AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಯುವಕನಿಂದ ಅತ್ಯಾಚಾರ!

ಮಧ್ಯಪ್ರದೇಶದಲ್ಲಿ ನಡೆದ ಶಾಕಿಂಗ್ ಘಟನೆಯ ವಿಡಿಯೋವೊಂದು ವೈರಲ್ ಆಗಿದೆ. ಆಸ್ಪತ್ರೆಯ ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ಯುವಕ ಮಹಿಳೆಯ ಮೃತದೇಹವನ್ನು ಸ್ಟ್ರೆಚರ್‌ನಿಂದ ಎಳೆದುಕೊಂಡು ಹೋಗಿ ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮಧ್ಯಪ್ರದೇಶದ ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಯುವಕನಿಂದ ಅತ್ಯಾಚಾರ!
Sexual Harassment
ಸುಷ್ಮಾ ಚಕ್ರೆ
|

Updated on: Oct 11, 2025 | 5:35 PM

Share

ನವದೆಹಲಿ, ಅಕ್ಟೋಬರ್ 11: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (Sexual Harassment) ಅಥವಾ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದರೆ ಅತ್ಯಂತ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ವ್ಯಕ್ತಿಯೊಬ್ಬರು ಶವಾಗಾರದಲ್ಲಿ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದಿದ್ದರೂ ಈ ಘೋರ ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳು ಇತ್ತೀಚೆಗೆ ಪತ್ತೆಯಾಗಿವೆ.

ವರದಿಗಳ ಪ್ರಕಾರ, ಮಹಿಳೆಯ ಶವವನ್ನು ಶವಾಗಾರದೊಳಗೆ ಇರಿಸಿದಾಗ ಅಪರಾಧಿ ಆವರಣಕ್ಕೆ ನುಗ್ಗಿ, ಮಹಿಳೆಯ ಶವವನ್ನು ಎಳೆದುಕೊಂಡು ಹೋಗಿ ಆ ಹೆಣದ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಈ ಕೃತ್ಯವನ್ನು ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗಪಡಿಸಿವೆ. ನಂತರ ಆತನನ್ನು ಭೌರಘಾಟ್ ಪ್ರದೇಶದ ತಂಗಿಯಾಪತ್ ಗ್ರಾಮದ 25 ವರ್ಷದ ನೀಲೇಶ್ ಭಿಲಾಲ ಎಂದು ಗುರುತಿಸಲಾಯಿತು. ಎಕ್ಸ್​ನಲ್ಲಿ ವೈರಲ್ ಆಗಿರುವ ವಿಡಿಯೋದ ಪ್ರಕಾರ, ಆರೋಪಿಯು ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದ್ದ ಸ್ಟ್ರೆಚರ್‌ನಿಂದ ಎಳೆದೊಯ್ದಿದ್ದಾನೆ.

ಇದನ್ನೂ ಓದಿ: ಸಾರ್ವಜನಿಕ ಶೌಚಾಲಯದೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಆ ಮಹಿಳೆಯ ಶವವನ್ನು ಪಕ್ಕಕ್ಕೆ ತೆಗೆದುಕೊಂಡು ಹೋಗಿ ಸಿಸಿಟಿವಿಯ ವ್ಯಾಪ್ತಿಯಿಂದ ದೂರಕ್ಕೆ ಎಳೆದುಕೊಂಡು ಹೋಗಿ ಅಲ್ಲಿ ಆ ವ್ಯಕ್ತಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ, ಅವನು ಮತ್ತೆ ಶವವನ್ನು ಸ್ಟ್ರೆಚರ್ ಬಳಿ ನೆಲದ ಮೇಲೆ ಎಳೆದುಕೊಂಡು ಬಂದಿದ್ದಾನೆ. ಈ ವರ್ಷ ಅಕ್ಟೋಬರ್‌ನಲ್ಲಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ನಂತರ ವೈದ್ಯಕೀಯ ಅಧಿಕಾರಿಯೊಬ್ಬರು. ಡಾ. ಆದಿಯಾ ದಾವರ್ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ನಂತರ, ನಿಲೇಶ್ ಭಿಲಾಲ ಎಂಬ ಯುವಕನನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?