AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಟವಾಡುತ್ತಿದ್ದ 2 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ, ಕಚ್ಚಿ ಕೊಂದ ಬೀದಿ ನಾಯಿಗಳು!

ಗುರುವಾರ ಸಂಜೆ ಆ ಹುಡುಗಿ ಗುಡಿಸಲಿನ ಹಿಂದೆ ಆಟವಾಡುತ್ತಿದ್ದಳು. ಅಷ್ಟರಲ್ಲಿ ನಾಯಿಗಳ ಹಿಂಡು ಬಂದು ಆ ಹುಡುಗಿಯನ್ನು ಪೊದೆಯ ಕಡೆಗೆ ಎಳೆದುಕೊಂಡು ಹೋಗಿ, ಕಚ್ಚಿ ಹಾಕಿವೆ.

Shocking News: ಆಟವಾಡುತ್ತಿದ್ದ 2 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ, ಕಚ್ಚಿ ಕೊಂದ ಬೀದಿ ನಾಯಿಗಳು!
ಬೀದಿ ನಾಯಿಗಳು
TV9 Web
| Edited By: |

Updated on: Nov 26, 2022 | 4:00 PM

Share

ನವದೆಹಲಿ: ಹಿಮಾಚಲ ಪ್ರದೇಶದ (Himachal Pradesh) ಹಮೀರ್‌ಪುರದಲ್ಲಿ ಬೀದಿ ನಾಯಿಗಳ (Stray Dogs) ದಾಳಿಗೆ ತುತ್ತಾಗಿ 2 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಡಿಸಲಿನ ಬಳಿ ಆಟವಾಡುತ್ತಿದ್ದ 2 ವರ್ಷದ ಮಗುವಿನ ಮೇಲೆ ಹಲವಾರು ಬೀದಿ ನಾಯಿಗಳು ದಾಳಿ ಮಾಡಿ ಕೊಂದು ಹಾಕಿವೆ. ಗುರುವಾರ ಸಂಜೆಯಿಂದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಆ ಬಾಲಕಿಯ ಮೃತದೇಹವು ಗುಡಿಸಲಿನ ಸಮೀಪವಿರುವ ಪೊದೆಯ ಹತ್ತಿರ ಪತ್ತೆಯಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಮೃತ ಬಾಲಕಿಯ ಪೋಷಕರು ಪಂಜಾಬ್‌ನ ಹೋಶಿಯಾರ್‌ಪುರದ ಭಗತ್ ನಗರದವರಾಗಿದ್ದು, ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಮಗುವಿನ ಶವವು ಹುಲ್ಲಿನ ಗುಡಿಸಲಿನ ಸಮೀಪ ಪತ್ತೆಯಾಗಿದೆ. ಆ ಬಾಲಕಿಯ ಪೋಷಕರು ಮುನ್ಸಿಪಲ್ ಕೌನ್ಸಿಲ್ ಹಮೀರ್‌ಪುರದ ನೈರ್ಮಲ್ಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್

ಗುರುವಾರ ಸಂಜೆ ಆ ಹುಡುಗಿ ಗುಡಿಸಲಿನ ಹಿಂದೆ ಆಟವಾಡುತ್ತಿದ್ದಳು. ಅಷ್ಟರಲ್ಲಿ ನಾಯಿಗಳ ಹಿಂಡು ಬಂದು ಆ ಹುಡುಗಿಯನ್ನು ಪೊದೆಯ ಕಡೆಗೆ ಎಳೆದುಕೊಂಡು ಹೋಗಿ, ಕಚ್ಚಿ ಹಾಕಿವೆ. ಆಗ ಆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಆದರೆ, ನಾಯಿಗಳ ಹಿಂಡು ಜೋರಾಗಿ ಬೊಗಳುತ್ತಿದ್ದುದರಿಂದ ಆಕೆಯ ಕಿರುಚಾಟ ಯಾರಿಗೂ ಕೇಳಿಲ್ಲ. ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ದಿಕ್ಕು ತೋಚದಂತಾದ ಆ ಬಾಲಕಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಆಕೆಯ ಮೈತುಂಬ ಕಚ್ಚಿ ಗಾಯಗೊಳಿಸಿದ ನಾಯಿಗಳು ಆಕೆಯನ್ನು ಸಾಯಿಸಿವೆ.

ರಾತ್ರಿಯಾದರೂ ಆಟವಾಡಲು ಹೊರಗೆ ಹೋಗಿದ್ದ ಮಗಳು ಬಾರದಿದ್ದಾಗ ಆಕೆಯ ಮನೆಯವರು ಎಲ್ಲ ಕಡೆ ಹುಡುಕಿದ್ದಾರೆ. ಅಷ್ಟರಲ್ಲಾಗಲೇ ಕತ್ತಲಾಗಿದ್ದರಿಂದ ಮಗಳು ಎಲ್ಲೂ ಕಂಡಿಲ್ಲ. ಮರುದಿನ ಬೆಳಗ್ಗೆ ಗುಡಿಸಲಿನ ಹಿಂದಿನ ಪೊದೆಯ ಬಳಿ ಹುಡುಕುವಾಗ ಅಲ್ಲಿ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಆ ಬಾಲಕಿಯ ಶವದ ಬಳಿ ನಾಯಿಗಳು ಇದ್ದುದನ್ನು ನೋಡಿದ ಮನೆಯವರಿಗೆ ತಮ್ಮ ಮಗಳನ್ನು ನಾಯಿಯೇ ಕೊಂದು ಹಾಕಿರುವುದು ಗೊತ್ತಾಯಿತು.

ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 5 ಬಾರಿ ಬಸ್ಕಿ ಹೊಡೆಯುವ ಶಿಕ್ಷೆ!

ನಾಯಿಗಳನ್ನು ಓಡಿಸಿದ ಆಕೆಯ ಪೋಷಕರು ಆ ಸ್ಥಳದ ಹತ್ತಿರ ಹೋಗುವಷ್ಟರಲ್ಲಿ ಆ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದಳು. ನಂತರ ಹಮೀರ್‌ಪುರ ಪೊಲೀಸರಿಗೆ ಈ ಬಗ್ಗೆ ತಿಳಿಸಲಾಯಿತು. ಪೊಲೀಸರು ವಿಚಾರಣೆ ಆರಂಭಿಸಿದರು. ಪೊಲೀಸರು ತನಿಖೆ ಆರಂಭಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಭೀಕರ ಘಟನೆ ಆ ಪ್ರದೇಶದಲ್ಲಿ ಆತಂಕ ಹೆಚ್ಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ