AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ವಿಮಾನ ನಿಲ್ದಾಣದ ಬಳಿಯಿದ್ದ ‘ಅದಾನಿ ಏರ್​ಪೋರ್ಟ್’ ಸೂಚನಾ ಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು..

ಜಿವಿಕೆ ಗ್ರೂಪ್​​ ನಿಯಂತ್ರಣದಲ್ಲಿದ್ದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜುಲೈನಲ್ಲಿ ಅದಾನಿ ಗ್ರೂಪ್​ನ ಪಾಲಾಗಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯೂ ಅದಾನಿ ಗ್ರೂಪ್​ ಕೈಸೇರಿತ್ತು.

ಮುಂಬೈ ವಿಮಾನ ನಿಲ್ದಾಣದ ಬಳಿಯಿದ್ದ ‘ಅದಾನಿ ಏರ್​ಪೋರ್ಟ್’ ಸೂಚನಾ ಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು..
ನಾಮಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು
TV9 Web
| Edited By: |

Updated on: Aug 02, 2021 | 7:07 PM

Share

ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Chhatrapati Shivaji Maharaj International Airport) ದ ನಿಯಂತ್ರಣಾ ಹಕ್ಕನ್ನು ಜುಲೈನಲ್ಲಿ ಅದಾನಿ ಗ್ರೂಪ್​ ಪಡೆದಿದ್ದು ಗೊತ್ತೇ ಇದೆ. ಹಾಗೆ ನಿಯಂತ್ರಣಕ್ಕೆ ಪಡೆದ ಬಳಿಕ ಏರ್​ಪೋರ್ಟ್ ಬಳಿಯೇ ಇರುವ ಶಿವಾಜಿ ಪ್ರತಿಮೆಯ ಸಮೀಪ ಅದಾನಿ ಏರ್​ಪೋರ್ಟ್(Adani Airport) ಎಂಬ ನಿಯಾನ್​ ಸೂಚನಾ ಫಲಕವನ್ನು ಹಾಕಲಾಗಿತ್ತು. ಅದನ್ನೀಗ ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೋ ಕೂಡ ವೈರಲ್​ ಆಗಿದೆ.

ಅದಾನಿ ಏರ್​ಪೋರ್ಟ್​ ಸೂಚನಾ ಫಲಕವನ್ನು ನಾಶ ಮಾಡಿದ ಶಿವಸೇನೆ ಕಾರ್ಯಕರ್ತರು ನಂತರ ದಕ್ಷಿಣ ಎಕ್ಸ್​ಪ್ರೆಸ್​ ಹೆದ್ದಾರಿಗೆ ಬಂದಿದ್ದರಿಂದ ಅಲ್ಲಿ, ಕೆಲಹೊತ್ತು ಟ್ರಾಫಿಕ್​ ಉಂಟಾಗಿತ್ತು. ನಗರದ ಉತ್ತರ-ದಕ್ಷಿಣ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಹಾಗೇ ಈ ಕೆಲಸದಲ್ಲಿ ಭಾಗಿಯಾದವರಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿವಿಕೆ ಗ್ರೂಪ್​​ ನಿಯಂತ್ರಣದಲ್ಲಿದ್ದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜುಲೈನಲ್ಲಿ ಅದಾನಿ ಗ್ರೂಪ್​ನ ಪಾಲಾಗಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯೂ ಅದಾನಿ ಗ್ರೂಪ್​ ಕೈಸೇರಿತ್ತು. ಮುಂಬೈ ವಿಮಾನ ನಿಲ್ದಾಣಕ್ಕೆ ಅದಾನಿ ಏರ್​ಪೋರ್ಟ್ ಎಂದು ಹೆಸರಿಡುವುದನ್ನು ಶಿವಸೇನೆ ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ.

ಇದನ್ನೂ ಓದಿ: Bidar: ನಕಲಿ ನೋಟು ತಯಾರಿಕೆ ಅಡ್ಡೆ ಮೇಲೆ ದಾಳಿ; 1 ಲಕ್ಷದ 37 ಸಾವಿರ ರೂ., ಲ್ಯಾಪ್​ಟಾಪ್, ಪ್ರಿಂಟರ್ ವಶಕ್ಕೆ

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು