AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ತನಗೆ ಕಚ್ಚಿದ ಹಾವನ್ನು ಕಚ್ಚಿ ಕೊಂದ 8 ವರ್ಷದ ಬಾಲಕ; ಅಚ್ಚರಿಯಾದರೂ ಸತ್ಯ!

ನಾಗರಹಾವು ಕಚ್ಚಿದ್ದರೂ ಅಚ್ಚರಿಯ ರೀತಿಯಲ್ಲಿ ಆ ಬಾಲಕ ಬದುಕುಳಿದಿದ್ದಾನೆ. ಆದರೆ, ಆತನಿಂದ ಕಚ್ಚಿಸಿಕೊಂಡ ನಾಗರಹಾವು ಮೃತಪಟ್ಟಿದೆ.

Shocking News: ತನಗೆ ಕಚ್ಚಿದ ಹಾವನ್ನು ಕಚ್ಚಿ ಕೊಂದ 8 ವರ್ಷದ ಬಾಲಕ; ಅಚ್ಚರಿಯಾದರೂ ಸತ್ಯ!
ಬಾಲಕ ದೀಪಕ್
TV9 Web
| Edited By: |

Updated on:Nov 05, 2022 | 12:21 PM

Share

ಛತ್ತೀಸ್​ಗಢ: ಮಕ್ಕಳಿಗೆ ಹಾವು ಕಚ್ಚಿದರೆ ಅವರಿಗೆ ಮಾತ್ರವಲ್ಲ ಅವರ ಪೋಷಕರಿಗೂ ಕೈ-ಕಾಲು ಆಡುವುದಿಲ್ಲ. ಆದರೆ, ಛತ್ತೀಸ್​ಗಢದ (Chhattisgarh) ಜಶ್‌ಪುರ ಜಿಲ್ಲೆಯ 8 ವರ್ಷದ ಬಾಲಕ ದೀಪಕ್ ತನ್ನ ಮನೆಯ ಹಿತ್ತಲಿನಲ್ಲಿ ಖುಷಿಯಿಂದ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅಲ್ಲಿಗೆ ಬಂದ ನಾಗರಹಾವು (Cobra) ಆತನ ಕಾಲಿಗೆ ಸುತ್ತಿಕೊಂಡಿತು. ಆತ ತಪ್ಪಿಸಿಕೊಳ್ಳಲು ಕೊಸರಾಡಿದಾಗ ಆ ಹಾವು ಆತನಿಗೆ ಕಚ್ಚಿತು. ಆಗ ನೋವಿನಿಂದ ಕಿರುಚಾಡಿದ ಆ ಬಾಲಕ ತನ್ನ ಕಾಲಿನತ್ತ ಬಗ್ಗಿ ಆ ಹಾವನ್ನು ಎಳೆಯಲು ಹೋಗಿದ್ದಾನೆ. ಆಗ ಆ ಹಾವು ಆತನ ಕೈಗೆ ಸುತ್ತಿಕೊಂಡಿದೆ. ಇದರಿಂದ ಆತ ಹಾವಿಗೆ ವಾಪಾಸ್ ಕಚ್ಚಿದ್ದಾನೆ. ಆತ ಸಿಟ್ಟಿನಿಂದ ಜೋರಾಗಿ ಕಚ್ಚಿದ್ದರಿಂದ ಆ ನಾಗರಹಾವಿಗೆ ಗಾಯವಾಗಿ ಆ ಹಾವು ಸಾವನ್ನಪ್ಪಿದೆ!

ನಾಗರಹಾವು ಕಚ್ಚಿದ್ದರೂ ಅಚ್ಚರಿಯ ರೀತಿಯಲ್ಲಿ ಆ ಬಾಲಕ ಬದುಕುಳಿದಿದ್ದಾನೆ. ಆದರೆ, ಆತನಿಂದ ಕಚ್ಚಿಸಿಕೊಂಡ ನಾಗರಹಾವು ಮೃತಪಟ್ಟಿದೆ. ಹಾವಿಗೆ 2 ಬಾರಿ ಕಚ್ಚಿದ ಆ ಬಾಲಕನ ಕಿರುಚಾಟ ಕೇಳಿ ಮನೆಯವರು ಹೊರಗೆ ಓಡಿಬರುವಷ್ಟರಲ್ಲಿ ಆ ಹಾವು ನೆಲದ ಮೇಲೆ ಬಿದ್ದಿತ್ತು. ಹಾವು ನನ್ನ ಕೈಗೆ ಸುತ್ತಿಕೊಂಡು ಕಚ್ಚಿತು. ಇದರಿಂದ ನನಗೆ ಬಹಳ ನೋವಾಯಿತು. ಹಾವಿನಿಂದ ಬಿಡಿಸಿಕೊಳ್ಳು ನಾನು ಸಾಕಷ್ಟು ಪ್ರಯತ್ನಿಸಿದೆ. ಆದರೆ ಅದು ನನ್ನನ್ನು ಬಿಡಲೇ ಇಲ್ಲ. ಕೊನೆಗೆ ಹಾವಿಗೆ 2 ಬಾರಿ ಕಚ್ಚಿದೆ ಎಂದು ಬಾಲಕ ದೀಪಕ್ ತಿಳಿಸಿದ್ದಾನೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಮನೆಯ ಮೀಟರ್​​ ಬೋರ್ಡ್​​ನಲ್ಲಿ ಅಡಗಿ ಕುಳಿತಿತ್ತು ನಾಗರ ಹಾವು

ತನಗೆ ಹಾವು ಕಚ್ಚಿದ ವಿಷಯವನ್ನು ತನ್ನ ಪೋಷಕರಿಗೆ ತಿಳಿಸಿದಾಗ ಆ ಬಾಲಕನ ಕುಟುಂಬಸ್ಥರು ಆತನನ್ನು ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿ ಬಾಲಕನಿಗೆ ಆತನಿಗೆ ಔಷಧಿ ನೀಡಲಾಯಿತು. ಆ ಹಾವು ಆ ಬಾಲಕನ ದೇಹದಲ್ಲಿ ವಿಷವನ್ನು ಬಿಟ್ಟಿರಲಿಲ್ಲ. ಅದು ಹಾಗೇ ಕಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಒಂದು ದಿನ ಆತನನ್ನು ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ಈಗ ಆತ ಸಂಪೂರ್ಣವಾಗಿ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Sat, 5 November 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ