AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದ್ದಕ್ಕೆ ಥಳಿತಕ್ಕೊಳಗಾದ ಮಹಿಳೆಯನ್ನು ಭೇಟಿ ಮಾಡಿದ ಶಿವರಾಜ್ ಸಿಂಗ್ ಚೌಹಾಣ್

ಮುಖ್ಯಮಂತ್ರಿಯೊಂದಿಗಿನ ಸಭೆ ಉತ್ತಮವಾಗಿ ನಡೆದಿದೆ. ಭಯ್ಯಾ ( ಚೌಹಾಣ್) ಅವರು ನಾನು ಮತ್ತು ನನ್ನ ಮಕ್ಕಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುತ್ತಾರೆ, ನಾನು ನನ್ನ ಮತದಾನದ ಹಕ್ಕನ್ನು ನಾನು ಬಯಸಿದ ರೀತಿಯಲ್ಲಿ ಚಲಾಯಿಸಿದ್ದೇನೆ ಎಂದು ಮುಸ್ಲಿಂ ಮಹಿಳೆ ಸಮೀನಾ ಬಿ ಹೇಳಿದ್ದಾರೆ.

ಬಿಜೆಪಿಗೆ ಮತ ಹಾಕಿದ್ದಕ್ಕೆ ಥಳಿತಕ್ಕೊಳಗಾದ ಮಹಿಳೆಯನ್ನು ಭೇಟಿ ಮಾಡಿದ ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
|

Updated on: Dec 09, 2023 | 6:52 PM

Share

ಭೋಪಾಲ್ ಡಿಸೆಂಬರ್ 09: ಬಿಜೆಪಿಗೆ (BJP) ಮತ ಹಾಕಿದ್ದಕ್ಕೆ ಕುಟುಂಬಸ್ಥರಿಂದ ಥಳಿಸಲ್ಪಟ್ಟ ಮುಸ್ಲಿಂ ಮಹಿಳೆಯೊಬ್ಬರು ಇಂದು (ಶನಿವಾರ) ಮಧ್ಯ ಪ್ರದೇಶದ(Madhya Pradesh) ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು. ಬಿಜೆಪಿಗೆ ಮತ ಹಾಕಿದ ಸಮೀನಾ ಬಿ ಅವರು ತಮ್ಮ ಇಬ್ಬರು ಮಕ್ಕಳನ್ನು ಒಬ್ಬ ಮಗ ಮತ್ತು ಮಗಳನ್ನ ಚೌಹಾಣ್ ಅವರ ಮನೆಗೆ ಕರೆದುಕೊಂಡು ಬಂದಿದ್ದು ಅವರ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕಾಗಿ ಆಕೆಯ ಕುಟುಂಬದವರು ಥಳಿಸಿದ್ದಾರೆ ಎಂಬ ವರದಿಗಳ ಬಗ್ಗೆ ಕೇಳಿದ ಚೌಹಾಣ್ ಮಹಿಳೆಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಗಳು ಅವರಿಗೆ ಸುರಕ್ಷತೆ ಮತ್ತು ಭದ್ರತೆಯ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ. ತಮ್ಮ ಮಕ್ಕಳ ಬಗ್ಗೆ ಅವರು ತೋರಿದ ಕಾಳಜಿಯಿಂದ ಮತ್ತೊಮ್ಮೆ ಬಿಜೆಪಿಗೆ ಮತ ಹಾಕುವುದಾಗಿ ಸಮೀನಾ ಬಿ ಮುಖ್ಯಮಂತ್ರಿಗೆ ತಿಳಿಸಿದರು.

ನಾನು ಬಿಜೆಪಿಗೆ ಮತ ಹಾಕಿದ್ದೇನೆ ಎಂದು ತಿಳಿದ ನನ್ನ ಸೋದರ ಮಾವ ಜಾವೇದ್ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಸಹೋದರ ಶಿವರಾಜ್ ಸಿಂಗ್ ಚೌಹಾಣ್ ಅವರ ಪಕ್ಷಕ್ಕೆ ನಾನು ಏಕೆ ಮತ ಹಾಕಿದ್ದೇನೆ ಎಂದು ಅವರು ಕೇಳಿದ್ದಾರೆ ಎಂದು ಸಮೀನಾ ಹೇಳಿದ್ದಾರೆ.

ಮುಖ್ಯಮಂತ್ರಿಯೊಂದಿಗಿನ ಸಭೆ ಉತ್ತಮವಾಗಿ ನಡೆದಿದೆ. ಭಯ್ಯಾ ( ಚೌಹಾಣ್) ಅವರು ನಾನು ಮತ್ತು ನನ್ನ ಮಕ್ಕಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುತ್ತಾರೆ, ನಾನು ನನ್ನ ಮತದಾನದ ಹಕ್ಕನ್ನು ನಾನು ಬಯಸಿದ ರೀತಿಯಲ್ಲಿ ಚಲಾಯಿಸಿದ್ದೇನೆ ಎಂದು ಹೇಳಿದರು. ಸಂವಿಧಾನವು ನಮ್ಮ ಆಯ್ಕೆಯ ಯಾರಿಗಾದರೂ ಮತ ಚಲಾಯಿಸುವ ಹಕ್ಕನ್ನು ನೀಡುತ್ತದೆ. ಚೌಹಾಣ್ ಯಾವತ್ತೂ ಯಾವುದೇ ತಪ್ಪು ಮಾಡಿಲ್ಲ, ಅದಕ್ಕಾಗಿಯೇ ನಾನು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಅವರು ಸಮೀನಾ ಬಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ