AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ವೈವಾಹಿಕ ಕಲಹದಿಂದ ಗಲಾಟೆ; ಪತ್ನಿ, ಅಪ್ರಾಪ್ತ ಮಗಳು, ಅತ್ತೆಗೆ ಇರಿದ ಗಂಡ!

ಚಾಕುವಿನಿಂದ ಇರಿತಕ್ಕೊಳಗಾದವರನ್ನು ಸಿದ್ಧಾರ್ಥ್ ಅವರ ಪತ್ನಿ ಅದಿತಿ ಶರ್ಮಾ (37), ಆಕೆಯ 8 ವರ್ಷದ ಮಗಳು ಮತ್ತು ಆಕೆಯ ತಾಯಿ ಮಾಯಾ ದೇವಿ (60) ಎಂದು ಗುರುತಿಸಲಾಗಿದೆ.

Shocking News: ವೈವಾಹಿಕ ಕಲಹದಿಂದ ಗಲಾಟೆ; ಪತ್ನಿ, ಅಪ್ರಾಪ್ತ ಮಗಳು, ಅತ್ತೆಗೆ ಇರಿದ ಗಂಡ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 29, 2022 | 10:15 AM

Share

ನವದೆಹಲಿ: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಗಳು ಮತ್ತು ಅತ್ತೆಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಆರೋಪದ ಮೇಲೆ ದೆಹಲಿಯಲ್ಲಿ (Delhi) ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಆಘಾತಕಾರಿ ಘಟನೆ (Shocking News) ನಡೆದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಗುರುಗಾಂವ್‌ನಲ್ಲಿ ಇಂಜಿನಿಯರ್ ಆಗಿದ್ದ ಸಿದ್ಧಾರ್ಥ್ (37) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾದವರನ್ನು ಸಿದ್ಧಾರ್ಥ್ ಅವರ ಪತ್ನಿ ಅದಿತಿ ಶರ್ಮಾ (37), ಆಕೆಯ 8 ವರ್ಷದ ಮಗಳು ಮತ್ತು ಆಕೆಯ ತಾಯಿ ಮಾಯಾ ದೇವಿ (60) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ವಸುಂಧರಾ ಎನ್‌ಕ್ಲೇವ್‌ನ ಧರ್ಮಶಿಲಾ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ ಪೊಲೀಸ್ ಆಯುಕ್ತ (ಪೂರ್ವ) ಪ್ರಿಯಾಂಕಾ ಕಶ್ಯಪ್ ಪ್ರಕಾರ, ವೈವಾಹಿಕ ಭಿನ್ನಾಭಿಪ್ರಾಯವೇ ಈ ಘಟನೆಗೆ ಕಾರಣ ಎಂದು ನಂಬಲಾಗಿದೆ. ಭಾರತೀಯ ದಂಡ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ಹೆಚ್ಚಿನ ತನಿಖೆಗಳನ್ನು ನಡೆಸಲಾಗುತ್ತಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೆ ಬಾಲಕಿಗೆ ಚಾಕು ಇರಿದು ಕೊಲೆ; ಆತ್ಮಹತ್ಯೆ ಮಾಡಿಕೊಂಡ ಆರೋಪಿ

ಈ ವಾರದ ಆರಂಭದಲ್ಲಿ ಇದೇ ರೀತಿಯ ಘಟನೆಯಲ್ಲಿ, ದಕ್ಷಿಣ ದೆಹಲಿಯ ದಕ್ಷಿಣಪುರಿ ಪ್ರದೇಶದಲ್ಲಿ 29 ವರ್ಷದ ಮಹಿಳೆಯೊಬ್ಬಳಿಗೆ ಆಕೆ ಕುಡುಕ ಪತಿ ಅನೇಕ ಬಾರಿ ಇರಿದಿದ್ದನು. ಸಂತ್ರಸ್ತೆ ತನ್ನ ಪತಿಯಿಂದ ದೂರವಾಗಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದರು. ಆಕೆಯ ಗಂಡ ಮಕ್ಕಳನ್ನು ಭೇಟಿ ಮಾಡಿದಾಗ ಆ ಮಹಿಳೆ ಗಲಾಟೆ ಮಾಡಿದಾಗ ಈ ಘಟನೆ ಸಂಭವಿಸಿದೆ.

ಆರೋಪಿಯನ್ನು ಸೋಫಾ ರಿಪೇರಿ ಮಾಡುವ ಬೋಬಿ (32) ಎಂದು ಗುರುತಿಸಲಾಗಿತ್ತು. ಅವರು ಸುಮಾರು 11 ವರ್ಷಗಳ ಹಿಂದೆ ಮದುವೆಯಾಗಿದ್ದರು. ಕುಡಿತದ ಚಟದಿಂದ ಈತನ ನಡುವೆ ಪದೇ ಪದೇ ಜಗಳ ನಡೆಯುತ್ತಿದ್ದು, ಕಳೆದ 3 ತಿಂಗಳಿಂದ ದೂರ ವಾಸವಾಗಿದ್ದ ಪತ್ನಿ. ಮಹಿಳೆ ಪೊಲೀಸರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು