AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ: ರಾಹುಲ್ ಭೇಟಿಯ ನಂತರ ಸಂಜಯ್ ರಾವುತ್

ವಿರೋಧ ಪಕ್ಷಗಳ ಮೈತ್ರಿಕೂಟ ರಚನೆ ಬಗ್ಗೆ ಶಿವಸೇನೆಗೆ ಆಸಕ್ತಿಯಿದೆ. ಈ ಮೈತ್ರಿಕೂಟದ ಮುಖ ಯಾರಾಗಿರಬೇಕು ಎನ್ನುವುದನ್ನು ಚರ್ಚೆಯ ನಂತರ ನಿರ್ಧರಿಸಬೇಕು ಎಂದರು.

ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ: ರಾಹುಲ್ ಭೇಟಿಯ ನಂತರ ಸಂಜಯ್ ರಾವುತ್
ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
TV9 Web
| Edited By: |

Updated on: Dec 07, 2021 | 7:32 PM

Share

ಮುಂಬೈ: ಕಾಂಗ್ರೆಸ್​ ಸಹಭಾಗಿಯಾಗದೆ ವಿರೋಧಪಕ್ಷಗಳ ಮೈತ್ರಿಕೂಟ ರಚನೆ ಅಸಾಧ್ಯ ಎಂದು ಶಿವಸೇನೆಯ ಸಂಸದ ಸಂಜಯ್ ರಾವುತ್ ಮಂಗಳವಾರ (ಡಿ 7) ಹೇಳಿದರು. ರಾಹುಲ್ ಗಾಂಧಿ ಅವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ವಿರೋಧ ಪಕ್ಷಗಳ ಮೈತ್ರಿಕೂಟ ರಚನೆ ಬಗ್ಗೆ ಶಿವಸೇನೆಗೆ ಆಸಕ್ತಿಯಿದೆ. ಈ ಮೈತ್ರಿಕೂಟದ ಮುಖ ಯಾರಾಗಿರಬೇಕು ಎನ್ನುವುದನ್ನು ಚರ್ಚೆಯ ನಂತರ ನಿರ್ಧರಿಸಬೇಕು. ರಾಹುಲ್ ಗಾಂಧಿ ಅವರು ಶೀಘ್ರ ಮುಂಬೈಗೆ ಬರಲಿದ್ದಾರೆ. ದೇಶದಲ್ಲಿ ಒಂದೇಒಂದು ವಿರೋಧಪಕ್ಷಗಳ ಮೈತ್ರಿಕೂಟ ಇರಬೇಕು ಎಂದರು.

ರಾಹುಲ್ ಗಾಂಧಿ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದೆ. ಮೊದಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಚರ್ಚೆಯ ವಿವರಗಳನ್ನು ತಿಳಿಸುತ್ತೇನೆ. ಅದಾದ ನಂತರ ಎಲ್ಲರಿಗೂ ಮಾಹಿತಿ ನೀಡುತ್ತೇನೆ ಎಂದರು. ಕಾಂಗ್ರೆಸ್ ಪಕ್ಷದ ಮತ್ತೋರ್ವ ಪ್ರಭಾವಿ ನಾಯಕರಾದ ಪ್ರಿಯಾಂಕಾ ಗಾಂಧಿ ಅವರನ್ನು ರಾವುತ್ ಬುಧವಾರ (ಡಿ 8) ಭೇಟಿಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ ಕಾಂಗ್ರೆಸ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್​ಸಿಪಿ) ಮತ್ತು ಶಿವಸೇನೆ ಮೈತ್ರಿಯ ಮಹಾ ವಿಕಾಸ್ ಅಘಾಡಿ ಸರ್ಕಾರ ಅಧಿಕಾರದಲ್ಲಿದೆ.

ತೃಣಮೂಲ ಕಾಂಗ್ರೆಸ್​ನ ನಾಯಕಿ ಮಮತಾ ಬ್ಯಾನರ್ಜಿ ಅವರು ಎನ್​ಸಿಪಿ ನಾಯಕ ಶರದ್​ ಪವಾರ್ ಅವರನ್ನು ಈಚೆಗೆ ಮುಂಬೈನಲ್ಲಿ ಭೇಟಿಯಾಗಿ ಚರ್ಚಿಸಿದ್ದರು. ಭಾರತದಲ್ಲಿ ಯುಪಿಎ ಎಂಬುದು ಉಳಿದಿಲ್ಲ ಎಂಬ ಅವರ ಹೇಳಿಕೆಯು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಕಾಂಗ್ರೆಸ್​ ಪಕ್ಷವನ್ನು ದೂರ ಇರಿಸಿಯೇ ವಿರೋಧ ಪಕ್ಷಗಳ ಮೈತ್ರಿಕೂಟ ರಚಿಸುವ ಬಗ್ಗೆ ಮಮತಾ ಬ್ಯಾನರ್ಜಿ ಈ ವೇಳೆ ಸುಳಿವು ನೀಡಿದ್ದರು. ತಮ್ಮ ಮುಂಬೈ ಭೇಟಿಯ ವೇಳೆ ಸಂಜಯ್ ರಾವುತ್ ಮತ್ತು ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಅವರನ್ನೂ ಮಮತಾ ಬ್ಯಾನರ್ಜಿ ಭೇಟಿ ಮಾಡಿದ್ದರು. ಕಾಂಗ್ರೆಸ್ ಪಕ್ಷವನ್ನು ದೂರ ಇರಿಸಿ ರಚಿಸುವ ಮೈತ್ರಿಕೂಟಕ್ಕೆ ಹೆಚ್ಚು ಬಲ ಇರುವುದರಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಪಕ್ಷವು ಪ್ರತಿಕ್ರಿಯಿಸಿತ್ತು.

ರಾಹುಲ್ ಗಾಂಧಿ ಭೇಟಿಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಸಂಜಯ್ ರಾವುತ್, ‘ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಎಂವಿಎ (ಮಹಾವಿಕಾಸ್ ಅಘಾಡಿ) ಎನ್ನುವುದೇ ಮಿನಿ ಯುಪಿಎ’ ಎಂದು ಹೇಳಿದ್ದರು. ಈ ಹಿಂದೆ ದೇಶದಲ್ಲಿ ಆಡಳಿತ ನಡೆಸಿದ್ದ ಯುಪಿಎ ಅಥವಾ ಎನ್​ಡಿಎ ಮಾದರಿಯಲ್ಲಿ ನಾವೂ ಸಹ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಆಧರಿಸಿ ಕೆಲಸ ಮಾಡುತ್ತಿದ್ದೇವೆ. ಮೈತ್ರಿಕೂಟದ ಭಾಗವಾಗಿರುವ ಪಕ್ಷಗಳ ರಾಜಕೀಯ ದೃಷ್ಟಿಕೋನ ಬೇರೆಯೇ ಆಗಿರಬಹುದು. ಆದರೆ ಅವೆಲ್ಲವೂ ದೇಶದ ಹಿತದೃಷ್ಟಿಯಿಂದ ಒಂದಾಗಿವೆ’ ಎಂದು ವಿವರಿಸಿದ್ದರು.

ಇದನ್ನೂ ಓದಿ: ನೀವು ಯಾಕೆ ನೆಹರು ಅವರನ್ನು ಇಷ್ಟೊಂದು ದ್ವೇಷಿಸುತ್ತೀರಿ?: ಕೇಂದ್ರ ಸರ್ಕಾರಕ್ಕೆ ಸಂಜಯ್ ರಾವುತ್ ಪ್ರಶ್ನೆ ಇದನ್ನೂ ಓದಿ: ಇಡಿ ಕಳುಹಿಸಿದ್ದು ಲವ್ ಲೆಟರ್, ಡೆತ್ ವಾರೆಂಟ್ ಅಲ್ಲ: ಸಂಜಯ್ ರಾವುತ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ