AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದ್ದಕ್ಕೆ ಥಳಿತಕ್ಕೊಳಗಾದ ಮಹಿಳೆಯನ್ನು ಭೇಟಿ ಮಾಡಿದ ಶಿವರಾಜ್ ಸಿಂಗ್ ಚೌಹಾಣ್

ಮುಖ್ಯಮಂತ್ರಿಯೊಂದಿಗಿನ ಸಭೆ ಉತ್ತಮವಾಗಿ ನಡೆದಿದೆ. ಭಯ್ಯಾ ( ಚೌಹಾಣ್) ಅವರು ನಾನು ಮತ್ತು ನನ್ನ ಮಕ್ಕಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುತ್ತಾರೆ, ನಾನು ನನ್ನ ಮತದಾನದ ಹಕ್ಕನ್ನು ನಾನು ಬಯಸಿದ ರೀತಿಯಲ್ಲಿ ಚಲಾಯಿಸಿದ್ದೇನೆ ಎಂದು ಮುಸ್ಲಿಂ ಮಹಿಳೆ ಸಮೀನಾ ಬಿ ಹೇಳಿದ್ದಾರೆ.

ಬಿಜೆಪಿಗೆ ಮತ ಹಾಕಿದ್ದಕ್ಕೆ ಥಳಿತಕ್ಕೊಳಗಾದ ಮಹಿಳೆಯನ್ನು ಭೇಟಿ ಮಾಡಿದ ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 09, 2023 | 6:52 PM

Share

ಭೋಪಾಲ್ ಡಿಸೆಂಬರ್ 09: ಬಿಜೆಪಿಗೆ (BJP) ಮತ ಹಾಕಿದ್ದಕ್ಕೆ ಕುಟುಂಬಸ್ಥರಿಂದ ಥಳಿಸಲ್ಪಟ್ಟ ಮುಸ್ಲಿಂ ಮಹಿಳೆಯೊಬ್ಬರು ಇಂದು (ಶನಿವಾರ) ಮಧ್ಯ ಪ್ರದೇಶದ(Madhya Pradesh) ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು. ಬಿಜೆಪಿಗೆ ಮತ ಹಾಕಿದ ಸಮೀನಾ ಬಿ ಅವರು ತಮ್ಮ ಇಬ್ಬರು ಮಕ್ಕಳನ್ನು ಒಬ್ಬ ಮಗ ಮತ್ತು ಮಗಳನ್ನ ಚೌಹಾಣ್ ಅವರ ಮನೆಗೆ ಕರೆದುಕೊಂಡು ಬಂದಿದ್ದು ಅವರ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕಾಗಿ ಆಕೆಯ ಕುಟುಂಬದವರು ಥಳಿಸಿದ್ದಾರೆ ಎಂಬ ವರದಿಗಳ ಬಗ್ಗೆ ಕೇಳಿದ ಚೌಹಾಣ್ ಮಹಿಳೆಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಗಳು ಅವರಿಗೆ ಸುರಕ್ಷತೆ ಮತ್ತು ಭದ್ರತೆಯ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ. ತಮ್ಮ ಮಕ್ಕಳ ಬಗ್ಗೆ ಅವರು ತೋರಿದ ಕಾಳಜಿಯಿಂದ ಮತ್ತೊಮ್ಮೆ ಬಿಜೆಪಿಗೆ ಮತ ಹಾಕುವುದಾಗಿ ಸಮೀನಾ ಬಿ ಮುಖ್ಯಮಂತ್ರಿಗೆ ತಿಳಿಸಿದರು.

ನಾನು ಬಿಜೆಪಿಗೆ ಮತ ಹಾಕಿದ್ದೇನೆ ಎಂದು ತಿಳಿದ ನನ್ನ ಸೋದರ ಮಾವ ಜಾವೇದ್ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಸಹೋದರ ಶಿವರಾಜ್ ಸಿಂಗ್ ಚೌಹಾಣ್ ಅವರ ಪಕ್ಷಕ್ಕೆ ನಾನು ಏಕೆ ಮತ ಹಾಕಿದ್ದೇನೆ ಎಂದು ಅವರು ಕೇಳಿದ್ದಾರೆ ಎಂದು ಸಮೀನಾ ಹೇಳಿದ್ದಾರೆ.

ಮುಖ್ಯಮಂತ್ರಿಯೊಂದಿಗಿನ ಸಭೆ ಉತ್ತಮವಾಗಿ ನಡೆದಿದೆ. ಭಯ್ಯಾ ( ಚೌಹಾಣ್) ಅವರು ನಾನು ಮತ್ತು ನನ್ನ ಮಕ್ಕಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುತ್ತಾರೆ, ನಾನು ನನ್ನ ಮತದಾನದ ಹಕ್ಕನ್ನು ನಾನು ಬಯಸಿದ ರೀತಿಯಲ್ಲಿ ಚಲಾಯಿಸಿದ್ದೇನೆ ಎಂದು ಹೇಳಿದರು. ಸಂವಿಧಾನವು ನಮ್ಮ ಆಯ್ಕೆಯ ಯಾರಿಗಾದರೂ ಮತ ಚಲಾಯಿಸುವ ಹಕ್ಕನ್ನು ನೀಡುತ್ತದೆ. ಚೌಹಾಣ್ ಯಾವತ್ತೂ ಯಾವುದೇ ತಪ್ಪು ಮಾಡಿಲ್ಲ, ಅದಕ್ಕಾಗಿಯೇ ನಾನು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಅವರು ಸಮೀನಾ ಬಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್