT) ನಾಯಕ ಉದ್ಧವ್ ಠಾಕ್ರೆ (Uddhav Thackeray) ಹೇಳಿದ್ದಾರೆ. ಮಂಗಳವಾರ ತನ್ನ  ಸಂಬಂಧಿ ಮತ್ತು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಗ್ಗೆ ಉದ್ಧವ್ ಠಾಕ್ರೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ನಾಂದೇಡ್ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಬಿಜೆಪಿ ತನ್ನ ಸೋದರ ಸಂಬಂಧಿಯನ್ನು ತೆಗೆದುಕೊಂಡರೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಚುನಾವಣೆಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ರಾಜ್ ಠಾಕ್ರೆ ಇಂದು ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಮತ ಪಡೆಯುವುದಿಲ್ಲ ಎಂಬುದು ಬಿಜೆಪಿಗೆ ಚೆನ್ನಾಗಿ ತಿಳಿದಿದೆ. ಜನರು ಇಲ್ಲಿ (ಬಾಳ್) ಠಾಕ್ರೆ ಹೆಸರಿನಲ್ಲಿ ಮತ ಹಾಕುತ್ತಾರೆ. ಈ ಅರಿವು ಬಿಜೆಪಿಯನ್ನು ಹೊರಗಿನಿಂದ ನಾಯಕರನ್ನು ಕದಿಯಲು ಪ್ರಯತ್ನಿಸಲು ಪ್ರೇರೇಪಿಸಿತು. “ಮೊದಲು ಬಾಳ್ ಠಾಕ್ರೆಯವರ ಫೋಟೋ ಕದ್ದರು, ಪರವಾಗಿಲ್ಲ. ಇವತ್ತು ಮತ್ತೊಬ್ಬ ಠಾಕ್ರೆಯನ್ನು ಕದಿಯಲು ಯತ್ನಿಸುತ್ತಿದ್ದಾರೆ. ತೆಗೆದುಕೊಳ್ಳಿ. ಇಲ್ಲಿ ನಾನು ಮತ್ತು ನನ್ನ ಜನರೇ ಸಾಕು” ಎಂದು ಮರಾಠವಾಡ ಪ್ರದೇಶದ ನಾಂದೇಡ್ ಮತ್ತು ಹಿಂಗೋಲಿ ಜಿಲ್ಲೆಗಳ ಎರಡು ದಿನದ ಪ್ರವಾಸ ಮುಕ್ತಾಯಗೊಳಿಸಿ ಮಾತನಾಡಿದ ಉದ್ಧವ್ ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾದ ರಾಜ್​ ಠಾಕ್ರೆ

ಅವರ ಹಿಂದುತ್ವದ ನಿಲುವಿನಿಂದ ಇತರ ಧರ್ಮದ ಜನರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದ್ದು ಬಿಜೆಪಿಯಿಂದ ಅವಿಭಜಿತ ಶಿವಸೇನಾದ ಪ್ರತಿಷ್ಠೆ ಹಾಳಾಗುತ್ತಿದೆ ಎಂದರು. “ನಾವು ಬಿಜೆಪಿಯೊಂದಿಗೆ ಇದ್ದಾಗ ಶಿವಸೇನಾದ (ಅವಿಭಜಿತ) ಪ್ರತಿಷ್ಠೆ ಕೆಡುತ್ತಿತ್ತು. ಆದರೆ ನಾವು ಅವರೊಂದಿಗೆ ಸಂಬಂಧವನ್ನು ಕಡಿದುಕೊಂಡ ನಂತರ, ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯದ ಸದಸ್ಯರು ಕೂಡ ನಮ್ಮ ಹಿಂದುತ್ವ ಸಿದ್ಧಾಂತದೊಂದಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳುತ್ತಿದ್ದಾರೆ” ಎಂದಿದ್ದಾರೆ ಉದ್ಧವ್ ಠಾಕ್ರೆ.

ರಾಜ್ ಠಾಕ್ರೆ ಶಿವಸೇನಾದ ನಾಯಕರಾಗಿದ್ದರು. ಆದಾಗ್ಯೂ, 2006 ರಲ್ಲಿ, ಅವರು ಉದ್ಧವ್ ಠಾಕ್ರೆ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಪಕ್ಷವನ್ನು ತೊರೆದ ನಂತರ ಎಂಎನ್ಎಸ್ ಅನ್ನು ಸ್ಥಾಪಿಸಿದರು. ಎಂಎನ್ಎಸ್ ಆರಂಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿತು. ಅದು ಚುನಾವಣೆಯಲ್ಲಿ ಸೋತಿದ್ದರೂಗ್ಯೂ, ರಾಜ್ ಠಾಕ್ರೆ ಇನ್ನೂ ಜನಪ್ರಿಯರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ