AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shoking News: ನಾಯಿಯನ್ನು “ನಾಯಿ” ಎಂದು ಕರೆದಿದ್ದಕ್ಕೆ ಬಿತ್ತು ರೈತನ ಹೆಣ

ರೈತನೊಬ್ಬ ತನ್ನ ನೆರೆಮನೆಯ ಸಾಕುನಾಯಿಯನ್ನು 'ನಾಯಿ' ಎಂದು ಕರೆದಕ್ಕೆ ಜಗಳ ನಡೆದು ಹತ್ಯೆಯಾಗಿದ್ದಾನೆ ಎಂದು ವರದಿಯಾಗಿದೆ.

Shoking News: ನಾಯಿಯನ್ನು ನಾಯಿ ಎಂದು ಕರೆದಿದ್ದಕ್ಕೆ ಬಿತ್ತು ರೈತನ ಹೆಣ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 23, 2023 | 3:51 PM

Share

ತಮಿಳುನಾಡಿನ (Tamil Nadu) ದಿಂಡಿಗಲ್ ಜಿಲ್ಲೆಯ ತಾಡಿಕೊಂಬು ಪಟ್ಟಣದಲ್ಲಿ 65 ವರ್ಷದ ರೈತನೊಬ್ಬ ತನ್ನ ನೆರೆಮನೆಯ ಸಾಕುನಾಯಿಯನ್ನು ‘ನಾಯಿ(Dog) ಎಂದು ಕರೆದಕ್ಕೆ ಜಗಳ ನಡೆದು ಹತ್ಯೆಯಾಗಿದ್ದಾನೆ ಎಂದು ವರದಿಯಾಗಿದೆ. ರಾಯಪ್ಪ ಎಂಬ ರೈತ ತನ್ನ ನೆರೆಹೊರೆಯವರ ನಾಯಿಗಳು ತುಂಬಾ ಸಮಸ್ಯೆಯನ್ನು ಮಾಡುತ್ತಿತ್ತು. ನಾಯಿ ಮಾಲಿಕರಾದ ಡೇನಿಯಲ್ ಮತ್ತು ವಿನ್ಸೆಂಟ್ ಅವರ ಶ್ವಾನವು ದಾರಿಯಲ್ಲಿ ಹಾದುಹೋಗುವ ಜನರ ಮೇಲೆ ದಾಳಿ ನಡೆಸುತ್ತದೆ ಎಂದು ಅವರು ಹಲವಾರು ಬಾರಿ ಪೊಲೀಸರಿಗೆ ದೂರು ನೀಡಿದ್ದರು.

ಆದರೆ ಈ ಬಗ್ಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ, ಇದೀಗ ಡೇನಿಯಲ್ ಮತ್ತು ವಿನ್ಸೆಂಟ್ ಅವರ ಶ್ವಾನವನ್ನು ರಾಯಪ್ಪ ಹೆಸರಿಟ್ಟು ಕರೆಯಲು ನಿರಾಕರಿಸಿ, ನಾಯಿಗಳನ್ನು ಸಾಯಿಸಬೇಕು ಎಂದು ಹೇಳಿದ್ದಕ್ಕೆ ದೊಡ್ಡ ಜಗಳವೂ ಇವರ ಮಧ್ಯೆ ಶುರುವಾಗಿದೆ.

ಇದನ್ನು ಓದಿ:Shoking News: ಮಕ್ಕಳನ್ನು ವಾಶ್‌ರೂಮ್‌ನಲ್ಲಿ ಆಟವಾಡಲು ಬಿಡಬೇಡಿ, ಮನೆಯವರ ಅಜಾಗರೂಕತೆಯಿಂದ ಮಗು ಸಾವು

ನಂತರ ಇವರು ನಡುವಿನ ಜಗಳ ಕೈಮೀರಿತು, ವಾಗ್ವಾದದ ಸಂದರ್ಭದಲ್ಲಿ ರಾಯಪ್ಪ ನಾಯಿಗಳನ್ನು ಹೊಡೆಯಲು ಕೋಲು ಹುಡುಕಲು ಶುರು ಮಾಡಿದ್ದಾರೆ. ಈ ಸಮಯದಲ್ಲಿ ಕೋಪಗೊಂಡ ವಿನ್ಸೆಂಟ್ ಮತ್ತು ಡೇನಿಯಲ್ ರಾಯಪ್ಪನಿಗೆ ಹೊಡೆದಿದ್ದಾರೆ. ಇದರ ಪರಿಣಾಮ ರಾಯಪ್ಪ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ. ತಾಡಿಕೊಂಬು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ. ಹೆಚ್ಚಿನ ತನಿಖೆಯನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!