AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಅಪ್ಪನ ಮುಂದೆ ‘ಇಡೀ ದೆಹಲಿ ತಲೆಬಾಗುತ್ತದೆ’ ಎಂದ ಶಿವರಾಜ್ ಸಿಂಗ್ ಚೌಹಾಣ್ ಪುತ್ರ

"ನಾನು ದೆಹಲಿಯಲ್ಲಿ ಉಳಿದುಕೊಂಡು ಈಗಷ್ಟೇ ಮರಳಿದ್ದೇನೆ. ಈ ಹಿಂದೆಯೂ ನಮ್ಮ ನಾಯಕ (ಶಿವರಾಜ್ ಚೌಹಾಣ್) ಮುಖ್ಯಮಂತ್ರಿಯಾಗಿ ಜನಪ್ರಿಯರಾಗಿದ್ದರು. ಆದರೆ ಅವರು ಮುಖ್ಯಮಂತ್ರಿಯಾಗಿಲ್ಲದಿದ್ದಾಗ ಏಕೆ ಹೆಚ್ಚು ಜನಪ್ರಿಯರಾದರು ಎಂದು ನನಗೆ ತಿಳಿದಿಲ್ಲ.ಈಗ, ನಮ್ಮ ನಾಯಕ ದೊಡ್ಡ ಗೆಲುವಿನ ನಂತರ ಹೋದಾಗ, ಇಡೀ ದೆಹಲಿ ಇಂದು ಅವರ ಮುಂದೆ ತಲೆಬಾಗುತ್ತಿದೆ ಎಂದಿದ್ದಾರೆ.

ನನ್ನ ಅಪ್ಪನ ಮುಂದೆ ‘ಇಡೀ ದೆಹಲಿ ತಲೆಬಾಗುತ್ತದೆ’ ಎಂದ ಶಿವರಾಜ್ ಸಿಂಗ್ ಚೌಹಾಣ್ ಪುತ್ರ
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
|

Updated on: Jun 22, 2024 | 8:37 PM

Share

ದೆಹಲಿ ಜೂನ್ 22: ಕೇಂದ್ರ ಕೃಷಿ ಸಚಿವ ಮತ್ತು ಮಧ್ಯಪ್ರದೇಶದ (Madhya Pradesh) ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರ ಪುತ್ರ ಲೋಕಸಭೆ (Lok Sabha Elections) ಚುನಾವಣೆಯಲ್ಲಿ ಗೆಲುವಿನ ನಂತರ ಇಡೀ ದೆಹಲಿ ತನ್ನ ತಂದೆಯ ಮುಂದೆ ತಲೆಬಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಶುಕ್ರವಾರ ಸೆಹೋರ್ ಜಿಲ್ಲೆಯ ಬುಧ್ನಿ ವಿಧಾನಸಭಾ ವಿಭಾಗದ ಭೆರುಂಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಕಾರ್ತಿಕೇಯ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

“ನಾನು ದೆಹಲಿಯಲ್ಲಿ ಉಳಿದುಕೊಂಡು ಈಗಷ್ಟೇ ಮರಳಿದ್ದೇನೆ. ಈ ಹಿಂದೆಯೂ ನಮ್ಮ ನಾಯಕ (ಶಿವರಾಜ್ ಚೌಹಾಣ್) ಮುಖ್ಯಮಂತ್ರಿಯಾಗಿ ಜನಪ್ರಿಯರಾಗಿದ್ದರು. ಆದರೆ ಅವರು ಮುಖ್ಯಮಂತ್ರಿಯಾಗಿಲ್ಲದಿದ್ದಾಗ ಏಕೆ ಹೆಚ್ಚು ಜನಪ್ರಿಯರಾದರು ಎಂದು ನನಗೆ ತಿಳಿದಿಲ್ಲ.ಈಗ, ನಮ್ಮ ನಾಯಕ ದೊಡ್ಡ ಗೆಲುವಿನ ನಂತರ ಹೋದಾಗ, ಇಡೀ ದೆಹಲಿ ಇಂದು ಅವರ ಮುಂದೆ ತಲೆಬಾಗುತ್ತಿದೆ. ಇಡೀ ದೆಹಲಿ ಕೂಡ ಅವರನ್ನು ತಿಳಿದಿದೆ, ಗುರುತಿಸುತ್ತದೆ, ಗೌರವಿಸುತ್ತದೆ. ದೆಹಲಿ ಮಾತ್ರವಲ್ಲ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಾವು ಅಗ್ರ ನಾಯಕರನ್ನು ಲೆಕ್ಕ ಹಾಕಿದರೆ, ನಮ್ಮ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಆ ಪಟ್ಟಿಯಲ್ಲಿದ್ದಾರೆ ಎಂದು ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯೂ ಆಗಿರುವ ಕಾರ್ತಿಕೇಯ ಸಿಂಗ್ ಹೇಳಿದ್ದಾರೆ.

ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದ ವಿದಿಶಾ ಲೋಕಸಭಾ ಕ್ಷೇತ್ರದಲ್ಲಿ 8.20 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದಾರೆ.

ಕಾರ್ತಿಕೇಯ ಸಿಂಗ್ ಹೇಳಿಕೆಗೆ ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ತಿರುಗೇಟು ನೀಡಿದ್ದಾರೆ. ಈ ಹೇಳಿಕೆಯು ದೆಹಲಿಗೆ ಹೆದರಿದೆ, ಬಿಜೆಪಿಯೊಳಗೆ ಭಿನ್ನಾಭಿಪ್ರಾಯದ ಭಯವಿದೆ ಎಂದು ಸೂಚಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಪತ್ನಿಯಿಂದ ದೈಹಿಕ ಸಂಬಂಧ ನಿರಾಕರಣೆ ಪತಿಯೊಂದಿಗೆ ಮಾಡುವ ಕ್ರೌರ್ಯ: ಮಧ್ಯಪ್ರದೇಶ ಹೈಕೋರ್ಟ್

“ಶಿವರಾಜ್ ಜೀ ಅವರ ಯುವರಾಜ (ರಾಜಕುಮಾರ) ದೆಹಲಿ ಹೆದರುತ್ತಿದೆ ಎಂದು ಹೇಳುತ್ತಿದ್ದಾರೆ. ಇದು 100% ನಿಜ. ಏಕೆಂದರೆ, ದೇಶವು ಭಯಭೀತರಾಗಿರುವ ಸರ್ವಾಧಿಕಾರಿಯನ್ನು ಎಚ್ಚರಿಕೆಯಿಂದ ನೋಡುತ್ತಿದೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಪಕ್ಷದೊಳಗೆ ಭಿನ್ನಾಭಿಪ್ರಾಯದ ಧ್ವನಿ, ದೊಡ್ಡ ನಾಯಕರ ಬಂಡಾಯ, ಸಮ್ಮಿಶ್ರ ಆಡಳಿತ, ಸರ್ಕಾರಕ್ಕೆ ಬೆಂಬಲ ಕಡಿಮೆಯಾಗುವುದು ಮತ್ತು ಕುರ್ಚಿಯ ಕಾಲು ಅಲುಗಾಡುವ ಭಯವನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ