AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೆಂಡತಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಆಕೆಯ ಕೈ ಕತ್ತರಿಸಿದ ಗಂಡ!; ಹೀಗೂ ಇರ್ತಾರಾ?

ತನ್ನ ಹೆಂಡತಿ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ ತಪ್ಪಿಗಾಗಿ ಆಕೆಯ ಗಂಡ ಆಕೆ ಮಲಗಿದ್ದಾಗ ಕೈಯನ್ನೇ ಕತ್ತರಿಸಿದ್ದಾನೆ. ಇದಕ್ಕೆ ಕಾರಣವೇನೆಂದು ತಿಳಿದರೆ ನಿಮಗೆ ಆಶ್ಚರ್ಯವಾಗುವುದು ಖಂಡಿತ.

Shocking News: ಹೆಂಡತಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಆಕೆಯ ಕೈ ಕತ್ತರಿಸಿದ ಗಂಡ!; ಹೀಗೂ ಇರ್ತಾರಾ?
ಗಂಡನಿಂದ ಹಲ್ಲೆಗೊಳಗಾದ ಮಹಿಳೆImage Credit source: Zee News
TV9 Web
| Edited By: |

Updated on:Jun 10, 2022 | 1:50 PM

Share

ಸರ್ಕಾರಿ ಕೆಲಸ ಸಿಕ್ಕರೆ ಲೈಫ್ ಸೆಟಲ್ ಆಗುತ್ತದೆ ಎಂಬ ಅಭಿಪ್ರಾಯ ಎಲ್ಲರದು. ಸರ್ಕಾರಿ ಉದ್ಯೋಗ ಸಿಗುತ್ತದೆ ಎಂದರೆ ಯಾರು ತಾನೇ ಬೇಡ ಎನ್ನುತ್ತಾರೆ? ಆದರೆ, ಪಶ್ಚಿಮ ಬಂಗಾಳದ (West Bengal) ವ್ಯಕ್ತಿಯೊಬ್ಬ ತನ್ನ ಹೆಂಡತಿ ಸರ್ಕಾರಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾಳೆ ಎಂದು ತಿಳಿದು ಕೋಪಗೊಂಡು, ಆಕೆಯ ಬಲಗೈಯನ್ನೇ ಕತ್ತರಿಸಿದ್ದಾನೆ! ಇದಕ್ಕೆ ಕಾರಣವೇನೆಂದು ಗೊತ್ತಾದರೆ ನೀವು ಆಶ್ಚರ್ಯ ಪಡುತ್ತೀರ.

ಕೆಲವು ದಿನಗಳ ಹಿಂದೆ ಪಶ್ಚಿಮ ಬಂಗಾಳದ ಪೂರ್ವ ಬರ್ದವಾನ್​ನ ಮಹಿಳೆ ಸರ್ಕಾರಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರಿಂದ ಬಹಳ ಖುಷಿ ಪಟ್ಟಿದ್ದಳು. ಆಕೆ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್​ ಆಗಿ ಸೆಲೆಕ್ಟ್​ ಆಗಲು ಪರೀಕ್ಷೆ ಬರೆದಿದ್ದಳು. ಪೂರ್ವ ಬರ್ದ್ವಾನ್‌ನ ಕೇತುಗ್ರಾಮ್‌ನ ನಿವಾಸಿ ರೇಣು ಖಾತುನ್ ತನ್ನ ಹೊಸ ಉದ್ಯೋಗದಿಂದ ಬಹಳ ಸಂತೋಷಪಟ್ಟಿದ್ದರು. ಆದರೆ, ಆಕೆಯ ಖುಷಿ ಒಂದೇ ದಿನದಲ್ಲಿ ಕೊನೆಯಾಯಿತು. ಆ ರಾತ್ರಿ ಆಕೆ ಮಲಗಿದ್ದಾಗ ಆಕೆಯ ಗಂಡ ಆಕೆಯ ಬಲಗೈಯನ್ನು ಕತ್ತರಿಸಿದ್ದಾನೆ.

ತನ್ನ ಹೆಂಡತಿ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ ತಪ್ಪಿಗಾಗಿ ಆಕೆಯ ಗಂಡ ಆಕೆ ಮಲಗಿದ್ದಾಗ ಕೈಯನ್ನೇ ಕತ್ತರಿಸಿದ್ದಾನೆ. ಈ ರೀತಿ ಮಾಡಿದ ಆರೋಪಿಯನ್ನು ಶೇರ್ ಮೊಹಮ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಆತ ದಿನಸಿ ಅಂಗಡಿ ನಡೆಸುತ್ತಿದ್ದು, ಆತನಿಗೆ ತನ್ನ ಹೆಂಡತಿ ರೇಣು ಖಾತುನ್ ಸರ್ಕಾರಿ ಉದ್ಯೋಗ ಪಡೆದರೆ ತನ್ನನ್ನು ಬಿಟ್ಟು ಹೋಗುತ್ತಾಳೆ ಎಂಬ ಭಯವಿತ್ತು. ಅದರಿಂದಲೇ ಆಕೆಯ ಕೈ ಕತ್ತರಿಸಿದ್ದಾನೆ.

ಇದನ್ನೂ ಓದಿ
Image
Viral Video: ಆ್ಯಂಬುಲೆನ್ಸ್​ ಇಲ್ಲದೆ 4 ವರ್ಷದ ಮಗಳ ಹೆಣವನ್ನು ಹೊತ್ತು ಬಸ್​ನಲ್ಲಿ ಹೋದ ತಂದೆ!
Image
Trending: ಬೆರಳುಗಳಲ್ಲಿ 12 ಇಂಚಿನ ಉಗುರುಗಳು! ಈಕೆಯ ದೈನಂದಿನ ಚಟುವಟಿಕೆಗಳು ಹೇಗಿದೆ ಗೊತ್ತಾ?
Image
Crime News: ಕುಡುಕ ಪತಿಯ ಕಾಟ ತಾಳಲಾರದೆ ಕತ್ತು ಹಿಚುಕಿ ಪತ್ನಿಯಿಂದಲೇ ಪತಿಯ ಕೊಲೆ!
Image
Viral Video: ಬೋರ್​ವೆಲ್​ಗೆ ಬಿದ್ದ 18 ತಿಂಗಳ ಮಗುವನ್ನು ಕಾಪಾಡಿದ ಸೈನಿಕರು; ವಿಡಿಯೋ ವೈರಲ್

ಇದನ್ನೂ ಓದಿ: Shocking News: ಪಬ್​ಜಿ ಆಡಬೇಡ ಎಂದ ಅಮ್ಮನನ್ನು ಕೊಂದ ಬಾಲಕ; ರೂಂ ಫ್ರೆಷನರ್​​ ಹಾಕಿ 2 ದಿನ ಶವ ಮುಚ್ಚಿಟ್ಟ!

ಆಕೆ ಶನಿವಾರ ರಾತ್ರಿ ಕೇತುಗ್ರಾಮ್‌ನ ಚಿನಿಶ್‌ಪುರದಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಳು. ಆ ವೇಳೆ ಆರೋಪಿ ಶೇರ್ ಮೊಹಮ್ಮದ್ ಶೇಖ್ ತನ್ನ ಸ್ನೇಹಿತರೊಂದಿಗೆ ಮನೆಗೆ ನುಗ್ಗಿದ್ದ ಎನ್ನಲಾಗಿದೆ. ರೇಣು ತಡರಾತ್ರಿ ರೂಮಿನಲ್ಲಿ ಮಲಗಿದ್ದಳು. ಆ ಸಮಯದಲ್ಲಿ, ಅವಳ ಮುಖವನ್ನು ದಿಂಬಿನಿಂದ ಮುಚ್ಚಿದ ಆಕೆಯ ಗಂಡ ಬಲಗೈಯನ್ನು ಹರಿತವಾದ ಆಯುಧದದಿಂದ ಕೊಯ್ದಿದ್ದಾನೆ ಎನ್ನಲಾಗಿದೆ. ಕೊನೆಗೆ ಆಕೆಯ ಗಂಡನೇ ಆಕೆಯನ್ನು ಕತ್ವಾ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದ. ನಂತರ ಆ ಮಹಿಳೆಯನ್ನು ದುರ್ಗಾಪುರದ ನರ್ಸಿಂಗ್ ಹೋಂಗೆ ಸ್ಥಳಾಂತರಿಸಲಾಯಿತು.

ಅಲ್ಲಿ ವೈದ್ಯರು ಆಕೆಯ ತುಂಡಾದ ಕೈಯನ್ನು ಮತ್ತೆ ಸೇರಿಸುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಆದರೆ, ಆ ಕೈಯನ್ನು ಮತ್ತೆ ಜೋಡಿಸುವುದು ಸುಲಭವಲ್ಲ ಎನ್ನಲಾಗಿದೆ. ಬಲಗೈ ತುಂಡಾದರೆ ಆಕೆಗೆ ಸರ್ಕಾರಿ ನರ್ಸ್​ ಕೆಲಸ ಸಿಗುವುದಿಲ್ಲ ಎಂದು ಈ ರೀತಿ ಮಾಡಲಾಗಿದೆ ಎಂದು ಹೇಳಲಾಗಿದೆ. ರೇಣುಗೆ ಸರ್ಕಾರಿ ನೌಕರಿ ಸಿಗುತ್ತಿದ್ದಂತೆ ಆಕೆ ನಿನ್ನನ್ನು ಬಿಟ್ಟು ಹೋಗುತ್ತಾಳೆ ಎಂದು ಆತನ ಸ್ನೇಹಿತರು ರೇಣುವಿನ ಗಂಡನ ತಲೆಯಲ್ಲಿ ತುಂಬಿದ್ದರು. ತನ್ನ ಹೆಂಡತಿ ತನ್ನನ್ನು ತೊರೆಯುತ್ತಾಳೆಂಬ ಕಾರಣಕ್ಕೆ ಆಕೆಯ ಕೈ ಕತ್ತರಿಸಲಾಗಿದೆ ಎಂದು ಆಕೆಯ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ. ಇದೀಗ ರೇಣು ತನ್ನ ಎಡಗೈನಲ್ಲಿ ಬರೆಯುವುದು, ತನ್ನ ಕೆಲಸ ಮಾಡಿಕೊಳ್ಳುವುದನ್ನು ಕಲಿಯುತ್ತಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:48 pm, Fri, 10 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?