AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಗೌರವ ಬಿಟ್ಟು ಎಲ್ಲದಕ್ಕೂ ರಾಜಿಯಾದೆ, ವಾಪಸ್​ ಸಿಕ್ಕಿದ್ದು ಬರೀ ನೋವು ಮಾತ್ರ; ಅಖಿಲೇಶ್ ಯಾದವ್​ ಚಿಕ್ಕಪ್ಪನಿಂದ ಟ್ವೀಟ್​

ಅಖಿಲೇಶ್ ಯಾದವ್​ ಅವರು ಮಾರ್ಚ್​ನಲ್ಲಿ ಒಂದು ಮೀಟಿಂಗ್ ಕರೆದಿದ್ದರು.ಆದರೆ ಅದಕ್ಕೆ ಶಿವಪಾಲ್​ರನ್ನು ಆಹ್ವಾನಿಸಿರಲಿಲ್ಲ. ಹಾಗೇ ಮತ್ತೊಂದು ಸಭೆಗೆ ಶಿವಪಾಲ್ ಅವರೇ ಹೋಗಿರಲಿಲ್ಲ

ಆತ್ಮಗೌರವ ಬಿಟ್ಟು ಎಲ್ಲದಕ್ಕೂ ರಾಜಿಯಾದೆ, ವಾಪಸ್​ ಸಿಕ್ಕಿದ್ದು ಬರೀ ನೋವು ಮಾತ್ರ; ಅಖಿಲೇಶ್ ಯಾದವ್​ ಚಿಕ್ಕಪ್ಪನಿಂದ ಟ್ವೀಟ್​
ಶಿವಪಾಲ್​ ಸಿಂಗ್ ಯಾದವ್​
TV9 Web
| Edited By: |

Updated on:May 03, 2022 | 7:14 PM

Share

ಅಖಿಲೇಶ್​ ಯಾದವ್​ ಚಿಕ್ಕಪ್ಪ ಶಿವಪಾಲ್​ ಸಿಂಗ್​ ಯಾದವ್ ಮಾಡಿರುವ ಟ್ವೀಟ್​ವೊಂದು ಈಗ ಕುತೂಹಲಕ್ಕೆ ಕಾರಣವಾಗಿದೆ. ಅಖಿಲೇಶ್​ ಯಾದವ್​ ಮತ್ತು ಶಿವಪಾಲ್ ಸಿಂಗ್ ಯಾದವ್ ಮಧ್ಯೆ ಏನೂ ಸರಿಯಿಲ್ಲ. ಇಬ್ಬರೂ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಮೂಡಿದೆ. ಅದಕ್ಕಿಂತ ಹೆಚ್ಚಾಗಿ ಶಿವಪಾಲ್ ಸಿಂಗ್ ಯಾದವ್, ತಮ್ಮ ಸೋದರನ ಪುತ್ರ ಅಖಿಲೇಶ್​ ಯಾದವ್​ ಮೇಲೆ ಅಸಮಾಧಾನಗೊಂಡಿದ್ದಾರೆ ಎಂಬ ವರದಿ ಸಾಲುಸಾಲಾಗಿ ಬರುತ್ತಿರುವ ಬೆನ್ನಲ್ಲೇ, ಅವರು ಈ ಟ್ವೀಟ್ ಮಾಡಿದ್ದು ಮತ್ತಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.  ಸ್ವಾಭಿಮಾನಕ್ಕೆ ಧಕ್ಕೆ ತರುವ ಅದೆಷ್ಟೋ ಘಟನೆಗಳು ನಡೆದರೂ ನಾನು ರಾಜಿಯಾಗುತ್ತಲೇ ಬಂದೆ. ಆದರೆ ಅದಕ್ಕೆ ಪ್ರತಿಯಾಗಿ ನನಗೆ ಸಿಕ್ಕಿದ್ದು ಕೇವಲ ನೋವು ಮಾತ್ರ ಎಂದು ಅವರು ಹೇಳಿದ್ದಾರೆ. ಹಾಗಂತ ಇಲ್ಲಿ ಯಾರ ಹೆಸರನ್ನೂ ಹೇಳಿಲ್ಲ.  ಅಖಿಲೇಶ್​ ಯಾದವ್​​ರ ಸಮಾಜವಾದಿ ಪಕ್ಷದ ಜತೆ ಉತ್ತರ ಪ್ರದೇಶ ಚುನಾವಣೆಗೂ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಪ್ರಗತಿಶೀಲ ಸಮಾಜವಾದಿ ಪಾರ್ಟಿ-ಲೋಹಿಯಾ (PSPL) ಮುಖ್ಯಸ್ಥ ಶಿವಪಾಲ್​ ಸಿಂಗ್​ ಯಾದವ್​ ಬಳಿಕ ತುಂಬ ಅಸಮಾಧಾನಗೊಂಡಿದ್ದಾರೆ. ಪಕ್ಷ ಸೋತ ಬೆನ್ನಲ್ಲೇ ನಡೆಸಲಾದ ಸಭೆಗಳಿಗೂ ಇವರು ಹಾಜರಾಗಿರಲಿಲ್ಲ. 

ಟ್ವೀಟ್ ಮಾಡಿರುವ ಶಿವಪಾಲ್​ ಸಿಂಗ್​ ಯಾದವ್​, ನನ್ನ ಆತ್ಮಗೌರವವನ್ನು ಅದೆಷ್ಟೋ ಸಲ ಅಡವಿಟ್ಟು, ಅವರಿಗೆ ಬೇಕಾದಂತೆ ನಡೆದುಕೊಂಡೆ. ಹಾಗಿದ್ದಾಗ್ಯೂ ನಾನೀಗ ಇಷ್ಟು ಸಿಟ್ಟಾಗಿದ್ದೇನೆ ಎಂದರೆ, ಅದೆಷ್ಟರ ಮಟ್ಟಿಗೆ ನನ್ನ ಹೃದಯಕ್ಕೆ ನೋವಾಗಿರಬೇಡ ಎಂದು ಬರೆದುಕೊಂಡಿದ್ದಾರೆ.  ಇದು ಅಖಿಲೇಶ್ ಯಾದವ್​​ರನ್ನು ಉದ್ದೇಶಿಸಿ ಹೇಳಿದ್ದೇ ಎಂಬುದು ರಾಜಕೀಯ ವಲಯದಲ್ಲಿ ಎದ್ದಿರುವ ಚರ್ಚೆ. ಈ ಮುನಿಸು ಶುರುವಾಗಿದ್ದು ವಿಧಾನಸಭೆ ಚುನಾವಣೆ ಮುಗಿದ ಮೇಲೆ. ಅಖಿಲೇಶ್ ಯಾದವ್​ ಅವರು ಮಾರ್ಚ್​ನಲ್ಲಿ ಒಂದು ಮೀಟಿಂಗ್ ಕರೆದಿದ್ದರು.ಆದರೆ ಅದಕ್ಕೆ ಶಿವಪಾಲ್​ರನ್ನು ಆಹ್ವಾನಿಸಿರಲಿಲ್ಲ. ಹಾಗೇ ಮತ್ತೊಂದು ಸಭೆಗೆ ಶಿವಪಾಲ್ ಅವರೇ ಹೋಗಿರಲಿಲ್ಲ. ಅದಾದ ಬಳಿಕ ಶಿವಪಾಲ್ ಸಿಂಗ್ ಯಾದವ್​ ಪದೇಪದೆ ಬಿಜೆಪಿ ಪಾಳೆಯದಲ್ಲಿ ಕಾಣಿಸಿಕೊಳ್ಳಲು ಶುರುವಾಗಿದ್ದಾರೆ.  ಇನ್ನು ಈ ಬಗ್ಗೆ ಸೂಕ್ಷ್ಮವಾಗಿಯೇ ತಿರುಗೇಟು ಕೊಟ್ಟಿರುವ ಅಖಿಲೇಶ್ ಯಾದವ್, ಬಿಜೆಪಿಗೆ ಹತ್ತಿರ ಆಗುವವರಿಗೆ ನಮ್ಮ ಪಕ್ಷದಲ್ಲಿ ಸ್ಥಾನವಿಲ್ಲ ಎಂದಿದ್ದಾರೆ. (Source)

ಇದನ್ನೂ ಓದಿ: ರಂಜಾನ್ ಮುನ್ನಾದಿನ ಬೇಡದ ಅತಿಥಿಯೊಬ್ಬ ಮನೆ ಸೇರಿಕೊಂಡ ಪ್ರಸಂಗ ತುಮಕೂರಿನ ಕುಣಿಗಲ್​ನಲ್ಲಿ!

Published On - 7:11 pm, Tue, 3 May 22

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​