AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಿರುದ್ಧ ದೇಶ ಹೋರಾಡಲು ನೆಹರೂ, ಗಾಂಧಿ ಕುಟುಂಬವೇ ಕಾರಣ; ಶಿವಸೇನೆ

ಸದ್ಯದ ಒಕ್ಕೂಟ ಸರ್ಕಾರವು ಕೊವಿಡ್ ಅಲೆಯನ್ನು ರಾಜಕೀಯ ರಹಿತವಾಗಿ ಪರಾಮರ್ಶಿಲಿ ನಿರ್ಧಾರ ಕೈಗೊಳ್ಳಬೇಕಿದೆ. ಅಲ್ಲದೇ ಅತ್ಯಂತ ಶ್ರಮವಹಿಸಿ ದೇಶವನ್ನು ಕೊವಿಡ್ ಅಪಾಯದಿಂದ ಪಾರುಮಾಡಬೇಕಿದೆ ಎಂದು ಸಾಮ್ನಾ ತನ್ನ ಸಂಪಾದಕೀಯದಲ್ಲಿ ಬರೆದುಕೊಂಡಿದೆ.

ಕೊವಿಡ್ ವಿರುದ್ಧ ದೇಶ ಹೋರಾಡಲು ನೆಹರೂ, ಗಾಂಧಿ ಕುಟುಂಬವೇ ಕಾರಣ; ಶಿವಸೇನೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
guruganesh bhat
|

Updated on: May 08, 2021 | 8:04 PM

Share

ಮುಂಬೈ: ಭಾರತದಲ್ಲಿ ಈ ಹಿಂದೆ ಆಡಳಿತ ನಡೆಸಿದ ಪ್ರಧಾನಿಗಳು, ವಿಶೇಷತಃ ಪಂಡಿತ್ ಜವಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ರ್ತಿ ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಅವರಂತಹ ನಾಯಕರು ರೂಪಿಸಿದ್ದ ವ್ಯವಸ್ಥೆಯಿಂದಲೇ ಕೊವಿಡ್ ಸೋಂಕಿನ ವಿರುದ್ಧ ಇಷ್ಟು ದೃಢವಾಗಿ ದೇಶ ಹೋರಾಟ ನಡೆಸುತ್ತಿದೆ. ಕಳೆದ 70 ವರ್ಷಗಳಲ್ಲಿ ಆಡಳಿತ ನಡೆಸಿದ ಸರ್ಕಾರಗಳು ರೂಪಿಸಿದ ನೀತಿಯಿಂದ ದೇಶದಲ್ಲಿ ಬಲಿಷ್ಠ ವ್ಯವಸ್ಥೆಯೊಂದು ಬೆಳೆದಿದೆ. ಈ ವ್ಯವಸ್ಥೆಯೇ ಇಂದು ಕೊವಿಡ್ ವಿರುದ್ಧ ಹೋರಾಡಲು ದೇಶಕ್ಕೆ ಸಹಾಯ ಮಾಡುತ್ತಿದೆ ಎಂದು ಶಿವಸೇನಾ ಪಕ್ಷದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಬರೆಯಲಾಗಿದೆ.

ನೆರೆಯ ಚಿಕ್ಕಪುಟ್ಟ ದೇಶಗಳು ಸಹ ಭಾರತಕ್ಕೆ ಕೊವಿಡ್ ವಿರುದ್ಧ ಹೋರಾಡಲು ಸಹಾಯ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ಬಾಂಗ್ಲಾದೇಶ 10 ಸಾವಿರೆ ರೆಮ್​ಡೆಸಿವಿರ್ ವಯಲ್​ಗಳಷ್ಟು ಔಷಧ ಕಳುಹಿಸಿದೆ. ಭೂತಾನ್ ಮೆಡಿಕಲ್ ಆಕ್ಸಿಜನ್ ನೀಡಿದೆ. ನೇಪಾಳ, ಮಯನ್ಮಾರ್ ಮತ್ತು ಶ್ರೀಲಂಕಾಗಳು ಸಹ ‘ಆತ್ಮನಿರ್ಭರ ಭಾರತ’ವನ್ನು ಸಾಧಿಸಲು ಸಹಕರಿಸಿವೆ. ಆದರೂ ಬಹುಕೋಟಿ ವೆಚ್ಚದ ಸೆಂಟ್ರಲ್ ವಿಸ್ತಾ ಯೋಜನೆಯ ಕಾಮಗಾರಿಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿಲ್ಲ. ಸದ್ಯ ಎದುರಾಗಿರುವ ಪಿಡುಗಿನ ವಿರುದ್ಧ ದೇಶ ಈ ಪ್ರಮಾಣದಲ್ಲಿ ಹೋರಾಡುವಲ್ಲಿ ಕಳೆದ 70 ವರ್ಷಗಳಲ್ಲಿ ಆಡಳಿತ ನಡೆಸಿದ ಸರ್ಕಾರಗಳು ರೂಪಿಸಿದ ವ್ಯವಸ್ಥೆಯೇ ಕಾರಣ. ಹೊರತು ಇಂದಿನ ನಿರ್ಣಯ ಕೈಗೊಳ್ಳಲು ಬಾರದ ಕೇಂದ್ರ ಸರ್ಕಾರವಲ್ಲ ಎಂದು ಶಿವಸೇನೆಯ ಸಾಮ್ನಾ ಪತ್ರಿಕೆ ತನ್ನ ಹಳೆಯ ದೋಸ್ತಿಪಕ್ಷ ಬಿಜೆಪಿಗೆ ಚಾಟಿ ಬೀಸಿದೆ.

ಸದ್ಯದ ಒಕ್ಕೂಟ ಸರ್ಕಾರವು ಕೊವಿಡ್ ಅಲೆಯನ್ನು ರಾಜಕೀಯ ರಹಿತವಾಗಿ ಪರಾಮರ್ಶಿಲಿ ನಿರ್ಧಾರ ಕೈಗೊಳ್ಳಬೇಕಿದೆ. ಅಲ್ಲದೇ ಅತ್ಯಂತ ಶ್ರಮವಹಿಸಿ ದೇಶವನ್ನು ಕೊವಿಡ್ ಅಪಾಯದಿಂದ ಪಾರುಮಾಡಬೇಕಿದೆ ಎಂದು ಸಾಮ್ನಾ ತನ್ನ ಸಂಪಾದಕೀಯದಲ್ಲಿ ಬರೆದುಕೊಂಡಿದೆ.

ಇದನ್ನೂ ಓದಿ: ಆಕ್ಸಿಜನ್ ಪೂರೈಕೆಗಾಗಿ 12 ಸದಸ್ಯರ ಟಾಸ್ಕ್​ಫೋರ್ಸ್ ರಚಿಸಿದ ಸುಪ್ರೀಂ; ಕರ್ನಾಟಕದ ಡಾ.ದೇವಿ ಪ್ರಸಾದ್ ಶೆಟ್ಟಿಗೂ ಸ್ಥಾನ

Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್​ 8 (Shivasena Saamana wrotes Nehru Gandhi familly and govt is reason for India surving in Covid crisis)

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?