AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ವಿಮಾನ ನಿಲ್ದಾಣದ ಬಳಿಯಿದ್ದ ‘ಅದಾನಿ ಏರ್​ಪೋರ್ಟ್’ ಸೂಚನಾ ಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು..

ಜಿವಿಕೆ ಗ್ರೂಪ್​​ ನಿಯಂತ್ರಣದಲ್ಲಿದ್ದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜುಲೈನಲ್ಲಿ ಅದಾನಿ ಗ್ರೂಪ್​ನ ಪಾಲಾಗಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯೂ ಅದಾನಿ ಗ್ರೂಪ್​ ಕೈಸೇರಿತ್ತು.

ಮುಂಬೈ ವಿಮಾನ ನಿಲ್ದಾಣದ ಬಳಿಯಿದ್ದ ‘ಅದಾನಿ ಏರ್​ಪೋರ್ಟ್’ ಸೂಚನಾ ಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು..
ನಾಮಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು
TV9 Web
| Edited By: |

Updated on: Aug 02, 2021 | 7:07 PM

Share

ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Chhatrapati Shivaji Maharaj International Airport) ದ ನಿಯಂತ್ರಣಾ ಹಕ್ಕನ್ನು ಜುಲೈನಲ್ಲಿ ಅದಾನಿ ಗ್ರೂಪ್​ ಪಡೆದಿದ್ದು ಗೊತ್ತೇ ಇದೆ. ಹಾಗೆ ನಿಯಂತ್ರಣಕ್ಕೆ ಪಡೆದ ಬಳಿಕ ಏರ್​ಪೋರ್ಟ್ ಬಳಿಯೇ ಇರುವ ಶಿವಾಜಿ ಪ್ರತಿಮೆಯ ಸಮೀಪ ಅದಾನಿ ಏರ್​ಪೋರ್ಟ್(Adani Airport) ಎಂಬ ನಿಯಾನ್​ ಸೂಚನಾ ಫಲಕವನ್ನು ಹಾಕಲಾಗಿತ್ತು. ಅದನ್ನೀಗ ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೋ ಕೂಡ ವೈರಲ್​ ಆಗಿದೆ.

ಅದಾನಿ ಏರ್​ಪೋರ್ಟ್​ ಸೂಚನಾ ಫಲಕವನ್ನು ನಾಶ ಮಾಡಿದ ಶಿವಸೇನೆ ಕಾರ್ಯಕರ್ತರು ನಂತರ ದಕ್ಷಿಣ ಎಕ್ಸ್​ಪ್ರೆಸ್​ ಹೆದ್ದಾರಿಗೆ ಬಂದಿದ್ದರಿಂದ ಅಲ್ಲಿ, ಕೆಲಹೊತ್ತು ಟ್ರಾಫಿಕ್​ ಉಂಟಾಗಿತ್ತು. ನಗರದ ಉತ್ತರ-ದಕ್ಷಿಣ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಹಾಗೇ ಈ ಕೆಲಸದಲ್ಲಿ ಭಾಗಿಯಾದವರಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿವಿಕೆ ಗ್ರೂಪ್​​ ನಿಯಂತ್ರಣದಲ್ಲಿದ್ದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜುಲೈನಲ್ಲಿ ಅದಾನಿ ಗ್ರೂಪ್​ನ ಪಾಲಾಗಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯೂ ಅದಾನಿ ಗ್ರೂಪ್​ ಕೈಸೇರಿತ್ತು. ಮುಂಬೈ ವಿಮಾನ ನಿಲ್ದಾಣಕ್ಕೆ ಅದಾನಿ ಏರ್​ಪೋರ್ಟ್ ಎಂದು ಹೆಸರಿಡುವುದನ್ನು ಶಿವಸೇನೆ ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ.

ಇದನ್ನೂ ಓದಿ: Bidar: ನಕಲಿ ನೋಟು ತಯಾರಿಕೆ ಅಡ್ಡೆ ಮೇಲೆ ದಾಳಿ; 1 ಲಕ್ಷದ 37 ಸಾವಿರ ರೂ., ಲ್ಯಾಪ್​ಟಾಪ್, ಪ್ರಿಂಟರ್ ವಶಕ್ಕೆ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!