AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಬ್ಯಾಗ್​ನಲ್ಲಿ ಕಟ್ಟಿ ಕಾಡಿನಲ್ಲಿ ಎಸೆದ ಕಾಮುಕ; ಆಮೇಲೆ ನಡೆದಿದ್ದು ಅಚ್ಚರಿ!

ಅಪ್ರಾಪ್ತೆಯನ್ನು ತನ್ನ 'ಗೆಳತಿ' ಎಂದು ಹೇಳಿಕೊಂಡು ಅಪಹರಿಸಿ, ಅತ್ಯಾಚಾರ ಮಾಡಿ, ಕೊಲೆ ಮಾಡಲು ಪ್ರಯತ್ನಿಸಿದ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Shocking News: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಬ್ಯಾಗ್​ನಲ್ಲಿ ಕಟ್ಟಿ ಕಾಡಿನಲ್ಲಿ ಎಸೆದ ಕಾಮುಕ; ಆಮೇಲೆ ನಡೆದಿದ್ದು ಅಚ್ಚರಿ!
ಅತ್ಯಾಚಾರ ನಡೆಸಿದ ಆರೋಪಿ
TV9 Web
| Edited By: |

Updated on: Oct 08, 2022 | 2:38 PM

Share

ಗುವಾಹಟಿ: ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದರಲ್ಲಿ (Shocking News) ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ, ಅತ್ಯಾಚಾರ ನಡೆಸಿ, ಆಕೆಯನ್ನು ಕೊಲ್ಲಲು ಪ್ರಯತ್ನಿಸಿ, ಆಕೆಯನ್ನು ಚೀಲದಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದ. ಆದರೆ, ಸತ್ತುಹೋಗಿದ್ದಾಳೆ ಎಂದುಕೊಂಡಿದ್ದ ಆ ಬಾಲಕಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿ ತನ್ನ ಮನೆಗೆ ಬಂದಿದ್ದಾಳೆ. ಮನೆಗೆ ಬಂದ ಆ ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯ ಮತ್ತು ಕೊಲೆ ಪ್ರಯತ್ನದ ಬಗ್ಗೆ ಮನೆಯವರಿಗೆ ಹೇಳಿದ್ದಾಳೆ.

ಅಪ್ರಾಪ್ತೆಯನ್ನು ತನ್ನ ‘ಗೆಳತಿ’ ಎಂದು ಹೇಳಿಕೊಂಡು ಅಪಹರಿಸಿ, ಅತ್ಯಾಚಾರ ಮಾಡಿ, ಕೊಲೆ ಮಾಡಲು ಪ್ರಯತ್ನಿಸಿದ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆ ಬಾಲಕಿಯ ಮನೆಯವರು ಪೊಲೀಸರಿಗೆ ನೀಡಿದ ದೂರಿನ ನಂತರ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು, ನೇಣು ಹಾಕಿದ ಪಾಪಿಗಳು

ಪೊಲೀಸ್ ಮೂಲಗಳ ಪ್ರಕಾರ, ಆ ಅಪ್ರಾಪ್ತ ಬಾಲಕಿ ಅಕ್ಟೋಬರ್ 3ರಂದು ಬೇರೊಬ್ಬರೊಂದಿಗೆ ದುರ್ಗಾ ಪೂಜೆಯ ಮಂಟಪಕ್ಕೆ ಹೋಗಿದ್ದಾಳೆಂದು ಗೊತ್ತಾದ ನಂತರ ಆ ಯುವಕ ಕೋಪಗೊಂಡು ಈ ಕೃತ್ಯ ಎಸಗಿದ್ದ. ಅಕ್ಟೋಬರ್ 6ರಂದು ಆ ವ್ಯಕ್ತಿಯನ್ನು ಬಂಧಿಸಲಾಯಿತು.

ಬಂಧಿತ ಯುವಕ ಆಕೆಯ ಕತ್ತು ಸೀಳಲು ಯತ್ನಿಸಿ, ಚೀಲದಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ. ಆದರೆ ಆಕೆ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದಾಳೆ. ಅಲ್ಲದೆ, ಅಲ್ಲಿಂದ ಬಚಾವಾಗಿ ಮನೆಗೆ ಮರಳಿದ್ದಾಳೆ. ಆಗ ಆಕೆಯ ಬಟ್ಟೆಗಳು ಹರಿದಿದ್ದವು. ಈಗ ಆಕೆ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ