AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ವಿಮಾನ ನಿಲ್ದಾಣದ ಬಳಿಯಿದ್ದ ‘ಅದಾನಿ ಏರ್​ಪೋರ್ಟ್’ ಸೂಚನಾ ಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು..

ಜಿವಿಕೆ ಗ್ರೂಪ್​​ ನಿಯಂತ್ರಣದಲ್ಲಿದ್ದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜುಲೈನಲ್ಲಿ ಅದಾನಿ ಗ್ರೂಪ್​ನ ಪಾಲಾಗಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯೂ ಅದಾನಿ ಗ್ರೂಪ್​ ಕೈಸೇರಿತ್ತು.

ಮುಂಬೈ ವಿಮಾನ ನಿಲ್ದಾಣದ ಬಳಿಯಿದ್ದ ‘ಅದಾನಿ ಏರ್​ಪೋರ್ಟ್’ ಸೂಚನಾ ಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು..
ನಾಮಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು
TV9 Web
| Updated By: Lakshmi Hegde|

Updated on: Aug 02, 2021 | 7:07 PM

Share

ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Chhatrapati Shivaji Maharaj International Airport) ದ ನಿಯಂತ್ರಣಾ ಹಕ್ಕನ್ನು ಜುಲೈನಲ್ಲಿ ಅದಾನಿ ಗ್ರೂಪ್​ ಪಡೆದಿದ್ದು ಗೊತ್ತೇ ಇದೆ. ಹಾಗೆ ನಿಯಂತ್ರಣಕ್ಕೆ ಪಡೆದ ಬಳಿಕ ಏರ್​ಪೋರ್ಟ್ ಬಳಿಯೇ ಇರುವ ಶಿವಾಜಿ ಪ್ರತಿಮೆಯ ಸಮೀಪ ಅದಾನಿ ಏರ್​ಪೋರ್ಟ್(Adani Airport) ಎಂಬ ನಿಯಾನ್​ ಸೂಚನಾ ಫಲಕವನ್ನು ಹಾಕಲಾಗಿತ್ತು. ಅದನ್ನೀಗ ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೋ ಕೂಡ ವೈರಲ್​ ಆಗಿದೆ.

ಅದಾನಿ ಏರ್​ಪೋರ್ಟ್​ ಸೂಚನಾ ಫಲಕವನ್ನು ನಾಶ ಮಾಡಿದ ಶಿವಸೇನೆ ಕಾರ್ಯಕರ್ತರು ನಂತರ ದಕ್ಷಿಣ ಎಕ್ಸ್​ಪ್ರೆಸ್​ ಹೆದ್ದಾರಿಗೆ ಬಂದಿದ್ದರಿಂದ ಅಲ್ಲಿ, ಕೆಲಹೊತ್ತು ಟ್ರಾಫಿಕ್​ ಉಂಟಾಗಿತ್ತು. ನಗರದ ಉತ್ತರ-ದಕ್ಷಿಣ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಹಾಗೇ ಈ ಕೆಲಸದಲ್ಲಿ ಭಾಗಿಯಾದವರಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿವಿಕೆ ಗ್ರೂಪ್​​ ನಿಯಂತ್ರಣದಲ್ಲಿದ್ದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜುಲೈನಲ್ಲಿ ಅದಾನಿ ಗ್ರೂಪ್​ನ ಪಾಲಾಗಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯೂ ಅದಾನಿ ಗ್ರೂಪ್​ ಕೈಸೇರಿತ್ತು. ಮುಂಬೈ ವಿಮಾನ ನಿಲ್ದಾಣಕ್ಕೆ ಅದಾನಿ ಏರ್​ಪೋರ್ಟ್ ಎಂದು ಹೆಸರಿಡುವುದನ್ನು ಶಿವಸೇನೆ ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ.

ಇದನ್ನೂ ಓದಿ: Bidar: ನಕಲಿ ನೋಟು ತಯಾರಿಕೆ ಅಡ್ಡೆ ಮೇಲೆ ದಾಳಿ; 1 ಲಕ್ಷದ 37 ಸಾವಿರ ರೂ., ಲ್ಯಾಪ್​ಟಾಪ್, ಪ್ರಿಂಟರ್ ವಶಕ್ಕೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ