Shocking News: ಆಟವಾಡುತ್ತಿದ್ದ 2 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ, ಕಚ್ಚಿ ಕೊಂದ ಬೀದಿ ನಾಯಿಗಳು!

ಗುರುವಾರ ಸಂಜೆ ಆ ಹುಡುಗಿ ಗುಡಿಸಲಿನ ಹಿಂದೆ ಆಟವಾಡುತ್ತಿದ್ದಳು. ಅಷ್ಟರಲ್ಲಿ ನಾಯಿಗಳ ಹಿಂಡು ಬಂದು ಆ ಹುಡುಗಿಯನ್ನು ಪೊದೆಯ ಕಡೆಗೆ ಎಳೆದುಕೊಂಡು ಹೋಗಿ, ಕಚ್ಚಿ ಹಾಕಿವೆ.

Shocking News: ಆಟವಾಡುತ್ತಿದ್ದ 2 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ, ಕಚ್ಚಿ ಕೊಂದ ಬೀದಿ ನಾಯಿಗಳು!
ಬೀದಿ ನಾಯಿಗಳು
Follow us
| Updated By: ಸುಷ್ಮಾ ಚಕ್ರೆ

Updated on: Nov 26, 2022 | 4:00 PM

ನವದೆಹಲಿ: ಹಿಮಾಚಲ ಪ್ರದೇಶದ (Himachal Pradesh) ಹಮೀರ್‌ಪುರದಲ್ಲಿ ಬೀದಿ ನಾಯಿಗಳ (Stray Dogs) ದಾಳಿಗೆ ತುತ್ತಾಗಿ 2 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಡಿಸಲಿನ ಬಳಿ ಆಟವಾಡುತ್ತಿದ್ದ 2 ವರ್ಷದ ಮಗುವಿನ ಮೇಲೆ ಹಲವಾರು ಬೀದಿ ನಾಯಿಗಳು ದಾಳಿ ಮಾಡಿ ಕೊಂದು ಹಾಕಿವೆ. ಗುರುವಾರ ಸಂಜೆಯಿಂದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಆ ಬಾಲಕಿಯ ಮೃತದೇಹವು ಗುಡಿಸಲಿನ ಸಮೀಪವಿರುವ ಪೊದೆಯ ಹತ್ತಿರ ಪತ್ತೆಯಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಮೃತ ಬಾಲಕಿಯ ಪೋಷಕರು ಪಂಜಾಬ್‌ನ ಹೋಶಿಯಾರ್‌ಪುರದ ಭಗತ್ ನಗರದವರಾಗಿದ್ದು, ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಮಗುವಿನ ಶವವು ಹುಲ್ಲಿನ ಗುಡಿಸಲಿನ ಸಮೀಪ ಪತ್ತೆಯಾಗಿದೆ. ಆ ಬಾಲಕಿಯ ಪೋಷಕರು ಮುನ್ಸಿಪಲ್ ಕೌನ್ಸಿಲ್ ಹಮೀರ್‌ಪುರದ ನೈರ್ಮಲ್ಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್

ಗುರುವಾರ ಸಂಜೆ ಆ ಹುಡುಗಿ ಗುಡಿಸಲಿನ ಹಿಂದೆ ಆಟವಾಡುತ್ತಿದ್ದಳು. ಅಷ್ಟರಲ್ಲಿ ನಾಯಿಗಳ ಹಿಂಡು ಬಂದು ಆ ಹುಡುಗಿಯನ್ನು ಪೊದೆಯ ಕಡೆಗೆ ಎಳೆದುಕೊಂಡು ಹೋಗಿ, ಕಚ್ಚಿ ಹಾಕಿವೆ. ಆಗ ಆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಆದರೆ, ನಾಯಿಗಳ ಹಿಂಡು ಜೋರಾಗಿ ಬೊಗಳುತ್ತಿದ್ದುದರಿಂದ ಆಕೆಯ ಕಿರುಚಾಟ ಯಾರಿಗೂ ಕೇಳಿಲ್ಲ. ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ದಿಕ್ಕು ತೋಚದಂತಾದ ಆ ಬಾಲಕಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಆಕೆಯ ಮೈತುಂಬ ಕಚ್ಚಿ ಗಾಯಗೊಳಿಸಿದ ನಾಯಿಗಳು ಆಕೆಯನ್ನು ಸಾಯಿಸಿವೆ.

ರಾತ್ರಿಯಾದರೂ ಆಟವಾಡಲು ಹೊರಗೆ ಹೋಗಿದ್ದ ಮಗಳು ಬಾರದಿದ್ದಾಗ ಆಕೆಯ ಮನೆಯವರು ಎಲ್ಲ ಕಡೆ ಹುಡುಕಿದ್ದಾರೆ. ಅಷ್ಟರಲ್ಲಾಗಲೇ ಕತ್ತಲಾಗಿದ್ದರಿಂದ ಮಗಳು ಎಲ್ಲೂ ಕಂಡಿಲ್ಲ. ಮರುದಿನ ಬೆಳಗ್ಗೆ ಗುಡಿಸಲಿನ ಹಿಂದಿನ ಪೊದೆಯ ಬಳಿ ಹುಡುಕುವಾಗ ಅಲ್ಲಿ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಆ ಬಾಲಕಿಯ ಶವದ ಬಳಿ ನಾಯಿಗಳು ಇದ್ದುದನ್ನು ನೋಡಿದ ಮನೆಯವರಿಗೆ ತಮ್ಮ ಮಗಳನ್ನು ನಾಯಿಯೇ ಕೊಂದು ಹಾಕಿರುವುದು ಗೊತ್ತಾಯಿತು.

ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 5 ಬಾರಿ ಬಸ್ಕಿ ಹೊಡೆಯುವ ಶಿಕ್ಷೆ!

ನಾಯಿಗಳನ್ನು ಓಡಿಸಿದ ಆಕೆಯ ಪೋಷಕರು ಆ ಸ್ಥಳದ ಹತ್ತಿರ ಹೋಗುವಷ್ಟರಲ್ಲಿ ಆ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದಳು. ನಂತರ ಹಮೀರ್‌ಪುರ ಪೊಲೀಸರಿಗೆ ಈ ಬಗ್ಗೆ ತಿಳಿಸಲಾಯಿತು. ಪೊಲೀಸರು ವಿಚಾರಣೆ ಆರಂಭಿಸಿದರು. ಪೊಲೀಸರು ತನಿಖೆ ಆರಂಭಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಭೀಕರ ಘಟನೆ ಆ ಪ್ರದೇಶದಲ್ಲಿ ಆತಂಕ ಹೆಚ್ಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ