AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ

ಬಿಹಾರದಲ್ಲಿ ಇಡೀ ದೇಶವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ತನ್ನನ್ನು ಮದುವೆಯಾಗಲು ನಿರಾಕರಿಸಿದ 14 ವರ್ಷದ ದಲಿತ ಬಾಲಕಿಯ ಮೇಲೆ 41 ವರ್ಷದ ವ್ಯಕ್ತಿ ಮತ್ತು ಆತನ ಗೆಳೆಯರು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಸ್ತನಗಳು ಮತ್ತು ಗುಪ್ತಾಂಗವನ್ನು ಕತ್ತರಿಸಿ ಕೊಲೆ ಮಾಡಿದ್ದಾರೆ.

Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 15, 2024 | 9:11 PM

Share

ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಾಳಿಕೋರರು ಆ ಬಾಲಕಿಯ ಸ್ತನಗಳನ್ನು ಕತ್ತರಿಸಿ ಆಕೆಯ ಖಾಸಗಿ ಅಂಗಗಳಿಗೆ ಚಾಕುವಿನಿಂದ ಹಲ್ಲೆ ನಡೆಸಿ ಕತ್ತರಿಸಿದ್ದಾರೆ. ಆಕೆಯ ಅರೆಬೆತ್ತಲೆ ಮೃತದೇಹವು ಸೋಮವಾರ ಕೊಳದಲ್ಲಿ ಪತ್ತೆಯಾಗಿದ್ದು, ಆಕೆಯ ಬಾಯಿಗೆ ಬಟ್ಟೆಯನ್ನು ಕಟ್ಟಲಾಗಿತ್ತು.

ಸಂತ್ರಸ್ತೆಯ ಪೋಷಕರು ಅದೇ ಗ್ರಾಮದ 41 ವರ್ಷದ ಸಂಜಯ್ ರೈ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪೋಲೀಸರ ಪ್ರಕಾರ, 14 ವರ್ಷದ ಬಾಲಕಿ ಹಾಗೂ ಆಕೆಯ ಪೋಷಕರು ದಿನಗೂಲಿಯನ್ನು ಮಾಡುತ್ತಿದ್ದು, ಮಂಗಳವಾರ ಬೆಳಿಗ್ಗೆ ಗ್ರಾಮದ ಕೊಳದೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸಂಜಯ್ ರೈ ಈ ಹಿಂದೆ ಆ ಬಾಲಕಿಗೆ ತನ್ನನ್ನು ಮದುವೆಯಾಗಲು ಒಪ್ಪದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ಪೋಷಕರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮರ್ಯಾದಾ ಹತ್ಯೆ; ಹಿಂದೂ ಯುವಕನನ್ನು ಪ್ರೀತಿಸಿದ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಅಣ್ಣ

ಭಾನುವಾರ ರಾತ್ರಿ ರೈ ಮತ್ತು ಅವರ ಸಹಚರರು ಅವರ ಮನೆಗೆ ನುಗ್ಗಿ, ತಂದೆ ಮತ್ತು ಸಹೋದರನನ್ನು ನಿಂದಿಸಿ, ಆ ಹುಡುಗಿಯನ್ನು ಅಪಹರಿಸಿದ್ದಾರೆ. ಮರುದಿನ ಆಕೆಯ ಛಿದ್ರಗೊಂಡ ದೇಹ ಪತ್ತೆಯಾಗಿದೆ.

ಈ ಘಟನೆಯು ರಾಜ್ಯದಲ್ಲಿ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ. ವಿರೋಧ ಪಕ್ಷಗಳಾದ ಆರ್‌ಜೆಡಿ ಮತ್ತು ಬಿಎಸ್‌ಪಿ ಈ ಕ್ರೂರ ಅಪರಾಧದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ