AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾದ ಸಮಯಕ್ಕೆ ಮಲಗಲಿಲ್ಲವೆಂದು ಮಗಳನ್ನು ಕಟ್ಟಿಹಾಕಿ ಸಿಗರೇಟ್​ನಿಂದ ಸುಟ್ಟ ತಂದೆ

ಸರಿಯಾದ ಸಮಯಕ್ಕೆ ಮಲಗುತ್ತಿಲ್ಲವೆಂದು ಮಗಳನ್ನು ಕಟ್ಟಿಹಾಕಿ ಸಿಗರೇಟ್​​ನಿಂದ ತಂದೆಯೊಬ್ಬ ಸುಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 115(2) ಮತ್ತು 118(1) ರ ಅಡಿಯಲ್ಲಿ ತನ್ನ ಮಗಳಿಗೆ ಅಪಾಯಕಾರಿ ವಸ್ತುಗಳಿಂದ ನೋವುಂಟು ಮಾಡಿದ್ದಕ್ಕಾಗಿ ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸರಿಯಾದ ಸಮಯಕ್ಕೆ ಮಲಗಲಿಲ್ಲವೆಂದು ಮಗಳನ್ನು ಕಟ್ಟಿಹಾಕಿ ಸಿಗರೇಟ್​ನಿಂದ ಸುಟ್ಟ ತಂದೆ
ಮಗುImage Credit source: Healthychildren.org
ನಯನಾ ರಾಜೀವ್
|

Updated on: Jul 02, 2025 | 11:39 AM

Share

ಮುಂಬೈ, ಜುಲೈ 02: ಸಮಯಕ್ಕೆ ಸರಿಯಾಗಿ ಮಲಗಲಿಲ್ಲವೆಂದು ಐದು ವರ್ಷದ ಮಗಳನ್ನು ಕಟ್ಟಿಹಾಕಿ ಸಿಗರೇಟ್​​ನಿಂದ ತಂದೆಯೊಬ್ಬ ಸುಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಕ್ಕಳಿಗೆ ತಿದ್ದಿ ಬುದ್ದಿ ಹೇಳಿ ಮನವೊಲಿಸಿ ಮಲಗಿಸುವ ಬದಲು ಏನೂ ಅರಿಯದ ಬಾಲಕಿಗೆ ಚಿತ್ರಹಿಂಸೆ ನೀಡಿದ್ದಾನೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 115(2) ಮತ್ತು 118(1) ರ ಅಡಿಯಲ್ಲಿ ತನ್ನ ಮಗಳಿಗೆ ಅಪಾಯಕಾರಿ ವಸ್ತುಗಳಿಂದ ನೋವುಂಟು ಮಾಡಿದ್ದಕ್ಕಾಗಿ ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಧ್ಯಾಹ್ನ 2.45 ರ ಸುಮಾರಿಗೆ ಮಗುವಿನ ತಾಯಿ ಪೊಲೀಸರಿಗೆ ವಿಡಿಯೋವೊಂದನ್ನು ಕಳುಹಿಸಿದ್ದರು. ಅದರಲ್ಲಿ ಆಕೆಯ ಪತಿ ತಮ್ಮ ಮಗಳಿಗೆ ಸಿಗರೇಟ್​​ನಿಂದ ಸುಟ್ಟು ಚಿತ್ರಹಿಂಸೆ ಕೊಡುತ್ತಿರುವುದನ್ನು ಕಾಣಬಹುದು. ಈ ಆಘಾತಕಾರಿ ವಿಡಿಯೋ ನೋಡಿ ಬೆಚ್ಚಿಬಿದ್ದ ಪೊಲೀಸರು ದೂರು ದಾಖಲಿಸಿದ್ದಾರೆ. ತಂದೆ ಬಾಲಕಿಯ ಕಾಲುಗಳನ್ನು ಕಟ್ಟಿ, ಆಕೆಯ ಮೇಲೆ ಹಲ್ಲೆ ಮಾಡಿ, ಸಿಗರೇಟ್​​ನಿಂದ ಕೆನ್ನೆಯನ್ನು ಸುಟ್ಟಿರುವುದು ವಿಡಿಯೋದಲ್ಲಿದೆ.

ದೂರುದಾರರ ಜೊತೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ವಿಚಾರಣೆಗಾಗಿ ಆರೋಪಿಯ ಮನೆಗೆ ಬಂದು ತಂದೆಯ ಬಳಿ ಮಾತನಾಡಿದ್ದಾರೆ. ಚಾರಣೆಯ ಸಮಯದಲ್ಲಿ, ಸಮಯಕ್ಕೆ ಸರಿಯಾಗಿ ನಿದ್ರೆ ಮಾಡದ ಕಾರಣ ತನ್ನ ತಂದೆ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ.

ಮತ್ತಷ್ಟು ಓದಿ: ಕೇರಳ: ಹುಟ್ಟಿದ ಮರುಕ್ಷಣವೇ ಶಿಶುಗಳನ್ನು ಕೊಂದು ಹೂತು ಹಾಕಿದ್ದ ಲಿವ್-ಇನ್ ಜೋಡಿ

ತಕ್ಷಣ ಕ್ರಮ ಕೈಗೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಂದೆಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ತನಿಖೆ ಮುಂದುವರೆದಿದ್ದು, ಮಗುವಿನ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!